Webdunia - Bharat's app for daily news and videos

Install App

ಬೆಂಗಳೂರಿಗೆ ಇಂದು ಪ್ರಧಾನಿ ಮೋದಿ: ಈ ದಾರಿಯಲ್ಲಿ ಪ್ರಯಾಣಿಸುವವರು ಗಮನಿಸಿ

Krishnaveni K
ಶುಕ್ರವಾರ, 19 ಜನವರಿ 2024 (09:15 IST)
ಬೆಂಗಳೂರು: ರಾಜ್ಯ ರಾಜಧಾನಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದಾರೆ. ಹೀಗಾಗಿ ಸಂಚಾರಿ ಪೊಲೀಸರು ಮಾರ್ಗದ ಬದಲಾವಣೆ ಮಾಡಿದ್ದಾರೆ.

ಇಂದು ಮಧ್ಯಾಹ್ನ 2.10 ಕ್ಕೆ ಮೋದಿ ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರಲಿದ್ದಾರೆ. ಹೀಗಾಗಿ ಈ ಸಂದರ್ಭದಲ್ಲಿ ಹೆಣ್ಣೂರು-ಬಾಗಲೂರು ಮತ್ತು ವಿಮಾನ ನಿಲ್ದಾಣಕ್ಕೆ ತೆರಳುವ ರಸ್ತೆಗಳಲ್ಲಿ ಸಂಚಾರ ವ್ಯತ್ಯಯವಾಗಲಿದೆ.

ಪ್ರಧಾನಿ ಭೇಟಿ ಹಿನ್ನಲೆಯಲ್ಲಿ ಬೆಳಿಗ್ಗೆ 8 ಗಂಟೆಯಿಂದ ಸಾಯಂಕಾಲ 6 ಗಂಟೆಯವರೆಗೆ ಗೊಲ್ಲಹಳ್ಳಿ ಗೇಟ್ ನಿಂದ ಹುನಚೂರುವರೆಗೆ, ಏರ್ ಲೈನ್ಸ್ ಡಾಬಾದಿಂದ ಬೂದಿಗೆರೆಯವರೆಗೆ, ಹೆಣ್ಣೂರು-ಬಾಗಲೂರು ರಸ್ತೆಯಿಂದ ವಿಮಾನ ನಿಲ್ದಾಣದವರೆಗೆ, ಚಿಕ್ಕಜಾಲ ಕೋಟೆ ಮುಖ್ಯ ರಸ್ತೆಯಿಂದ ವಿಮಾನ ನಿಲ್ದಾಣದವರೆಗೆ, ಬಗಲೂರಿನಿಂದ ವಿಮಾನ ನಿಲ್ದಾಣದವರೆಗೆ ಸಂಚಾರ ನಿಷೇಧಿಸಲಾಗಿದೆ.

ಪ್ರಧಾನಿ ಆಗಮನದ ಹಿನ್ನಲೆಯಲ್ಲಿ ಭದ್ರತೆ ದೃಷ್ಟಿಯಿಂದ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ. ದೇವನಹಳ್ಳಿಯಲ್ಲಿ ಬೋಯಿಂಗ್ ಇಂಡಿಯಾ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕೇಂದ್ರ ಕ್ಯಾಂಪಸ್ ನ್ನು ಪ್ರಧಾನಿ ಉದ್ಘಾಟಿಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೇಪಾಳದ ಜಲಪ್ರಳಯದಲ್ಲಿ ಹೆಚ್ಚುತ್ತಲೇ ಇದೆ ಸಾವಿನ ಸಂಖ್ಯೆ, ಇನ್ನೂ 2,400ಕ್ಕೂ ಹೆಚ್ಚು ಮಂದಿ ಕಣ್ಮರೆ

ವಾಲ್ಮೀಕಿ ನಿಗಮದ ಹಗರಣದ ₹ 187 ಕೋಟಿ ವಾಪಸ್ ಬರೋವರೆಗೂ ಹೋರಾಟ: ವಿಜಯೇಂದ್ರ ಪುನರುಚ್ಚಾರ

ನಮ್ಮ ತಾಕತ್ ಪ್ರಶ್ನೆ ಮಾಡ್ತೀಯಾ, ದಮ್ ಇದ್ರೆ ಬಾ..: ನಾಗೇಂದ್ರಗೆ ಜನಾರ್ಧನ ರೆಡ್ಡಿ ಸವಾಲು

ರೋಗಿಗಳು ಕಾಯುತ್ತಿದ್ದರೆ, ಒಳಗೆ ಮದರಂಗಿ ಹಾಕುವಲ್ಲಿ ಬ್ಯುಸಿಯಾದ ಆಸ್ಪತ್ರೆ ಸಿಬ್ಬಂದಿ Video

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ

ಮುಂದಿನ ಸುದ್ದಿ
Show comments