Select Your Language

Notifications

webdunia
webdunia
webdunia
webdunia

ಪ್ರಧಾನಿ ಮಧ್ಯಸ್ಥಿಕೆಯಿಂದ ಮಾತ್ರ ಕಾವೇರಿ, ಮಹದಾಯಿ ಇತ್ಯರ್ಥ: ಚೆನ್ನವೀರ ಕಣವಿ

ಪ್ರಧಾನಿ ಮಧ್ಯಸ್ಥಿಕೆಯಿಂದ ಮಾತ್ರ ಕಾವೇರಿ, ಮಹದಾಯಿ ಇತ್ಯರ್ಥ: ಚೆನ್ನವೀರ ಕಣವಿ
ಮೈಸೂರು , ಗುರುವಾರ, 29 ಸೆಪ್ಟಂಬರ್ 2016 (12:47 IST)
ಕಾವೇರಿ ಹಾಗೂ ಮಹದಾಯಿ ಜಲ ವಿವಾದದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಧ್ಯ ಪ್ರವೇಶಿಸಿ ಪರಸ್ಪರ ಮಾತುಕತೆಯ ಮೂಲಕ ಸಮಸ್ಯಯನ್ನು ಇತ್ಯರ್ಥಗೊಳಿಸಬೇಕು ಎಂದು ನಾಡೋಜ ಚೆನ್ನವೀರ ಕಣವಿ ಹೇಳಿದ್ದಾರೆ.
 
ವಿಶ್ವ ವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆಂದು ಮೈಸೂರು ಜಿಲ್ಲೆಗೆ ಆಗಮಿಸಿ, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ಹಾಗೂ ಮಹದಾಯಿ ವಿಚಾರದಲ್ಲಿ ರಾಜ್ಯದಲ್ಲಿ ಸಾಕಷ್ಟು ಪ್ರತಿಭಟನೆ ನಡೆದಿದ್ದು, ರೈತರು ಶಾಂತಿಯುತವಾಗಿ ಹೋರಾಟ ನಡೆಸಬೇಕು.ಪ್ರಧಾನಿ ನರೇಂದ್ರ ಮೋದಿ ಅವರ ಮಧ್ಯಸ್ಥಿಕೆಯಿಂದ ಮಾತ್ರ ಕಾವೇರಿ ಜಲ ಹಾಗೂ ಮಹದಾಯಿ ವಿವಾದವನ್ನು ಬಗೆಹರಿಸಬಹುದಾಗಿದೆ ಎಂದರು. 
 
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಇಂದು ನವದೆಹಲಿಯ ಶ್ರಮಶಕ್ತಿ ಭವನದಲ್ಲಿ ಜಲ ಸಂಪನ್ಮೂಲ ಸಚಿವೆ ಉಮಾಭಾರತಿ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಈ ಮಹತ್ವದ ಸಭೆಯಿಂದ ರಾಜ್ಯದ ಜನತೆಗೆ ಶುಭ ಸುದ್ದಿ ತರಲಿ ಎಂದು ಹಾರೈಸಿದರು. 
 
ದಸರಾ ಉದ್ಘಾಟಕರಾಗಿ ಬರುವಂತೆ ಸಿಎಂ ಸಿದ್ದರಾಮಯ್ಯ ಕರೆ ಮಾಡಿದಾಗ ನನಗೆ ಆಶ್ಚರ್ಯವಾಗಿತ್ತು. ಮೊದಲ ಬಾರಿ ದಸರಾ ಉದ್ಘಾಟಟಕರಾಗಿ ಆಯ್ಕೆಯಾಗಿರುವುದು ಸಂತಸ ತಂದಿದೆ ಎಂದು ನಾಡೋಜ ಚೆನ್ನವೀರ ಕಣವಿ ಸಂತಸ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ವಿಡಿಯೋ : ಹಾಡಹಗಲೇ ಯುವತಿಯ ಅಪಹರಣ, ಮುಂದೇನಾಯ್ತು? ನೀವೇ ನೋಡಿ