ಪ್ರಧಾನಿ ಮೋದಿ ಜೈಲಿಗೆ ಹೋಗಿದ್ದ ಬಿಎಸ್‌ವೈರನ್ನು ಕೇಳಿದ್ರೆ ಹೇಳುತ್ತಿದ್ದರು: ಸಿಎಂ

Webdunia
ಸೋಮವಾರ, 5 ಫೆಬ್ರವರಿ 2018 (13:28 IST)
ಕರ್ನಾಟಕ ದೇಶದಲ್ಲಿಯೇ ಭ್ರಷ್ಟಾಚಾರದಲ್ಲಿ ನಂಬರ್ ಒನ್ ಸ್ಥಾನದಲ್ಲಿದೆ ಎನ್ನುವ ಮೋದಿ ಹೇಳಿಕೆಗೆ ತಿರುಗೇಟು ನೀಡಿದ ಸಿಎಂ ಸಿದ್ದರಾಮಯ್ಯ, ಬಿಜೆಪಿ ಸರಕಾರವಿದ್ದಾಗ ಯಾವ ರೀತಿ ಭ್ರಷ್ಟಾಚಾರ ನಡೆದಿತ್ತು ಎಂದು ಯಡಿಯೂರಪ್ಪ ಅವರನ್ನೇ  ಕೇಳಿದ್ರೆ ಹೇಳುತ್ತಿದ್ದರು ಎಂದು ಟಾಂಗ್ ನೀಡಿದ್ದಾರೆ.
ವಿಧಾನಸೌಧದಲ್ಲಿ ಆಯೋಜಿಸಲಾದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿ ತಮ್ಮ ಪಕ್ಕದಲ್ಲಿಯೇ ಕುಳಿತಿದ್ದ ಜೈಲಿಗೆ ಹೋಗಿ ಬಂದ ಯಡಿಯೂರಪ್ಪ ಅವರನ್ನು ಭ್ರಷ್ಟಾಚಾರದ ಬಗ್ಗೆ ಕೇಳಬೇಕಾಗಿತ್ತು. ಅವರು ಬಿಜೆಪಿ ಸರಕಾರದಲ್ಲಿ ಯಾವ ರೀತಿ ಭ್ರಷ್ಟಾಚಾರ ನಡೆದಿತ್ತು ಎನ್ನುವ ಬಗ್ಗೆ ಮಾಹಿತಿ ನೀಡಿದ್ದಾರೆ.
 
ಯಾವುದೇ ದಾಖಲೆಗಳಿಲ್ಲದೇ ರಾಜ್ಯ ಸರಕಾರದ ವಿರುದ್ಧ ಆರೋಪ ಮಾಡುವ ಪ್ರಧಾನಿ ಮೋದಿಯದ್ದು ನಾಚಿಕೆಗೇಡಿತನ ಮತ್ತು ಬೇಜವಾಬ್ದಾರಿಯಲ್ಲಯೇ ಮತ್ತೇನು ಅಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
 
ನಿನ್ನೆ ಇಲ್ಲಿ ಮೋದಿ ದೇಶದ ಪ್ರಧಾನಿಯಾಗಿ ಮಾತನಾಡಲಿಲ್ಲ. ಸುಳ್ಳಿನ ಕಂತೆ, ಪೊಳ್ಳಿನ ಆರೋಪ ಮಾಡಿ ಯಡಿಯೂರಪ್ಪ ಲೆವೆಲ್‌ಗೆ ಇಳಿದಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಭ್ರಷ್ಟಾಚಾರಗಳು ಬಹಿರಂಗವಾಗುತ್ತವೆ ಎನ್ನುವ ಕಾರಣದಿಂದ ಪ್ರಧಾನಿ ಮೋದಿ ಗುಜರಾತ್ ಸಿಎಂ ಆಗಿದ್ದಾಗ 9 ವರ್ಷಗಳ ಕಾಲ ಲೋಕಾಯುಕ್ತರನ್ನೇ ನೇಮಿಸಲಿಲ್ಲ. ಇದೀಗ ನಮ್ಮ ವಿರುದ್ಧವೇ ಆರೋಪ ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ದೆಹಲಿಗೆ ಹೋಗುತ್ತಿದ್ದ ಸಿದ್ದರಾಮಯ್ಯ ಭಾರೀ ಅನಾಹುತದಿಂದ ಪಾರು

ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಡಿಕೆ ಶಿವಕುಮಾರ್ ದಿಡೀರ್ ದೆಹಲಿಗೆ

ಶಾಲಾ ಭದ್ರತಾ ಸಿಬ್ಬಂದಿ ಮೇಲೆ ಬೀದಿ ನಾಯಿ ಅಟ್ಯಾಕ್: ತಕ್ಷಣವೇ ಅವರು ಮಾಡಿದ್ದೇನು, ಭಯಾನಕ ವಿಡಿಯೋ

ಪಿಂಪ್ರಿ ಚಿಂಚ್ವಡ್ನಲ್ಲಿ ಆಘಾತಕಾರಿ ಘಟನೆ: ಬಟ್ಟೆ ಅಂಗಡಿಯಲ್ಲಿ ಪ್ರೇಯಸಿಗೆ ಯದ್ವಾ ತದ್ವಾ ಹೊಡೆದ ಪ್ರಿಯಕರ Video

ಎಲ್ಲಾ ಇಲ್ಲಿಗೇ ನಿಂತಿಲ್ಲ... ರಾಜೀನಾಮೆ ಬೆನ್ನಲ್ಲೇ ಸಿದ್ದರಾಮಯ್ಯ ಹೇಳಿಕೆ ಗಮನಿಸಲೇಬೇಕು

ಮುಂದಿನ ಸುದ್ದಿ
Show comments