Publish Date: Sun, 29 Oct 2017 (14:56 IST)
Updated Date: Sun, 29 Oct 2017 (15:27 IST)
ಮಂಗಳೂರು: ಧರ್ಮಸ್ಥಳಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿಗೆ ಭರ್ಜರಿ ಸ್ವಾಗತ ನೀಡಲಾಯಿತು. ಅದರ ಕೆಲವು ಝಲಕ್ ಗಳು ನಿಮಗಾಗಿ..
ದೇವಾಲಯಕ್ಕೆ ಬಂದ ಪ್ರಧಾನಿ ಮೋದಿಗೆ ಸ್ವತಃ ವೀರೇಂದ್ರ ಹೆಗ್ಗಡೆಯವರೇ ಮುಂದೆ ನಿಂತು ಸಾಂಪ್ರದಾಯಿಕವಾಗಿ ಸ್ವಾಗತಿಸಿದರು. ಪ್ರಧಾನಿ ಮೋದಿ ಜತೆಗೆ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ, ಕೇಂದ್ರ ಸಚಿವ ಅನಂತ್ ಕುಮಾರ್, ಸಿಟಿ ರವಿ ಮುಂತಾದವರಿದ್ದರು.
ದೇವಾಲಯದೊಳಗೆ ಪ್ರವೇಶಿಸಿದ ಪ್ರಧಾನಿ ಮೋದಿ ಸಾಂಪ್ರದಾಯಿಕವಾಗಿ ಶಾಲು ಹೊದ್ದುಕೊಂಡು ತೀರ್ಥ ಪ್ರಸಾದ ಸ್ವೀಕರಿಸಿದರು.
ತಮ್ಮನ್ನು ಸ್ವಾಗತಿಸಿದ ವೀರೇಂದ್ರ ಹೆಗ್ಗಡೆಯವರ ಸಹೋದರರು ಮತ್ತು ದೇವಾಲಯದ ಅರ್ಚಕರಿಗೆ ತಲೆ ಬಾಗಿ ನಮಸ್ಕರಿಸಿದ ನಮೋ.
ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರ ‘ಬೀಡು’ ನಲ್ಲಿ ಉಪಾಹಾರ ಸ್ವೀಕಾರ.
ಉಜಿರೆಯಲ್ಲಿ ನಡೆದ ಗ್ರಾಮಾಭಿವೃದ್ಧಿ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರಿಗೆ ತಲೆ ಬಾಗಿ ನಮಸ್ಕರಿಸಿದ ಪ್ರಧಾನಿ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ