Webdunia - Bharat's app for daily news and videos

Install App

ಕಾಂಗ್ರೆಸ್ ನ ನಾಮ್ ದಾರ್ ಗಳು ಚಿನ್ನದ ಚಮಚದೊಂದಿಗೆ ಹುಟ್ಟಿದ್ದಾರೆ: ಪ್ರಧಾನಿ ಮೋದಿ ಲೇವಡಿ

Webdunia
ಬುಧವಾರ, 9 ಮೇ 2018 (11:24 IST)
ಕೋಲಾರ: ಬಂಗಾರಪೇಟೆಯಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ ಮೋದಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ನಾಮ್ ದಾರ್ ಗಳು ಚಿನ್ನದ ಚಮಚವನ್ನು ಬಾಯಲ್ಲಿ ಇಟ್ಟುಕೊಂಡೇ ಹುಟ್ಟಿದ್ದಾರೆ. ಆದರೆ ಅದು ಕೋಲಾರದ ಗಣಿಯ ಚಿನ್ನವಲ್ಲ. ವಿದೇಶದಿಂದ ಬಂದ ಚಿನ್ನ. ಹಾಗಾಗಿ ಅವರಿಗೆ ಇಲ್ಲಿನ ಜನರ ಕಷ್ಟ ಗೊತ್ತಿಲ್ಲ ಎಂದು ರಾಹುಲ್ ಗಾಂಧಿಗೆ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ.

ಅಷ್ಟೇ ಅಲ್ಲದೆ ತಮ್ಮ ವಾಗ್ದಾಳಿ ಮುಂದುವರಿಸಿದ ಪ್ರಧಾನಿ ‘ದೇಶದಲ್ಲಿ ಬಡವರಿಗೆ ಶೌಚಾಲಯ ವ್ಯವಸ್ಥೆ ಕೂಡಾ ಇಲ್ಲ. ನಮ್ಮ ಸರ್ಕಾರ 5 ಕೋಟಿ ಶೌಚಾಲಯ ನಿರ್ಮಿಸಿದೆ. ಹಾಗಿದ್ದರೂ ಮೋದಿ ಶ್ರೀಮಂತರ ಪರ ಎಂದು ಕಾಂಗ್ರೆಸ್ ನವರು ಟೀಕಿಸುತ್ತಾರೆ. ಕೆಡುಕು ಮಾಡುವುದನ್ನೇ ಕಾಂಗ್ರೆಸ್ ಗುತ್ತಿಗೆಗೆ ಪಡೆದುಕೊಂಡಿದೆ’ ಎಂದಿದ್ದಾರೆ.

ಈ ನಡುವೆ ಕೋಲಾರ ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆ ಪರಿಹಾರ ಒದಗಿಸುವುದಾಗಿಯೂ ಭರವಸೆ ನೀಡಿದ್ದಾರೆ. ಗ್ರಾಮೀಣ ಭಾಗದಲ್ಲಿ ನೀರಿಗಾಗಿ ಪಡುವ ಕಷ್ಟದ ಅರಿವು ನನಗಿದೆ. ಹಾಗಾಗಿ ಇದರ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನಪಡುವುದಾಗಿ ಮೋದಿ ಭರವಸೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Nepal Flood: ಚೀನಾ, ಅಮೆರಿಕ, ಭಾರತದಲ್ಲಿ ಪರಿಹಾರ ಕೊಡಿ ಎಂದು ಆಗ್ರಹ

ಬಿಜೆಪಿ ಅಧಿಕಾರದಲ್ಲಿರಲು ನಾಲಾಯಕ್, ಕೇಂದ್ರದಲ್ಲಿರುವುದು ಸಂವಿಧಾನ ವಿರೋಧಿ ಸರ್ಕಾರ: ಗುಡುಗಿದ ಸಿದ್ದರಾಯಯ್ಯ

ಸುಶಾಂತ್ ಸಿಂಗ್ ಮ್ಯಾನೇಜರ್‌ ದಿಶಾ ಸಾಲಿಯಾನ್ ನಿಗೂಢ ಸಾವು ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಹಾವು ಹಿಡಿಯುತ್ತಿದ್ದಾಗ ಅರೆಗಳಿಗೆ ಎಚ್ಚರ ತಪ್ಪಿದ್ದಷ್ಟೇ… ಉರಗ ತಜ್ಞ ಸ್ಥಳದಲ್ಲೇ ಸಾವು: ಶಾಕಿಂಗ್ ವಿಡಿಯೋ ಇಲ್ಲಿದೆ

ಪಿಂಕ್‌ ಲೈನ್‌ ಮೆಟ್ರೊ ಆರಂಭಕ್ಕೆ ದಿನಗಣನೆ: ಒಟ್ಟಿಗೆ ಸವಾರಿ ಮಾಡಿದ ಕೃಷ್ಣ ಭೈರೇಗೌಡ, ತೇಜಸ್ವಿ ಸೂರ್ಯ, Video

ಮುಂದಿನ ಸುದ್ದಿ
Show comments