Webdunia - Bharat's app for daily news and videos

Install App

ದೇವೇಗೌಡರಿಗೆ ಪ್ರಧಾನಿ ನರೇಂದ್ರ ಮೋದಿಯಿಂದ ಬುಲಾವ್

Webdunia
ಶನಿವಾರ, 15 ಜುಲೈ 2017 (13:21 IST)
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿಗೆ ನವದೆಹಲಿಗೆ ಬರುವಂತೆ ಪ್ರಧಾನಿ ಮೋದಿ ಆಹ್ವಾನ ನೀಡಿದ್ದಾರೆ.
 
ಇಂದು ಬೆಳಿಗ್ಗೆ ಪ್ರಧಾನಿ ಮೋದಿ ಸೂಚನೆ ಮೇರೆಗೆ ಕೇಂದ್ರ ವಿದೇಶಾಂಗ ಖಾತೆ ಸಚಿವ ಸುಷ್ಮಾ ಸ್ವರಾಜ್ ಮಾಜಿ ಪ್ರಧಾನಿ ದೇವೇಗೌಡರಿಗೆ ಕರೆ ಮಾಡಿ, ಕನ್ನಡದಲ್ಲಿಯೇ ಯೋಗಕ್ಷೇಮ ವಿಚಾರಿಸಿ, ನಿಮ್ಮ ಸಲಹೆ ಅಗತ್ಯವಾಗಿದ್ದರಿಂದ ಪ್ರಧಾನಿ ಮೋದಿಯವರು ಆಹ್ವಾನವನ್ನು ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಚೀನಾ, ಭಾರತ ಗಡಿಯಲ್ಲಿ ಎದುರಾಗಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಲು ದೇವೇಗೌಡರಿಗೆ ಪ್ರಧಾನಿ ಮೋದಿ ಆಹ್ವಾನ ನೀಡಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
 
ಮಾಜಿ ಪ್ರಧಾನಿ ದೇವೇಗೌಡರು ಇಂದು ಪ್ರಧಾನಿ ಮೋದಿ ಆಹ್ವಾನದ ಮೇರೆಗೆ ನವದೆಹಲಿಗೆ ತೆರಳುತ್ತಿದ್ದು ಸಂಜೆ 5.30 ಗಂಟೆಗೆ ಜವಾಹರ್ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಧಾನಮಂತ್ರಿ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments