Select Your Language

Notifications

webdunia
webdunia
webdunia
webdunia

ಮೋದಿ ಮಧ್ಯಪ್ರವೇಶಿಸಿ ವಿವಾದ ಇತ್ಯರ್ಥಗೊಳಿಸಲಿ: ಖರ್ಗೆ

ಮೋದಿ ಮಧ್ಯಪ್ರವೇಶಿಸಿ ವಿವಾದ ಇತ್ಯರ್ಥಗೊಳಿಸಲಿ: ಖರ್ಗೆ
ಬೆಂಗಳೂರು , ಮಂಗಳವಾರ, 13 ಸೆಪ್ಟಂಬರ್ 2016 (11:58 IST)
ರೈತರ ಹಿತಾಸಕ್ತಿ ಕಾಪಾಡಲು ರಾಜ್ಯ ಸರಕಾರ ಬದ್ಧವಾಗಿದೆ ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
 
ಸಿಎಂ ಗೃಹ ಕಚೇರಿ ಕೃಷ್ಣ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಈ ಹಿಂದೆ ಕೇಂದ್ರ ಸರಕಾರ ಚರ್ಚೆ ನಡೆಸಿದೆ. ಕಾವೇರಿ ನದಿ ನೀರು ಹಂಚಿಕೆ ವಿಚಾರ ಅಂತರರಾಜ್ಯ ಜಲ ವಿವಾದವಾಗಿರುವ ಹಿನ್ನೆಲೆಯಲ್ಲಿ ಕೂಡಲೇ ಪ್ರಧಾನಿ ಮೋದಿ ಅವರು ಮಧ್ಯ ಪ್ರವೇಶಿಸಿ ವಿವಾದವನ್ನು ಇತ್ಯರ್ಥಗೊಳಿಸಲಿ ಎಂದು ಆಗ್ರಹಿಸಿದರು.
 
ಈ ಕೂಡಲೇ ಪ್ರಧಾನಿ ಮೋದಿ ಅವರು ನಾಲ್ಕು ರಾಜ್ಯಗಳ ಮುಖ್ಯಮಂತ್ರಿಯನ್ನು ಕರೆಸಿ ಚರ್ಚಿಸಬೇಕು. ಮೋದಿ ಅವರು ಮೊದಲು ತಮಿಳುನಾಡು ಸಿಎಂ ಜಯಲಲಿತಾ ಅವರ ಜೊತೆ ಚರ್ಚೆ ನಡೆಸಿ ವಿವಾದಕ್ಕೆ ಅಂತ್ಯ ಹಾಡಲಿ ಎಂದು ಹೇಳಿದರು.
 
ಶಾಂತಿ ಕಾಪಾಡುವಂತೆ ಮನವಿ....
 
ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯದ ಜನತೆ ಶಾಂತಿ ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳಬೇಕು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಯ್ದುಕೊಳ್ಳಲು ರಾಜ್ಯ ಸರಕಾರಕ್ಕೆ ಸಹಕರಿಸಬೇಕು ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಮನವಿ ಮಾಡಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

Share this Story:

Follow Webdunia kannada

ಮುಂದಿನ ಸುದ್ದಿ

ಕಾವೇರಿ ವಿವಾದ: ರಾಜೀನಾಮೆ ನೀಡಬೇಡಿ, ಸಿಎಂಗೆ ಹಿರಿಯ ನಾಯಕರ ಮನವಿ