Webdunia - Bharat's app for daily news and videos

Install App

ಪ್ರಧಾನಿ ಮೋದಿ ಜೈಲಿಗೆ ಹೋಗಿದ್ದ ಬಿಎಸ್‌ವೈರನ್ನು ಕೇಳಿದ್ರೆ ಹೇಳುತ್ತಿದ್ದರು: ಸಿಎಂ

Webdunia
ಸೋಮವಾರ, 5 ಫೆಬ್ರವರಿ 2018 (13:28 IST)
ಕರ್ನಾಟಕ ದೇಶದಲ್ಲಿಯೇ ಭ್ರಷ್ಟಾಚಾರದಲ್ಲಿ ನಂಬರ್ ಒನ್ ಸ್ಥಾನದಲ್ಲಿದೆ ಎನ್ನುವ ಮೋದಿ ಹೇಳಿಕೆಗೆ ತಿರುಗೇಟು ನೀಡಿದ ಸಿಎಂ ಸಿದ್ದರಾಮಯ್ಯ, ಬಿಜೆಪಿ ಸರಕಾರವಿದ್ದಾಗ ಯಾವ ರೀತಿ ಭ್ರಷ್ಟಾಚಾರ ನಡೆದಿತ್ತು ಎಂದು ಯಡಿಯೂರಪ್ಪ ಅವರನ್ನೇ  ಕೇಳಿದ್ರೆ ಹೇಳುತ್ತಿದ್ದರು ಎಂದು ಟಾಂಗ್ ನೀಡಿದ್ದಾರೆ.
ವಿಧಾನಸೌಧದಲ್ಲಿ ಆಯೋಜಿಸಲಾದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿ ತಮ್ಮ ಪಕ್ಕದಲ್ಲಿಯೇ ಕುಳಿತಿದ್ದ ಜೈಲಿಗೆ ಹೋಗಿ ಬಂದ ಯಡಿಯೂರಪ್ಪ ಅವರನ್ನು ಭ್ರಷ್ಟಾಚಾರದ ಬಗ್ಗೆ ಕೇಳಬೇಕಾಗಿತ್ತು. ಅವರು ಬಿಜೆಪಿ ಸರಕಾರದಲ್ಲಿ ಯಾವ ರೀತಿ ಭ್ರಷ್ಟಾಚಾರ ನಡೆದಿತ್ತು ಎನ್ನುವ ಬಗ್ಗೆ ಮಾಹಿತಿ ನೀಡಿದ್ದಾರೆ.
 
ಯಾವುದೇ ದಾಖಲೆಗಳಿಲ್ಲದೇ ರಾಜ್ಯ ಸರಕಾರದ ವಿರುದ್ಧ ಆರೋಪ ಮಾಡುವ ಪ್ರಧಾನಿ ಮೋದಿಯದ್ದು ನಾಚಿಕೆಗೇಡಿತನ ಮತ್ತು ಬೇಜವಾಬ್ದಾರಿಯಲ್ಲಯೇ ಮತ್ತೇನು ಅಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
 
ನಿನ್ನೆ ಇಲ್ಲಿ ಮೋದಿ ದೇಶದ ಪ್ರಧಾನಿಯಾಗಿ ಮಾತನಾಡಲಿಲ್ಲ. ಸುಳ್ಳಿನ ಕಂತೆ, ಪೊಳ್ಳಿನ ಆರೋಪ ಮಾಡಿ ಯಡಿಯೂರಪ್ಪ ಲೆವೆಲ್‌ಗೆ ಇಳಿದಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಭ್ರಷ್ಟಾಚಾರಗಳು ಬಹಿರಂಗವಾಗುತ್ತವೆ ಎನ್ನುವ ಕಾರಣದಿಂದ ಪ್ರಧಾನಿ ಮೋದಿ ಗುಜರಾತ್ ಸಿಎಂ ಆಗಿದ್ದಾಗ 9 ವರ್ಷಗಳ ಕಾಲ ಲೋಕಾಯುಕ್ತರನ್ನೇ ನೇಮಿಸಲಿಲ್ಲ. ಇದೀಗ ನಮ್ಮ ವಿರುದ್ಧವೇ ಆರೋಪ ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್- ಇರಾನ್ ಸಂಘರ್ಷ: ವಿಮಾನಗಳ ಹಾರಾಟ ಸ್ಥಗಿತದಿಂದ ಸಂಕಷ್ಟಕ್ಕೆ ಸಿಲುಕಿದ 18 ಕನ್ನಡಿಗರು

Video: ಪ್ರಿಯಾಂಕಾ ಗಾಂಧಿ ಉದ್ಘಾಟನೆ ಮಾಡಬೇಕೆನ್ನುವಷ್ಟರಲ್ಲಿ ಬಿದ್ದೇ ಹೋಯ್ತು ಫಲಕ

ಅಹಮದಾಬಾದ್‌ ವಿಮಾನ ದುರಂತ: ಇನ್ನೂ ಗುರುತು ಪತ್ತೆಯಾಗದ ಮಾಜಿ ಸಿಎಂ ವಿಜಯ್ ರೂಪಾನಿ ಮೃತದೇಹ

ಚುರುಕುಗೊಂಡ ಮುಂಗಾರು: ಮುಂದಿನ ಮೂರು ದಿನ ವರುಣ ಅಬ್ಬರ, ಆರು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌

ಏರ್‌ ಇಂಡಿಯಾ ದುರಂತ ಬೆನ್ನಲ್ಲೇ ಕೇದಾರನಾಥ ಬಳಿ ಹೆಲಿಕಾಪ್ಟರ್ ಅಪಘಾತ: ಪೈಲಟ್ ಸೇರಿ 7 ಮಂದಿ ಸಾವು

ಮುಂದಿನ ಸುದ್ದಿ
Show comments