Webdunia - Bharat's app for daily news and videos

Install App

ಮಂಡ್ಯದ ಮುಸ್ಲಿಂ ವಿದ್ಯಾರ್ಥಿನಿಯ ಓದಿಗೆ ಸಹಾಯ ಮಾಡಿದ ಪ್ರಧಾನಿ ಮೋದಿ

Webdunia
ಗುರುವಾರ, 23 ಮಾರ್ಚ್ 2017 (10:40 IST)
ನವದೆಹಲಿ: ಪ್ರಧಾನಿ ಮೋದಿ ಆಗಾಗ ಕಷ್ಟದಲ್ಲಿರುವ ಜನ ಸಾಮಾನ್ಯರಿಗೆ ಸಹಾಯ ಮಾಡಿ ಸುದ್ದಿಯಾಗುತ್ತಾರೆ. ಮತ್ತೊಮ್ಮೆ ಅಂತಹದ್ದೇ ಕೆಲಸ ಮಾಡಿರುವ ಪ್ರಧಾನಿ ಮೋದಿ, ಮುಸ್ಲಿಂ ವಿದ್ಯಾರ್ಥಿನಿಯೊಬ್ಬಳ ವಿದ್ಯಾಭ್ಯಾಸಕ್ಕೆ ನೆರವಾಗಿದ್ದಾರೆ.

 

ಮಂಡ್ಯ ಜಿಲ್ಲೆಯ ಎಂಬಿಎ ವಿದ್ಯಾರ್ಥಿನಿ ಬಿ ಬಿ ಸಾರಾ ಕಾಲೇಜು ಶುಲ್ಕ ಕಟ್ಟಲು ಕಷ್ಟಪಡುತ್ತಿದ್ದರು. ಯಾವುದೇ ಬ್ಯಾಂಕ್ ನಲ್ಲೂ ಅವರಿಗೆ ಸಾಲ ಸಿಗಲಿಲ್ಲ. ತನ್ನ ಅಸಹಾಯಕತೆಯನ್ನು ಸಾರಾ ನೇರವಾಗಿ ಪ್ರಧಾನಿ ಮೋದಿಗೆ ಪತ್ರ ಬರೆದು ತಿಳಿಸಿದ್ದಾಳೆ.

 
ಇದಕ್ಕೆ ಕೇವಲ 10 ದಿನಗಳೊಳಗೆ ಪ್ರತಿಕ್ರಿಯಿಸಿದ ಪ್ರಧಾನಿ ಕಚೇರಿ, ಮೋದಿ ಸಹಿ ಸಮೇತ ಇರುವ ಪತ್ರವೊಂದನ್ನು ಕಳುಹಿಸಿದ್ದು, ಆಕೆಗೆ ವಿದ್ಯಾಭ್ಯಾಸ ಸಾಲ ಒದಗಿಸಲು ಬ್ಯಾಂಕ್ ಗಳಿಗೆ ಸೂಚನೆ ನೀಡಿದ್ದಾರೆ. ಆದರೂ ಮೋದಿ ಪತ್ರವನ್ನು ನೋಡಿಯೂ ಕೆಲವು ಬ್ಯಾಂಕ್ ಗಳು ಸಾಲ ಕೊಡಲು ಒಪ್ಪಲಿಲ್ಲ. ಕೊನೆಗೆ ವಿಜಯಾ ಬ್ಯಾಂಕ್ ನಿಂದ ಸಾಲ ಸಿಕ್ಕಿ ಸಾರಾ ಶುಲ್ಕ ಕಟ್ಟಲು ಸಾಧ್ಯವಾಯಿತು.

 
ಇದಕ್ಕಾಗಿ ಆಕೆ ಪ್ರಧಾನಿ ಮೋದಿಗೆ ಕೃತಜ್ಞತೆ ಸಲ್ಲಿಸಿದ್ದಾಳೆ. ಪ್ರಧಾನಿ ಇಷ್ಟು ಬೇಗ ನನ್ನ ಸಮಸ್ಯೆಗೆ ಸ್ಪಂದಿಸುತ್ತಾರೆ ಎಂದು ಅಂದುಕೊಂಡಿರಲಿಲ್ಲ ಎಂದು ಧನ್ಯವಾದ ಸಲ್ಲಿಸಿದ್ದಾಳೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಂಡಮಾರುತ ಎಫೆಕ್ಟ್‌, ದೇಶದ ಈ ಭಾಗದಲ್ಲಿ ಆ.7ರ ವರೆಗೆ ಭಾರೀ ಮಳೆ

ಶ್ರೀನಗರ ವಿಮಾನ ನಿಲ್ದಾಣದಲ್ಲಿ ಸ್ಪೈಸ್ ಜೆಟ್‌ ಸಿಬ್ಬಂದಿಗೆ ಹಿಗ್ಗಾಮುಗ್ಗಾ ಥಳಿಸಿದ ಸೇನಾಧಿಕಾರಿ, ಕಾರಣ ಇಲ್ಲಿದೆ

ಭಾರೀ ರಾಜಕೀಯ ಬೆಳವಣಿಗೆ ಬೆನ್ನಲ್ಲೇ ರಾಷ್ಟ್ರಪತಿಯನ್ನು ಭೇಟಿಯಾದ ಪ್ರಧಾನಿ ಮೋದಿ

ಉತ್ತರಪ್ರದೇಶ: ಪೃಥ್ವಿನಾಥ ದೇವಸ್ಥಾನಕ್ಕೆ ಹೊರಟು ಮಸಣ ಸೇರಿದ 11 ಮಂದಿ

ಮೀರತ್‌ ಭಯಾನಕ ಅಪರಾಧ: 7 ತಿಂಗಳ ಗರ್ಭಿಣಿಯನ್ನು ಚಾಕುವಿನಿಂದ ಇರಿದು ಕೊಂದ ಪತಿ

ಮುಂದಿನ ಸುದ್ದಿ
Show comments