Select Your Language

Notifications

webdunia
webdunia
webdunia
webdunia

ಪ್ರಧಾನಿ ಮೋದಿ ಜನರನ್ನು ಪ್ರಚೋದಿಸುತ್ತಿದ್ದು, ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಮಲ್ಲಿಕಾರ್ಜುನ ಖರ್ಗೆ

ಪ್ರಧಾನಿ ಮೋದಿ ಜನರನ್ನು ಪ್ರಚೋದಿಸುತ್ತಿದ್ದು, ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಮಲ್ಲಿಕಾರ್ಜುನ ಖರ್ಗೆ

Sampriya

ಮುಂಬೈ , ಶನಿವಾರ, 18 ಮೇ 2024 (20:23 IST)
ಮುಂಬೈ: ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಅಯೋಧ್ಯೆಯ ರಾಮಮಂದಿರವನ್ನು ಧ್ವಂಸಮಾಡುತ್ತದೆ ಎಂದು ಪ್ರಚೋದನಕಾರಿ ಹೇಳಿಕೆ ನೀಡಿರುವ ಪ್ರಧಾನಿ ವಿರುದ್ಧ ಚುನಾವಣಾ ಆಯೋಗ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ವ್ಯಕ್ತಪಡಿಸಿದರು.

ಪ್ರಧಾನಿ ನರೇಂದ್ರ ಮೋದಿಯವರು ನೀಡಿರುವ ಹೇಳಿಕೆ ಸಂಬಂಧ ಪ್ರತಿಕ್ರಿಯಿಸಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಜನರನ್ನು ಪ್ರಚೋದಿಸುವ ಹೇಳಿಕೆ ನೀಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಚುನಾವಣಾ ಆಯೋಗವು "ಕ್ರಮ ತೆಗೆದುಕೊಳ್ಳಬೇಕು" ಎಂದು ಆಗ್ರಹಿಸಿದರು.

ಮುಂಬೈನ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾವು ಇಲ್ಲಿಯವರೆಗೆ ಬುಲ್ಡೋಜರ್ ಬಳಸಿಲ್ಲ. ಪ್ರಧಾನಿಯಾಗಿದ್ದರು ಪ್ರಚೋದನಾಕಾರಿ ಭಾಷಣ ಮಾಡುವವರ ವಿರುದ್ಧ ಚುನಾವಣಾ ಆಯೋಗ ಕ್ರಮ ಕೈಗೊಳ್ಳಬೇಕು. ಮೋದಿ ಅವರು ತಮ್ಮ ಭಾಷಣದಲ್ಲಿ ಜನರನ್ನು ಪ್ರಚೋದಿಸುತ್ತಿದ್ದಾರೆ. ನಮ್ಮ ಸರ್ಕಾರ ಬಂದರೆ ಸಂವಿಧಾನದ ಪ್ರಕಾರ ಎಲ್ಲದಕ್ಕೂ ರಕ್ಷಣೆ ನೀಡಲಾಗುವುದು. ನಾವು ಸಂವಿಧಾನವನ್ನು ಅನುಸರಿಸುತ್ತೇವೆ ಎಂದು ಖರ್ಗೆ ತಿಳಿಸಿದರು.

"ಮಹಾರಾಷ್ಟ್ರದ 48 ಸ್ಥಾನಗಳಲ್ಲಿ 46 ಸ್ಥಾನಗಳನ್ನು ಭಾರತ ಬಣ ಗೆಲ್ಲುತ್ತದೆ. ಇದನ್ನು ಜನರೇ ಹೇಳುತ್ತಿದ್ದಾರೆ. ನಮ್ಮ ಮೈತ್ರಿಕೂಟವು ಗರಿಷ್ಠ ಸ್ಥಾನಗಳನ್ನು ಗೆದ್ದು ಬಿಜೆಪಿಯನ್ನು ಸೋಲಿಸುತ್ತದೆ..." ಎಂದು ಖರ್ಗೆ ಹೇಳಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ತಾಂತ್ರೀಕ ದೋಷದಿಂದ ಬೆಂಗಳೂರಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ತಿರುಚಿರಾಪಳ್ಳಿಯಲ್ಲಿ ಭೂಸ್ಪರ್ಶ