ನಾಳೆ, ನಾಡಿದ್ದು ಉತ್ತರ ಕರ್ನಾಟಕದಲ್ಲಿ ಮೋದಿ-ಸಿದ್ದರಾಮಯ್ಯ ಜಟಾಪಟಿ

Krishnaveni K
ಶನಿವಾರ, 27 ಏಪ್ರಿಲ್ 2024 (09:33 IST)
ಬೆಳಗಾವಿ: ಕರ್ನಾಟಕದಲ್ಲಿ ಎರಡನೇ ಹಂತದ ಲೋಕಸಭೆ ಚುನಾವಣೆಗೆ ಪ್ರಚಾರದ ಅಬ್ಬರ ಜೋರಾಗಿದೆ. ನಾಳೆ ಮತ್ತು ನಾಡಿದ್ದು ಪ್ರಧಾನಿ ಮೋದಿ ಉತ್ತರ ಕರ್ನಾಟಕದಲ್ಲಿ ಅಬ್ಬರದ ಪ್ರಚಾರ ನಡೆಸಲಿದ್ದಾರೆ.

ನಾಳೆ ಬೆಳಗಾವಿಯಲ್ಲಿ ಒಂದೆಡೆ ಪ್ರಧಾನಿ ಮೋದಿ ಮತ್ತು ಇನ್ನೊಂದೆಡೆ ಸಿಎಂ ಸಿದ್ದರಾಮಯ್ಯ ಪ್ರಚಾರ ಕಣದಲ್ಲಿ ಅಬ್ಬರಿಸಲಿದ್ದಾರೆ. ನಾಳೆ ಬೆಳಿಗ್ಗೆ 11 ಗಂಟೆಗೆ ಬೆಳಗಾವಿಯ ಮಾಲಿನಿ ಸಿಟಿಯಲ್ಲಿ ಪ್ರಧಾನಿ ಮೋದಿ ಬೃಹತ್ ಸಮಾವೇಶದಲ್ಲಿ ಮಾತನಾಡಲಿದ್ದಾರೆ. ಈ ವೇಳೆ ಬೆಳಗಾವಿ ಮತ್ತು ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿಗಳಿರಿರಲಿದ್ದಾರೆ.

ವಿಶೇಷವೆಂದರೆ ಇದೇ ದಿನ ಸಿಎಂ ಸಿದ್ದರಾಮಯ್ಯ ಕೂಡಾ ಬೆಳಗಾವಿ ಮತ್ತು ಚಿಕ್ಕೋಡಿಯಲ್ಲಿ ಪ್ರಚಾರ ನಡೆಸಲಿದ್ದಾರೆ. ಚಿಕ್ಕೋಡಿಯ ಉಗಾರ್ ಖರ್ದ್, ಬೆಳಗಾವಿಯ ಯರಗಟ್ಟಿಯಲ್ಲಿ ಸಮಾವೇಶದಲ್ಲಿ ಸಿದ್ದರಾಮಯ್ಯ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಲಿದ್ದಾರೆ.

ಬೆಳಗಾವಿ ಈ ಬಾರಿ ಕಾಂಗ್ರೆಸ್ ಗೆ ಪ್ರತಿಷ್ಠೆಯ ಕಣವಾಗಿದೆ. ಈ ಬಾರಿ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಇಲ್ಲಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ. ಅವರಿಗೆ ಎದುರಾಳಿಯಾಗಿ ಬಿಜೆಪಿಯಿಂದ ಜಗದೀಶ್ ಶೆಟ್ಟರ್ ಸ್ಪರ್ಧಿಸುತ್ತಿದ್ದಾರೆ.  ಇಂದೇ ಪ್ರಧಾನಿ ಮೋದಿ ಬೆಳಗಾವಿಗೆ ಬಂದಿಳಿಯಲಿದ್ದು, ನಾಳೆ ಪ್ರಚಾರ ನಡೆಸಿ ಸೋಮವಾರ ಹೊಸಪೇಟೆಯಲ್ಲಿ ಪ್ರಚಾರ ನಡೆಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಸಿಎಂ ಬದಲಾವಣೆ ವಿಚಾರ: ನಂದೇನೂ ಇಲ್ಲ ಎಲ್ಲಾ ರಾಹುಲ್ ಜೀ ಹೇಳ್ತಾರೆ ಎಂದ ಖರ್ಗೆ, ಇಂದು ಕ್ಲೈಮ್ಯಾಕ್ಸ್ ನಿರೀಕ್ಷೆ

Karnataka Weather: ಕರ್ನಾಟಕದಲ್ಲಿ ಇಂದು ಯಾವೆಲ್ಲಾ ಜಿಲ್ಲೆಗಳಿಗೆ ಮಳೆಯ ಸೂಚನೆಯಿದೆ ನೋಡಿ

ದೆಹಲಿ, ಪಂಜಾಬ್, ಯುಪಿಯಲ್ಲಿ ತೀವ್ರ ಹೀಟ್‌ವೇವ್ ಎಚ್ಚರಿಕೆ

ರಾಹುಲ್ ಗಾಂಧಿ ಒಬ್ಬ ಪಾಕಿಸ್ತಾನಿ ಏಜೆಂಟ್: ನಿತೇಶ್ ರಾಣೆ

ನಟ ಧರ್ಮೇಂದ್ರರಿಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಹೇಮಾ ಮಾಲಿನಿ

ಮುಂದಿನ ಸುದ್ದಿ
Show comments