Webdunia - Bharat's app for daily news and videos

Install App

ಧರ್ಮಸ್ಥಳಕ್ಕೆ ಆಗಮಿಸಿದ ಪ್ರಧಾನಿ: ಮಂಜುನಾಥ ದೇವರ ದರ್ಶನ ಪಡೆಯುತ್ತಿರುವ ಮೋದಿ

Webdunia
ಭಾನುವಾರ, 29 ಅಕ್ಟೋಬರ್ 2017 (11:36 IST)
ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ವಿಶೇಷ ವಿಮಾನದ ಮೂಲಕ ಮಂಗಳೂರಿನ ಬಜ್ಪೆ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ.

ಪ್ರಧಾನಿ ಮೋದಿಯವರಿಗೆ ಕೇಂದ್ರ ಸಚಿವರಾದ ಅನಂತ್ ಕುಮಾರ್, ಸದಾನಂದ ಗೌಡ ರೇಷ್ಮೆ ಶಾಲು, ಏಲಕ್ಕಿ ಮಾಲೆ, ಸಾಂಪ್ರದಾಯಿಕ ಮೈಸೂರು ಪೇಠ ತೊಡಿಸಿ ಸ್ವಾಗತಿಸಿದರು. ಇದೇವೇಳೆ ಸರ್ಕಾರದ ಪರವಾಗಿ ಸಚಿವ ಯು.ಟಿ.ಖಾದರ್, ಮಂಗಳೂರು ಮೇಯರ್ ಕವಿತಾ ಸನಿಲ್, ಗುಲಾಬಿ ಹೂ ನೀಡಿ ಸ್ವಾಗತ ಕೋರಿದರು.

ಮಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದ ಮೋದಿಯವರಿಗೆ ದೇವಾಲಯದ ಅರ್ಚಕರು ಪೂರ್ಣಕುಂಭ ಸ್ವಾಗತ ನೀಡಿದರು. ಇದೇವೇಳೆ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಆತ್ಮೀಯವಾಗಿ ಬರಮಾಡಿಕೊಂಡರು. ನಂತರ ಸಾಂಪ್ರದಾಯಿಕ ಉಡುಗೆಯನ್ನು ಪ್ರಧಾನಿಯವರಿಗೆ ನೀಡಲಾಯಿತು.

ಸದ್ಯ ದೇವಾಲಯದ ಪ್ರಾಂಗಣ ಪ್ರವೇಶಿಸಿರುವ ಪ್ರಧಾನಿ, ದೇವರ ಪೂಜೆಯಲ್ಲಿ ತಲ್ಲೀನರಾಗಿದ್ದಾರೆ. ಕಾರ್ತಿಕ ಮಾಸದಲ್ಲಿ ಶಿವನ ದರ್ಶನ ಅತ್ಯಂತ ಪ್ರಾಮುಖ್ಯತೆ ಪಡೆದಿದೆ. ಈ ನಿಟ್ಟಿನಲ್ಲಿ ಧರ್ಮಸ್ಥಳದಲ್ಲಿ ನಡೆಯುವ ಮಹಾಪೂಜೆಯ ಸಂದರ್ಭಕ್ಕೆ ಪ್ರಧಾನಿ ಆಗಮಿಸಿದ್ದಾರೆ. ಈ ಮೂಲಕ ಧರ್ಮಸ್ಥಳಕ್ಕೆ ಮೊದಲು ಭೇಟಿ ನೀಡಿದ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆ ಪಾತ್ರರಾದರು.

ಮೋದಿಯವರು ದೇವಾಲಯದ ಆವರಣ ಪ್ರವೇಶಿಸುತ್ತಿದ್ದಂತೆ, ಕಿಕ್ಕಿರಿದು ನೆರಿದಿದ್ದ ಜನರತ್ತ ಕೈ ಬೀಸಿದರು. ಈ ಸಂದರ್ಭದಲ್ಲಿ ಮೋದಿ ಮೋದಿ ಘೋಷ ಮೊಳಗಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments