Webdunia - Bharat's app for daily news and videos

Install App

ಬೀದರ್-ಕಲಬುರಗಿ ರೈಲ್ವೆ ಮಾರ್ಗ ಉದ್ಘಾಟನೆಗೆ ಪ್ರಧಾನಿ ಮೋದಿಗೆ ಆಹ್ವಾನ: ಖೂಬಾ

Webdunia
ಶುಕ್ರವಾರ, 17 ಜೂನ್ 2016 (15:10 IST)
ಬೀದರ್-ಕಲಬುರಗಿ ರೈಲ್ವೆ ಮಾರ್ಗ 2017ರ ಏಪ್ರಿಲ್ ತಿಂಗಳಲ್ಲಿ ಮುಕ್ತಾಯಗೊಳ್ಳಲಿದ್ದು, ರೈಲ್ವೆ ಮಾರ್ಗ ಉಧ್ಘಾಟನೆಗಾಗಿ ಪ್ರಧಾನಿ ಮೋದಿಯವರನ್ನು ಆಹ್ವಾನಿಸಲಾಗುವುದು ಎಂದು ಸಂಸದ ಭಗವಂತ್ ಖೂಬಾ ಹೇಳಿದ್ದಾರೆ. 
 
ಖಾನಾಪುರದಿಂದ ಮರಗುತ್ತಿಯವರೆಗೆ ರೈಲ್ವೆ ಕಾಮಗಾರಿಯನ್ನು ವೀಕ್ಷಿಸಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಕಳೆದ 1999ರಿಂದ ನೆನೆಗುದಿಯಲ್ಲಿದ್ದ ಬೀದರ್-ಕಲಬುರಗಿ ರೈಲ್ವೆ ಲೈನ್ ಏಪ್ರಿಲ್ ತಿಂಗಳಲ್ಲಿ ಮುಕ್ತಾಯವಾಗಲಿದೆ ಎಂದರು. 
 
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ರೈಲ್ವೆ ಯೋಜನೆಗೆ ರಾಜ್ಯದ ಪಾಲಿನ ಅರ್ಧದಷ್ಟು ಹಣವನ್ನು ಸರಕಾರದಿಂದ ನೀಡಿದ್ದರೆ, ಅಂದಿನ ರೈಲ್ವೆ ಖಾತೆ ಸಚಿವ ಬಸವನಗೌಡ ಪಾಟೀಲ್ ಯಾತ್ನಾಳ್ ಯೋಜನೆಗೆ ಮೊದಲ ಆದ್ಯತೆ ನೀಡಿದ್ದರು ಎಂದು ಸಂತಸ ವ್ಯಕ್ತಪಡಿಸಿದರು.  
 
ದಕ್ಷಿಣ ಮಧ್ಯೆ ರೈಲ್ವೆ ವಿಭಾಗದ ಮುಖ್ಯ ಇಂಜಿನಿಯರ್ ಟಿ.ಪಿ.ನಾರಾಯಣ್‌ರಾವ್ ಮಾತನಾಡಿ, ಬೀದರ್-ಕಲಬುರಗಿ ರೈಲ್ವೆ ಮಾರ್ಗ 1500 ಕೋಟಿ ರೂಪಾಯಿಗಳ ಯೋಜನೆಯಾಗಿದ್ದು, ಡಿಸೆಂಬರ್ ವೇಳೆಗೆ ಎಲ್ಲಾ ಕಾಮಗಾರಿಗಳು ಪೂರ್ಣಗೊಳ್ಳಲಿವೆ. ಜನೆವರಿಯಲ್ಲಿ ಪ್ರಾಯೋಗಿಕ ಪರೀಕ್ಷೆ ನಡೆಯಲಿದ್ದು ಏಪ್ರಿಲ್ ವೇಳೆಗೆ ರೈಲು ಸಂಚಾರ ಆರಂಭವಾಗಲಿದೆ ಎಂದರು. 
 
110.4 ಕಿ.ಮೀ ರೈಲ್ವೆ ಮಾರ್ಗದಲ್ಲಿ 104 ಕಿ.ಮೀ ರೈಲು ಹಳಿ ಜೋಡಣೆ ಪೂರ್ಣಗೊಂಡಿದೆ. ಕಲಬುರಗಿ ಜಿಲ್ಲೆಯ ಮರಗುತ್ತಿಯಲ್ಲಿ 1.67 ಕಿ.ಮೀ ಟನಲ್ ನಿರ್ಮಾಣದಲ್ಲಿ 1.04 ಕಿ. ಮೀ ಕಾಮಗಾರಿ ಮುಗಿದಿದೆ. 200 ಮೀಟರ್ ಕಾಮಗಾರಿ ಶೀಘ್ರದಲ್ಲಿ ಮುಕ್ತಾಯಗೊಳ್ಳಲಿದೆ ಎಂದು ತಿಳಿಸಿದ್ದಾರೆ. 
 
ಬೀದರ್-ಕಲಬುರಗಿ ರೈಲ್ವೆ ಮಾರ್ಗದಲ್ಲಿ 14 ಬೃಹತ್ ಸೇತುವೆಗಳು, 183 ಸಣ್ಣ ಪ್ರಮಾಣದ ಸೇತುವೆಗಳು, 12 ಓವರ್ ಬ್ರಿಡ್ಜ್‌ಗಳು ಮತ್ತು 53 ಅಂಡರ್‌ಬ್ರಿಡ್ಜ್‌ಗಳಿವೆ. ಬೀದರ್‌ನಿಂದ ಕಲಬುರಗಿವರೆಗೆ 13 ರೈಲ್ವೆ ನಿಲ್ದಾಣಗಳಿರಲಿವೆ ಎಂದು ಮುಖ್ಯ ಇಂಜಿನಿಯರ್ ನಾರಾಯಣ್ ರಾವ್ ತಿಳಿಸಿದ್ದಾರೆ 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2029 ರಲ್ಲಿ ಕೇಂದ್ರದಲ್ಲಿ ನಾವು ಬಂದಾಗ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

ಮುಂದಿನ ಸುದ್ದಿ
Show comments