Webdunia - Bharat's app for daily news and videos

Install App

ಪಿಎಂ-ಕಿಸಾನ್ ಯೋಜನೆ: ರೈತರು ಆರ್ಥಿಕ ನೆರವಿಗೆ ಇದನ್ನು ಮಾಡಲೇಬೇಕು

Webdunia
ಭಾನುವಾರ, 23 ಜೂನ್ 2019 (19:33 IST)
ಭಾರತ ಸರ್ಕಾರದ “ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಫಲಾನುಭವಿಗಳಿಂದಲೂ  ತ್ವರಿತಗತಿಯಲ್ಲಿ ಸ್ವಯಂ ಘೋಷಣೆ ಪಡೆಯಬೇಕು. ಹೀಗಂತ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.

ಕಲಬುರಗಿ ಜಿಲ್ಲೆಯಲ್ಲಿ ಒಟ್ಟು 4,21,715 ರೈತ ಫಲಾನುಭವಿಗಳನ್ನು ಗುರುತಿಸಲಾಗಿದೆ. ಇದುವರೆಗೆ ಕೇವಲ 1,40,000 ಫಲಾನುಭವಿಗಳಿಂದ ಮಾತ್ರ ಸ್ವಯಂ ಘೋಷಣೆ ಬಂದಿವೆ. ಉಳಿದ 2.81 ಲಕ್ಷ  ಫಲಾನುಭವಿಗಳಿಂದಲೂ  ತ್ವರಿತಗತಿಯಲ್ಲಿ ಸ್ವಯಂ ಘೋಷಣೆ ಪಡೆಯಬೇಕು ಎಂದು ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಕಂದಾಯ, ಕೃಷಿ, ತೋಟಗಾರಿಕೆ ಮತ್ತು ಆರ್.ಡಿ.ಪಿ.ಆರ್ ಇಲಾಖೆಯ ಅಧಿಕಾರಿಗಳ ಸಭೆ ನಡೆಸಿದ ಅವರು, ಸ್ವಯಂ ಘೋಷಣೆ ಸಲ್ಲಿಸಿದವರ ಪೈಕಿ ಇದೂವರೆಗೆ 50,000 ಫಲಾನುಭವಿಗಳ ಡಾಟಾ ಎಂಟ್ರಿ ಅಪಲೋಡ್ ಮಾಡಲಾಗಿದೆ. ಉಳಿದ ಅಪಲೋಡ್ ಕಾರ್ಯ ಶೀಘ್ರವೆ ಮಾಡಿ ಮುಗಿಸಬೇಕು ಎಂದರು.

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಪ್ರತಿ ರೈತರ ಕುಟುಂಬಕ್ಕೆ 3 ಕಂತುಗಳಲ್ಲಿ ವಾರ್ಷಿಕವಾಗಿ ಒಟ್ಟು 6,000 ರೂ. ಗಳ ಆರ್ಥಿಕ ನೆರವನ್ನು ಕೇಂದ್ರ ಸರ್ಕಾರವು ಆಯಾ ರೈತರ  ಬ್ಯಾಂಕ್ ಖಾತೆಗಳಿಗೆ ನೇರವಾಗಿ ಜಮಾ ಮಾಡಲಿದೆ ಎಂದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments