Select Your Language

Notifications

webdunia
webdunia
webdunia
webdunia

ಜನತೆಗೆ ಹೊಸ ವರ್ಷದ ಶುಭಾಶಯ ತಿಳಿಸಿದ ಪಿಎಂ, ಸಿಎಂ

ಜನತೆಗೆ ಹೊಸ ವರ್ಷದ ಶುಭಾಶಯ ತಿಳಿಸಿದ ಪಿಎಂ, ಸಿಎಂ
ಬೆಂಗಳೂರು , ಬುಧವಾರ, 1 ಜನವರಿ 2020 (09:50 IST)
ಬೆಂಗಳೂರು : ಹೊಸ ವರ್ಷದ ಹಿನ್ನಲೆ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಸಿಎಂ ಯಡಿಯೂರಪ್ಪ ಅವರು ಟ್ವೀಟರ್ ನಲ್ಲಿ ಶುಭಾಶಯ ತಿಳಿಸಿದ್ದಾರೆ.



ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ನವ ಭಾರತ ನಿರ್ಮಾಣಕ್ಕೆ 130 ಕೋಟಿ ಜನ ಕೈಜೋಡಿಸಬೇಕು. ನೀವು ಕೈಜೋಡಿಸುತ್ತೀರಿ ಎಂಬ ಅದಮ್ಯ ವಿಶ್ವಾಸವಿದೆ. ಎಲ್ಲರಿಗೂ ಹೊಸ ವರ್ಷದ ಹಾರ್ದಿಕ ಶುಭಾಶಯಗಳು ಎಂದು ತಿಳಿಸಿದ್ದಾರೆ.


ಹಾಗೇ ಸಿಎಂ ಯಡಿಯೂರಪ್ಪ ಅವರು ಟ್ವೀಟ್ ಮಾಡಿ, 2020 ಸುಖ, ಸಮೃದ್ಧಿ, ನೆಮ್ಮದಿಯ ವರ್ಷವಾಗಲಿ. ರಾಜ್ಯದಾದ್ಯಂತ ಸಂಭ್ರಮ ನೆಲೆಸಲಿ. ರಾಜ್ಯವನ್ನು ಅಭಿವೃದ್ಧಿಯ ಪಥದಲ್ಲಿ ಕರೆದೊಯ್ಯುವ ನಮ್ಮ ಸಂಕಲ್ಪಕ್ಕೆ ಆ ಭಗವಂತ ಮತ್ತಷ್ಟು ಬಲ ನೀಡಲಿ. ಎಲ್ಲರಿಗೂ ಹೊಸ ವರ್ಷದ ಹಾರ್ದಿಕ ಶುಭಾಶಯಗಳು ಎಂದು ತಿಳಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಎದೆ ಹಾಲಿನ ಬ್ಯಾಂಕ್ ಸ್ಥಾಪಿಸಲು ಮುಂದಾದ ಬಾಂಗ್ಲಾದೇಶ ಈ ಯೋಜನೆಯನ್ನು ಕೈಬಿಟ್ಟಿದ್ದೇಕೆ ಗೊತ್ತಾ?