ಮೈಸೂರಿಗೆ ಪ್ರಧಾನಿ ಮೋದಿ; ಡಿಕೆಶಿ ಲೇವಡಿ

Webdunia
ಶನಿವಾರ, 8 ಏಪ್ರಿಲ್ 2023 (20:30 IST)
ಚಾಮರಾಜನಗರದಲ್ಲಿನ ಬಂಡೀಪುರ ಅರಣ್ಯವನ್ನ ರಾಷ್ಟ್ರೀಯ ಹುಲಿ ಸಂರಕ್ಷಿತಾರಣ್ಯವೆಂದು ಘೋಷಿಸಿ 50 ವರ್ಷಗಳು ಸಂದ ಹಿನ್ನೆಲೆ ನಾಳೆ ಪ್ರಧಾನಿ ನರೇಂದ್ರ ಮೋದಿ ಬಂಡೀಪುರ ಅಭಯಾರಣ್ಯಕ್ಕೆ ಭೇಟಿ ನೀಡಲಿದ್ದಾರೆ. ಇಂದು ರಾತ್ರಿ 8.40ಕ್ಕೆ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಪ್ರಧಾನಿ ಮೋದಿ ಆಗಮಿಸಲಿದ್ದು, ಬಳಿಕ ವಿಮಾನ‌ ನಿಲ್ದಾಣದಿಂದ ರಸ್ತೆ ಮಾರ್ಗವಾಗಿ ರಾತ್ರಿ 8.50ಕ್ಕೆ ಮೈಸೂರಿನ ರಾಡಿಸನ್​​​​​​​ ಬ್ಲೂ ಹೋಟೆಲ್​ಗೆ ತೆರಳಲಿದ್ದಾರೆ. ಇಂದು ರಾತ್ರಿ ಅಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ. ಬಳಿಕ ನಾಳೆ ಬೆಳಗ್ಗೆ 6.20ಕ್ಕೆ ಹೋಟೆಲ್​ನಿಂದ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ತೆರಳಿ ಅಲ್ಲಿಂದ ಬಂಡೀಪುರಕ್ಕೆ ತೆರಳಲಿದ್ದಾರೆ. ಇನ್ನು ಈ ಕುರಿತು KPCC ಅಧ್ಯಕ್ಷ D.K. ಶಿವಕುಮಾರ್​ ಪ್ರತಿಕ್ರಿಯಿಸಿದ್ದು, ಮೋದಿ ಎಷ್ಟು ಬಾರಿ ಬೇಕಾದ್ರೂ ಟೂರ್ ಬರಲಿ, ದಿನಾ ಇಲ್ಲೇ ಇರಲಿ, ನಮಗೆ ಬೇಜಾರಿಲ್ಲ.. ಅವರ ಪಾರ್ಟಿ ವೀಕ್ ಆಗಿದೆ ಅಂತಾ ಅರ್ಥ ಆಗಿದೆ. ಅವರದ್ದು 60-65 ಸೀಟ್ ಅಷ್ಟೇ, ಅವರು ಸೋಲನ್ನ ಒಪ್ಪಿಕೊಳ್ತಿದ್ದಾರೆ ಎಂದು ಲೇವಡಿ ಮಾಡಿದ್ರು.. ಇನ್ನು ಕಾಂಗ್ರೆಸ್​ ಬಂಡಾಯ ಕುರಿತು ಪ್ರತಿಕ್ರಿಯಿಸಿದ ಡಿಕೆಶಿ, ಕಾಂಗ್ರೆಸ್ ಪಾರ್ಟಿ ಸಮುದ್ರವಿದ್ದಂತೆ, ನೂರಾರು ಹೊಳೆಗಳು ಬಂದು ಸೇರಿಕೊಳ್ತಾವೆ.. ಎಷ್ಟು ಜನ ಬೇರೆ ಪಾರ್ಟಿಗಳಿಂದ ಕಾಂಗ್ರೆಸ್​ಗೆ ಬಂದಿಲ್ವಾ? ಎಂದು ಪ್ರಶ್ನಿಸಿದ್ರು. ಮತ್ತೊಂದೆಡೆ ಪ್ರಧಾನಿ ನರೇಂದ್ರ ಮೋದಿ ಆಗಮನ ಕುರಿತು ಮಾಜಿ ಸಿಎಂ HDK ಕುಹಕವಾಡಿದ್ದು, ಪ್ರಧಾನಿ ಹುಲಿ ವಿಹಾರಕ್ಕೆ ಬರುತ್ತಿದ್ದಾರೆ, ರಾಜ್ಯದ ಜನತೆಯ ವಿಹಾರಕ್ಕೆ ಅಲ್ಲ‌. ರಾಜ್ಯದ ಜನರ ಕಷ್ಟಕ್ಕಾಗಿ ಅಲ್ಲ ಎಂದು ಲೇವಡಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ, ಪಂಜಾಬ್, ಯುಪಿಯಲ್ಲಿ ತೀವ್ರ ಹೀಟ್‌ವೇವ್ ಎಚ್ಚರಿಕೆ

ರಾಹುಲ್ ಗಾಂಧಿ ಒಬ್ಬ ಪಾಕಿಸ್ತಾನಿ ಏಜೆಂಟ್: ನಿತೇಶ್ ರಾಣೆ

ನಟ ಧರ್ಮೇಂದ್ರರಿಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಹೇಮಾ ಮಾಲಿನಿ

ಅಂಬೆನಾಲಿ ಘಾಟ್‌ನಲ್ಲಿ ಸಾವಿರ ಅಡಿ ಆಳದ ಕಣಿವೆಗೆ ಉರುಳಿದ ಕಾರು: ಎಂಟು ಯುವಕರು ದಾರುಣ ಸಾವು

ಬೆಳ್ತಂಗಡಿ ತಾಲ್ಲೂಕಿನ ಟ್ರೆಕ್ಕಿಂಗ್ ತಾಣಕ್ಕೆ ಹೋಗುವ ಪ್ಲಾನ್ ಮಾಡಿದ್ದವರಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments