ಕೊರೊನಾ ನೆಗೆಟಿವ್ ಇದ್ದಾಗ ವಿಷ ಕುಡಿದ ; ಪಾಸಿಟಿವ್ ಬಂದಾಗ ಆತ್ಮಹತ್ಯೆ ಮಾಡಿಕೊಂಡ

Webdunia
ಶನಿವಾರ, 1 ಆಗಸ್ಟ್ 2020 (22:56 IST)
ಕೊರೊನಾ ವೈರಸ್ ಗೆ ಹೆದರಿದ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಕೊರೊನಾಗೆ ಹೆದರಿದ ವ್ಯಕ್ತಿಯೊಬ್ಬರು  ಚಿಕ್ಕಬಳ್ಳಾಪುರ ಜಿಲ್ಲಾ ಕೋವಿಡ್-19 ಆಸ್ಪತ್ರೆಯಿಂದ ತಪ್ಪಿಸಿಕೊಂಡು  ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಚಿಂತಾಮಣಿ ತಾಲೂಕು ಬಟ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮದ 55 ವರ್ಷದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡವರು.  
ತಿಂಗಳಿಂದ ಮನೆಗೂ ಹೋಗದೆ ಗ್ರಾಮದಲ್ಲಿ ತೋಟದ ಮನೆಯಲ್ಲಿ ವಾಸ ಮಾಡುತ್ತಾ ಜೀವನ ಕಳೆಯುತ್ತಿದ್ದರು. ಈ ಹಿನ್ನೆಲೆಯಲ್ಲಿ ಕಳೆದ ಎರಡು ದಿನಗಳ ಹಿಂದೆ ಮಗ ಚಿಂತಾಮಣಿ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಈತನಿಗೆ ಕೋವಿಡ್ ಪರೀಕ್ಷೆ ಮಾಡಿಸಿದ್ದು ನೆಗಟಿವ್ ಸಹ ಬಂದಿತ್ತು. ಆದರೆ ಅದ್ಯಾಕೋ ಏನೋ ಅದೇ ಭಯದಲ್ಲೇ ಇದ್ದ ಈತ, ಅಂದು ರಾತ್ರಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದನು.

ಕೂಡಲೇ ಮನೆಯವರು ಚಿಂತಾಮಣಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ಸ್ಥಳಾಂತರ  ಮಾಡಿದ್ದರು. ಚಿಕಿತ್ಸೆ ವೇಳೆ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯಲ್ಲಿ ಮತ್ತೆ ಕೋವಿಡ್ ಪರೀಕ್ಷೆ  ಮಾಡಿಸಿದ್ದು, ಕೋವಿಡ್ ಪಾಸಿಟಿವ್ ಎಂದು ತಿಳಿದುಬಂದಿದೆ.

ಇದರಿಂದ ಸಂಜೆ ಈತನನ್ನು ಜಿಲ್ಲಾ ಕೋವಿಡ್-19 ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಡೀ ರಾತ್ರಿ ನಾನು ಮನೆಗೆ ಹೋಗಬೇಕು ಅಂತ ಪಟ್ಟು ಹಿಡಿದಿದ್ದಾನೆ. ಕೊನೆಗೆ ಮನೆಗೆ ಕಳುಹಿಸಲ್ಲ ಅಂದಿದ್ದಕ್ಕೆ ಆಸ್ಪತ್ರೆಯಲ್ಲಿ ಎಲ್ಲರೂ ಮಲಗಿದ ನಂತರ ಅಲ್ಲಿಂದ ತಪ್ಪಿಸಿಕೊಂಡು ಪರಾರಿ ಆಗಿದ್ದಾನೆ.  ಗುಂತಪನಹಳ್ಳಿ ಗ್ರಾಮದ ಬಳಿ ಹೋಗಿ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಾಡುವುದನ್ನೆಲ್ಲಾ ಮಾಡಿ ಈಗ ನೆರೆಹೊರೆ ರಾಷ್ಟ್ರಗಳ ಮುಂದೆ ಮಂಡಿಯೂರಿದ ಇರಾನ್‌

ಸಿಲಿಂಡರ್ ಹೊತ್ತು ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ಮಾಡಿದ ಕಾಂಗ್ರೆಸ್

ಬಜೆಟ್ ಮಂಡನೆ ಬೆನ್ನಲ್ಲೇ ಸಿಎಂ ಬದಲಾವಣೆ ಬಗ್ಗೆ ಸಿದ್ದರಾಮಯ್ಯ ಶಾಕಿಂಗ್ ಹೇಳಿಕೆ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments