Publish Date: Mon, 07 May 2018 (07:28 IST)
Updated Date: Mon, 07 May 2018 (07:30 IST)
ಬೆಂಗಳೂರು: ಬಿಜೆಪಿ ಸಮಾವೇಶದಲ್ಲಿ ಮಾತನಾಡುವಾಗ ಪ್ರಧಾನಿ ಮೋದಿ ಟಿಪ್ಪು ಸುಲ್ತಾನ್ ಬಗ್ಗೆ ಪ್ರಸ್ತಾಪಿಸಿರುವುದಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ರಾಜ್ಯ ಸರ್ಕಾರ ಟಿಪ್ಪು ಸುಲ್ತಾನ್ ಜಯಂತಿ ಆಚರಿಸುವುದು ವೋಟ್ ಬ್ಯಾಂಕ್ ರಾಜಕಾರಣ ಮಾಡುವ ದೃಷ್ಟಿಯಿಂದ ಎಂದು ಬಿಜೆಪಿ ಸಮಾವೇಶದಲ್ಲಿ ಪ್ರಧಾನಿ ಮೋದಿ ಟೀಕಿಸಿದ್ದರು.
ಇದಕ್ಕೆ ತಿರುಗೇಟು ನೀಡಿರುವ ಸಿಎಂ ಸಿದ್ದರಾಮಯ್ಯ ‘ನಾವು ಸುಮಾರು 30 ನಾಯಕರ ಜಯಂತಿಗಳನ್ನು ಆಚರಿಸುತ್ತೇವೆ. ಆದರೆ ಅದರ ಬಗ್ಗೆ ಮೋದಿಯವರು ಚಕಾರವೆತ್ತಿಲ್ಲ. ಬೇಕೆಂದೇ ಟಿಪ್ಪು ಬಗ್ಗೆ ಪ್ರಸ್ತಾಪಿಸಿದರು. ಈಗ ಹೇಳಿ ವೋಟ್ ಬ್ಯಾಂಕ್ ರಾಜಕಾರಣ ಮಾಡುತ್ತಿರುವವರು ಯಾರು?’ ಎಂದು ಪ್ರಶ್ನಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.