Webdunia - Bharat's app for daily news and videos

Install App

ಕೊನೆಗೂ ರೈತರಿಗೆ ತಲೆ ಬಾಗಿದ ಕೇಂದ್ರ ಸರ್ಕಾರ

Webdunia
ಶುಕ್ರವಾರ, 19 ನವೆಂಬರ್ 2021 (14:51 IST)
ಗುರುನಾನಕರ ಜಯಂತಿ ದಿನದಂದು ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡುತ್ತಿದ್ದ ವೇಳೆ, ಉತ್ತರಪ್ರದೇಶ ಹಾಗೂ ಪಂಜಾಬ್ ಸಾರ್ವತ್ರಿಕ ಚುನಾವಣೆಗೂ ಮುನ್ನ ಈ ಮಹತ್ವದ ವಿಷಯ ತಿಳಿಸಿದ್ದಾರೆ.
 
ಈ ತಿಂಗಳ ಅಂತ್ಯದಲ್ಲಿ ಸಂಸತ್ ಅಧಿವೇಶನ ನಡೆಯಲಿದ್ದು, ಈ ಮೂರು ಕೃಷಿ ಕಾಯ್ದೆ (Three Form Laws)ಗಳನ್ನು ಹಿಂಪಡೆಯಲು ಅಗತ್ಯ ಕ್ರಮ ಕೈಗೊಳ್ಳುತ್ತೇವೆ. ಇಷ್ಟು ದಿನಗಳ ಕಾಲ ಪ್ರತಿಭಟನೆಯಲ್ಲಿ ನಿರತರಾಗಿರುವ ರೈತರು ಗುರುನಾನಕರ ಜಯಂತಿ (Gurunanak Jayanthi) ಯ ಪವಿತ್ರ ದಿನದಂದು ತಮ್ಮ ಮನೆಗಳಿಗೆ, ವ್ಯವಸಾಯ ಮಾಡುವ ಭೂಮಿಗೆ ತೆರಳಿ ಹೊಸ ಜೀವನ ಆರಂಭಿಸಿ” ಎಂದು ಪ್ರಧಾನಿ ನರೇಂದ್ರ ಮೋದಿ ತಮ್ಮ ಭಾಷಣದಲ್ಲಿ ಮನವಿ ಮಾಡಿದ್ದಾರೆ.ಕೇಂದ್ರ ಸರ್ಕಾರ ಈ ಹಿಂದೆ ಜಾರಿಗೆ ತಂದ ವಿವಾದಿತ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ಪಂಜಾಬ್, ಹರ್ಯಾಣ, ರಾಜಸ್ತಾನ ಹಾಗೂ ಉತ್ತರಪ್ರದೇಶ ರಾಜ್ಯಗಳ ರೈತರು ಕಳೆದ ವರ್ಷ ನವೆಂಬರ್ ನಿಂದ ನವದೆಹಲಿಯ ಹೊರಗೆ ನಿರಂತರ ಪ್ರತಿಭಟನೆ ಕೈಗೊಂಡಿದ್ದರು. ಉತ್ತರ ಭಾರತ ಹಲವು ರಾಜ್ಯಗಳಲ್ಲಿ ಇದೇ ಕಾರಣಕ್ಕೆ ಬಿಜೆಪಿ ಪಕ್ಷವು ರೈತರ ಕೆಂಗಣ್ಣಿಗೆ ಗುರಿಯಾಗಿತ್ತು. ಮುಂದೆ ಸಾರ್ವತ್ರಿಕ ವಿವಿಧ ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ (Assembly Election) ಹಾಗೂ 2024ರಲ್ಲಿ ರಾಷ್ಟ್ರದಲ್ಲಿ ಲೋಕಸಭೆ ಚುನಾವಣೆ (Lokasabha Election) ಹಿನ್ನಲೆಯಲ್ಲಿ ಅನಿವಾರ್ಯವಾಗಿ ರೈತರ ಒತ್ತಡಕ್ಕೆ ಮಣಿದು ಕಾಯ್ದೆ ಹಿಂಪಡೆಯುವ ನಿರ್ಧಾರಕ್ಕೆ ಬಂದಿದ್ದಾಗಿ ವಿಶ್ಲೇಷಿಸಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂದಿನಿಂದ ರಾಜ್ಯದಲ್ಲಿ ಕೋವಿಡ್​ ಟೆಸ್ಟಿಂಗ್ ಲ್ಯಾಬ್​ಗಳು ಓಪನ್: ಜನನಿಬಿಡ ಪ್ರದೇಶದಲ್ಲಿ ಮಾಸ್ಕ್‌ ಧರಿಸಲು ಸಲಹೆ

ಆಪರೇಷನ್ ಸಿಂಧೂರ್‌ನಿಂದ ಪಾಕ್‌ ಗಡಿಯಲ್ಲಿ ಪ್ರತಿ ಹೆಜ್ಜೆಯಿಡುವಾಗಲೂ ಯೋಚಿಸುವಂತೆ ಮಾಡಿದೆ: ಶಶಿ ತರೂರ್‌

Karnataka Weather: ವಾರದ ಮಳೆಗೆಯೇ ಸುಸ್ತಾದ ದಕ್ಷಿಣ ಕನ್ನಡ ಜನತೆ

Dehli Rain: ವಿಮಾನ ಹಾರಾಟಗಳಲ್ಲೂ ವ್ಯತ್ಯಯ ಸಾಧ್ಯತೆ, ಪ್ರಯಾಣಿಕರಿಗೆ ಹೊಸ ಸಂದೇಶ

Covid 19: ಕೋವಿಡ್‌ಗೆ ರಾಜ್ಯದಲ್ಲಿ ಮೊದಲ ಬಲಿ, ಹೆಚ್ಚಿದ ಆತಂಕ

ಮುಂದಿನ ಸುದ್ದಿ
Show comments