Publish Date: Mon, 12 Feb 2018 (17:30 IST)
Updated Date: Mon, 12 Feb 2018 (17:32 IST)
ಬೆಂಗಳೂರು: ಯಡಿಯೂರಪ್ಪನಂತಹ ಭ್ರಷ್ಟ ಮಾಜಿ ಸಿಎಂ ಪಕ್ಕದಲ್ಲಿ ಕೂರಿಸಿಕೊಂಡು ಸಿದ್ದರಾಮಯ್ಯ ಸರ್ಕಾರ ಭ್ರಷ್ಟ ಸರ್ಕಾರ ಎನ್ನುವ ಪ್ರಧಾನಿ ಮೋದಿಗೆ ನಾಚಿಕೆಯಾಗಬೇಕು. ಹೀಗಂತ ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮವೊಂದರಲ್ಲಿ ವಾಗ್ದಾಳಿ ನಡೆಸಿದ್ದಾರೆ.
ತಮ್ಮ ಅಧಿಕಾರಾವಧಿಯಲ್ಲಿ ಹಿಂದುಳಿದ ವರ್ಗದವರಿಗಾಗಿ ಕಿಂಚಿತ್ತೂ ಕೆಲಸ ಮಾಡದವರು ಈಗ ಬಡವರ ಕಾಲೊನಿಯಲ್ಲಿ ಗ್ರಾಮ ವಾಸ್ತವ್ಯ ಮಾಡ್ತಿದ್ದಾರೆ. ಇಂತಹವರಿಗೆ ವೋಟು ಹಾಕ್ತೀರಾ? ಹಾಕ್ಬಾರ್ದು ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.
ಇದಕ್ಕೆ ತಿರುಗೇಟು ನೀಡಿದ ಬಿಎಸ್ ಯಡಿಯೂರಪ್ಪ ರಾಜ್ಯದ ಇಷ್ಟೂ ಸಿಎಂಗಳು ಮಾಡದ ಸಾಲವನ್ನು ಈ ಮುಖ್ಯಮಂತ್ರಿ ಮಾಡಿದ್ದಾರೆ. ನನ್ನ ಮೇಲಿನ ಆರೋಪವೆಲ್ಲಾ ಸುಳ್ಳು ಎಂದು ಸಾಬೀತಾದ ಮೇಲೂ ಸಿದ್ದರಾಮಯ್ಯ ಪದೇ ಪದೇ ನಾನು ಜೈಲಿಗೆ ಹೋದ ವಿಚಾರವನ್ನೇ ಕೆದಕುತ್ತಿದ್ದಾರೆ. ಯಾಕೆ ಇವರ ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಅವ್ಯವಹಾರ ಮಾಡಿ ಬೇಲ್ ಪಡೆದು ಓಡಾಡುತ್ತಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ