Webdunia - Bharat's app for daily news and videos

Install App

ಮೊಮ್ಮಗಳಿಗಿಂತಲೂ ಚಿಕ್ಕವಳಾದ ಜತೆ ಯಡಿಯೂರಪ್ಪ ಇಂತಹ ಕೃತ್ಯವೆಸಗುತ್ತಾರೆಂದು ಊಹಿಸಲೂ ಅಸಾಧ್ಯ: ಸಹೋದರನ Video ವೈರಲ್‌

Sampriya
ಮಂಗಳವಾರ, 7 ಜನವರಿ 2025 (18:06 IST)
Photo Courtesy X
ಬೆಂಗಳೂರು: ಮಾಜಿ ಸಿಎಂ ಹಾಗೂ ಹಿರಿಯ ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣ ಇದೀಗ ಮತ್ತೇ ಚರ್ಚೆಯಾಗುತ್ತಿದೆ. ಇದಕ್ಕೆಲ್ಲ ಕಾರಣ ಸಂತ್ರಸ್ಥೆಯ ಸಹೋದರನ ವಿಡಿಯೋ ಹೇಳಿಕೆ.  ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಶೇರ್ ಮಾಡಿರುವ ವ್ಯಕ್ತಿ ಬಿಎಸ್‌ವೈ ವಿರುದ್ಧ ಆರೋಪಗಳ ಸುರಿಮಳೆ ಸುರಿಸಿದ್ದಾರೆ.

ತನ್ನ ಸಹೋದರಿ ತನಗಾದ ಚಿತ್ರಹಿಂಸೆಯಿಂದಾಗಿ ನಿತ್ಯ ನರಕಯಾತನೆ ಅನುಭವಿಸುತ್ತಿದ್ದಾಳೆ ಎಂದು ನೋವು ತೋಡುಕೊಂಡಿದ್ದಾರೆ.

ಅತೀವ ದುಃಖದಿಂದ ನಾನು ಇಂದು ಈ ವಿಡಿಯೋ ಮಾಡುತ್ತಿದ್ದೇನೆ. ನನ್ನ ಪುಟ್ಟ ತಂಗಿ ಮೇಲಾದ ದೌರ್ಜನ್ಯದಿಂದಾಗಿ ನನ್ನ ಕುಟುಂಬ ಚೇತರಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇದಕ್ಕೆಲ್ಲಾ ಕಾರಣ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ. ನಿಜಕ್ಕೂ ಯಡಿಯೂರಪ್ಪ ರಂತಹವರು ಇಂತಹ ಕೃತ್ಯವೆಸಗುತ್ತಾರೆಂದು ಊಹಿಸಲೂ ಅಸಾಧ್ಯ. ಅದೂ ಕೂಡ ಅವರ ಮೊಮ್ಮಕ್ಕಳಿಗಿಂತಲೂ ಚಿಕ್ಕವಳಾದ ನನ್ನ ಪುಟ್ಟ ತಂಗಿ ಮೇಲೆ ಇಂತಹ ಕೃತ್ಯ ನಡೆಸಿದ್ಜಾರೆ. ನನಗೆ ಮತ್ತು ನನ್ನ ಪುಟ್ಟ ತಂಗಿಗೆ ಇದು ನಿಜಕ್ಕೂ ಆಘಾತವಾಗಿದೆ.'

ನನ್ನ ಪುಟ್ಟ ತಂಗಿ ತನ್ನ ಮೇಲಾದ ದೌರ್ಜನ್ಯದಿಂದಾಗಿ ನಿತ್ಯ ನರಕ ಅನುಭವಿಸುತ್ತಿದ್ದಾಳೆ. ಅಂದು ನಡೆದ ಕೆಟ್ಟ ಘಟನೆಗಳು ಆಕೆಯನ್ನು ಇನ್ನಿಲ್ಲದಂತೆ ಕಾಡುತ್ತಿವೆ. ಇದೇ ಕೆಟ್ಟ ಘಟನೆಗಳ ವಿರುದ್ಧ ಹೋರಾಡುತ್ತಿದ್ದ ನನ್ನ ತಾಯಿ ಕೂಡ ನಮ್ಮನ್ನೆಲ್ಲ ಅಗಲಿದ್ದಾರೆ. ಅವರ ಸಾವು ನಮಗೆ ಇನ್ನೂ ಆಘಾತ ತಂದಿದೆ. ನಮ್ಮ ಭಾವನೆಗಳು, ಆಕ್ರೋಶ ಎಲ್ಲವನ್ನೂ ನಮ್ಮೊಳಗೇ ಇಟ್ಟುಕೊಂಡು ಒದ್ದಾಡುವಂತೆ ಮಾಡಿದೆ. ನಮ್ಮ ತಾಯಿಯೇ ನಮ್ಮ ಧೈರ್ಯವಾಗಿದ್ದರು. ಆದರೆ ಅವರ ಸಾವು ನ್ಯಾಯಕ್ಕಾಗಿ ಹೋರಾಡುವ ನಮ್ಮ ಹಾದಿಯಲ್ಲಿ ನಮಗೆ ಭರಿಸಲಾರದ ನಷ್ಟ ತಂದಿದೆ. ಸುಮಾರು ಒಂದು ದಶಕದಿಂದ ಅಂದರೆ 2016ರಲ್ಲಿ ಮೊದಲ ಪೋಕ್ಸೋ ಪ್ರಕರಣ ದಾಖಲಾದ ದಿನದಿಂದಲೂ ಆಕೆ ಈ ಹೋರಾಟ ನಡೆಸಿದ್ದರು.

ನ್ಯಾಯಕ್ಕಾಗಿ ನಮ್ಮ ತಾಯಿ ವಿವಿಧ ನಾಯಕರನ್ನು, ಅಧಿಕಾರಿಗಳನ್ನು ಭೇಟಿಯಾದರು. ಆದರೆ ಆಕೆಗೆ ನ್ಯಾಯ ಕೊಡಿಸುವ ಬದಲು ಆಕೆಯ ವಿರುದ್ಧವೇ ಸುಳ್ಳು ಪ್ರಕರಣಗಳು ದಾಖಲಾದವು. ನಮ್ಮ ತಾಯಿ ವಿರುದ್ಧ ದಾಖಲಾದ ಯಾವುದೇ ಪ್ರಕರಣವೂ ಸತ್ಯವಲ್ಲ. ಅದೆಲ್ಲ ಸುಳ್ಳು ಪ್ರಕರಣಗಳು.. ಬಿಎಸ್ ಯಡಿಯೂರಪ್ಪರನ್ನು ರಕ್ಷಿಸಲು ನಮ್ಮ ತಾಯಿ ವಿರುದ್ಧ ಹಾಕಲಾದ ಸುಳ್ಳು ಪ್ರಕರಣಗಳು ಅವು ಎಂದು ಆರೋಪಿಸಿದ್ದಾರೆ.

<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನರ್ಸ್ ನಿಮಿಷಾ ಪ್ರಿಯಾ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಮರಣದಂಡನೆ ಶಿಕ್ಷೆ ಇನ್ನೂ ರದ್ದಾಗಿಲ್ಲ ಎಂದ ಎಂಇಎ

2019 ರಲ್ಲಿ ತೀರಿಕೊಂಡಿದ್ದ ಅರುಣ್ ಜೇಟ್ಲಿ 2020 ರಲ್ಲಿ ಬೆದರಿಕೆ ರಾಹುಲ್ ಗಾಂಧಿಗೆ ಬೆದರಿಕೆ ಹಾಕಿದ್ರಂತೆ

ಪ್ರಜ್ವಲ್ ರೇವಣ್ಣಗೆ ಜೀವನ ಪರ್ಯಂತ ಜೈಲು ಶಿಕ್ಷೆ, ಕಣ್ಣೀರು ಹಾಕಿದ ಅಜ್ಜ ದೇವೇಗೌಡ

ರಾಹುಲ್ ಗಾಂಧಿಯಿಂದ ಮತಗಳ್ಳತನ ಆರೋಪ: ಕಾಂಗ್ರೆಸ್ ಪ್ರತಿಭಟನೆಗೆ ಪ್ರತಿತಂತ್ರ ಹೂಡಿದ ಬಿಜೆಪಿ

ಮೊಸಳೆಕಣ್ಣೀರು ಹಾಕುತ್ತಿರುವ ರಾಹುಲ್ ಗಾಂಧಿ, ರೈತರು ಆತ್ಮಹತ್ಯೆ ಮಾಡಿಕೊಂಡಾಗ ಎಲ್ಲಿ ಇದ್ರೂ: ಪಿ.ಸಿ.ಮೋಹನ್

ಮುಂದಿನ ಸುದ್ದಿ
Show comments