Webdunia - Bharat's app for daily news and videos

Install App

ಮೋದಿ‌ ಭದ್ರತೆಗಾಗಿ ಮದ್ಯರಾತ್ರಿಯಿಂದಲೇ ಪೊಲೀಸ್ರ ಬಿಗಿ ಬಂದೋಬಸ್ತ್

Webdunia
ಶನಿವಾರ, 26 ಆಗಸ್ಟ್ 2023 (20:40 IST)
ಚಂದ್ರನ ಕಾಣದ ಭಾಗ ದಕ್ಷಿಣ ಭಾಗದಲ್ಲಿ ಉಪಗ್ರಹ ಇಳಿಸುವಲ್ಲಿ ಯಶಸ್ವಿಯಾದ ಇಸ್ರೋ ವಿಜ್ಞಾನಿಗಳಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ರು. ಬೆಳಗ್ಗೆ ಆರು ಗಂಟೆ ಸುಮಾರಿಗೆ ಹೆಚ್ಎಎಲ್ ಏರ್ಪೋರ್ಟ್ ಗೆ ಬಂದಿಳಿದ ಮೋದಿ ಇಸ್ರೋ ಕಚೇರಿಗೆ ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ ತೆರಳಿದ್ರು, ಕಾರ್ಯಕ್ರಮ ಮುಗಿಸಿ ದೆಹಲಿಗೆ ಪ್ರಯಾಣ ಬೆಳೆಸಿದ್ರು. ಚಂದ್ರನ ಡಾರ್ಕ್ ಪ್ಲೇಸ್ ಆದ ದಕ್ಷಿಣ ಭಾಗದಲ್ಲಿ ಪ್ರಜ್ಞಾನ್ ಉಪಗ್ರಹ ಸೇಫ್ ಲ್ಯಾಂಡ್ ಮಾಡುವಲ್ಲಿ ಇಸ್ರೋ ವಿಜ್ಞಾನಿಗಳು ಯಶಸ್ವಿಯಾಗಿದ್ದಾರೆ. ಅದು ಭಾರತದ ಪ್ರತಿಯೊಬ್ಬ ಪ್ರಜೆಯೂ ಹೆಮ್ಮೆ ಪಡುವ ವಿಷ್ಯ. ಚಂದಿರನ ಅಂಗಳದಲ್ಲಿ ವಿಕ್ರಂ ಲ್ಯಾಂಡರ್ ಸೇಪ್ ಲ್ಯಾಂಡ್ ಆಗುತ್ತಿದ್ದಂತೆ ವಿಜ್ಞಾನಿಗಳು ಸಂತಸದಿಂದ ಕುಣಿದಾಡಿದ್ರು. ಅಂದು ಮಾತನಾಡಿ ಇಸ್ರೋ ವಿಜ್ಞಾನಿಗಳ ಸಾಧನೆ ಬಗ್ಗೆ ಹಾಡಿ ಹೊಗಳಿದ್ದ ಪ್ರಧಾನಿ ನರೇಂದ್ರ ಮೋದಿ ಇಂದು ನೇರವಾಗಿ ಇಸ್ರೋ ಕಚೇರಿಗೆ ಭೇಟಿ ನೀಡಿ ಚಂದ್ರನ ಕಾಣದ ಭಾಗದ‌ ಮೇಲೆ ಭಾರತದ ಹೆಜ್ಜೆ ಮುದ್ರಿಸುವಲ್ಲಿ ಶ್ರಮಿಸಿದ ಇಸ್ರೋ ಕಲಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ. 

ಬೆಳಗ್ಗೆ ಆರು ಗಂಟೆ ಸಮಯಕ್ಕೆ ಭಾರತೀಯ ಸೇನಾ ವಿಮಾನದಲ್ಲಿ ಹೆಚ್ ಎಎಲ್ ಏರ್ಪೋರ್ಟ್ ಗೆ ಬಂದಿಳಿದ ಪ್ರಧಾನಿ ಮೋದಿಯವ್ರು ಜಾಲಹಳ್ಳಿ‌ ಸಮೀಪದ ಇಸ್ರೋ ಕಚೇರಿಗೆ ತೆರಳುವ ಮುನ್ನ ಏರ್ಪೋರ್ಟ್ ಕಚೇರಿ ಆವರಣದಲ್ಲಿ‌ಏರ್ಪಡಿಸಿದ್ದ ಪ್ರಚಾರ ಕಾರ್ಯಲ್ರಮದಲ್ಲಿ ಭಾಗಿಯಾಗಿ ಇಸ್ರೋ ವಿಜ್ಞಾನಿಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ರು. ಈ ವೇಳೆ ಹೆಚ್ ಎಎಲ್ ಆವರಣದಲ್ಲಿ‌ ನೂರಾರು ಜನ ಮೋದಿ‌ಅಭಿಮಾನಿಗಳು ಹಾಗೂ ಬಿಜೆಪಿ ಕಾರ್ಯಕರ್ತರು ಜಮಾಯಿಸಿದ್ರು.‌ಈ ವೇಳೆ ಯಾವುದೇ ಅಹಿತರಕ ಘಟನೆಗಳಿಗೆ ಅವಕಾಶ ನೀಡಬಾರದೆಂದು‌ ಬೆಂಗಳೂರು ಸಿಟಿ ಪೊಲೀಸ್ರು ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಂಡಿದ್ರು. ಹೆಚ್ ಎ ಎಲ್ ಟು ಪೀಣ್ಯಾ ರಸ್ತೆ ನಾಳೆ ಸಂಪೂರ್ಣ ಖಾಕಿಮಯವಾಗಿತ್ತು.  ಸರಿ ಸುಮಾರು 25 ಕಿಲೋಮೀಟರ್ ವರೆಗೆ ರಸ್ತೆಯ ಎರಡು ಬದಿಯಲ್ಲಿ  10 ಮೀಟರ್ ಗೆ ಒಬ್ಬರಂತೆ 2 ಸಾವಿರ ಪೊಲೀಸ್ ಸಿಬ್ಬಂದಿಯನ್ನ ಭದ್ರತೆಗೆ ನಿಯೋಜನೆ ಮಾಡಲಾಗಿತ್ತು.

ಅದರ ಜೊತೆಗೆ ಪ್ರಮುಖ ಜಂಕ್ಷನ್ ಗಳಲ್ಲಿ ಬಾಂಬ್ ಸ್ಕ್ವಾಡ್ ನಿಂದಲೂ ತಪಾಸಣೆ ಮಾಡಿದ್ದು, ಮಧ್ಯರಾತ್ರಿಯಿಂದಲೇ ಭದ್ರತೆಗಾಗಿ ನಿಯೋಜನೆಗೊಂಡಿದ್ದ ಸಿಬ್ಬಂದಿ ರಸ್ತೆಯಲ್ಲಿ ಸಂಚರಿಸೋ‌ ಅನುಮಾನಸ್ಪದರ ಮೇಲೆ‌ ನಿಗಾವಹಿಸಿದ್ರು.‌ಇದರ ಜೊತೆಗೆ ಮೋದಿ‌ ಹೆಚ್ ಎಎಲ್ ಏರ್ಪೋಟ್ ನಿಂದ ಹೊರಡುವ ಮುನ್ನ  ಹಳೆ ಮದ್ರಾಸ್ ರಸ್ತೆ , ದೊಮ್ಮಲೂರು ,ಟ್ರಿನಿಟಿ ಸರ್ಕಲ್ , ಬಳ್ಳಾರಿ ರಸ್ತೆ , ಮೇಖ್ರಿ ಸರ್ಕಲ್ ಹಾಗೂ  ಯಶ್ವಂತ್ಪುರ ಮಾರ್ಗದಲ್ಲಿ‌ಸಾಗುವ ವಾಹನಗಳನ್ನ  ನಿಷೇಧಿಸಿ ವಾಹನಗಳ ಸಂಚಾರಕ್ಕೆ ಪರ್ಯಾಯ ರಸ್ತೆಗಳನ್ನ‌‌‌ ಸೂಚಿಸಿದ್ರು.

ಅದರ ಜೊತೆಗೆ ಮೋದಿ‌ ಸಂಚರಿಸೋ ವೇಳೆ ಭದ್ರತೆಗಾಗಿಯೇ ಮೂವರು ಡಿಸಿಪಿಗಳನ್ನ ನಿಯೋಜನೆ ಮಾಡಲಾಗಿದ್ದು ದಕ್ಷಿಣ ವಿಭಾಗ ಡಿಸಿಪಿ ಕೃಷ್ಣಕಾಂತ್ , ಕೇಂದ್ರ ವಿಭಾಗ ಡಿಸಿಪಿ ಶ್ರೀನಿವಾಸ ಗೌಡ ಹಾಗೂ  ಉತ್ತರ ವಿಭಾಗ ಡಿಸಿಪಿ ಶಿವಪ್ರಕಾಶ್ ಅವರ ನೇತೃತ್ವದಲ್ಲಿ ಭದ್ರತೆ ನಿಯೋಜನೆ ಮಾಡಲಾಗಿತ್ತು. ಹೀಗಾಗಿ ಮೋದಿ ಭೇಟಿ ವೇಳೆ ಯಾವುದೇ ಅನಾಹುತ ಸಂಭವಿಸದೇ ಯಶಸ್ವಿಯಾಗಿ ಕಾರ್ಯಕ್ರಮ ನಡೆದಿದ್ದು, ಬಳಿಕ ನಿಗಧಿತ ಸಮಯಕ್ಕೆ ಹೆಚ್ಎಎಲ್ ವಿಮಾನದ ನಿಲ್ದಾಣದಿಂದ ದೆಹಲಿಗೆ ಪ್ರಯಾಣ ಬೆಳೆಸಿದ್ರು.  
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Viral video: ಕಾಲ್ತುಳಿತವಾದಾಗ ಹೇಗೆ ನಮ್ಮನ್ನು ರಕ್ಷಿಸಿಕೊಳ್ಳಬೇಕು, ವೈರಲ್ ವಿಡಿಯೋ ನೋಡಿ

Chinnaswamy stampede: ಸೆಕ್ಯುರಿಟಿ ಕೊಡಕ್ಕಾಗಲ್ಲ, ಡಿಸಿಪಿ ಪತ್ರ ವೈರಲ್: ನಾನವನಲ್ಲ ಅಂತಿದ್ದ ಸರ್ಕಾರಕ್ಕೆ ಮುಜುಗರ

Indore murder: ಹನಿಮೂನ್ ನಲ್ಲೇ ಗಂಡನಿಗೆ ಚಟ್ಟ ಕಟ್ಟಿದಳು: ಇಂಧೋರ್ ನಲ್ಲಿ ಪತ್ನಿಯ ಚಿಲ್ಲಿಂಗ್ ಮರ್ಡರ್ ಕತೆ

Siddaramaiah: ಕಮಿಷನರ್ ಭದ್ರತೆ ಕೊಡ್ಬೇಕಿತ್ತು, ನಂದೇನು ತಪ್ಪಿದೆ ಎಂದ ಸಿಎಂ: ಆರ್ಡರ್ ಕೊಟ್ಟಿದ್ದು ನೀವಲ್ವಾ ಎಂದ ಪಬ್ಲಿಕ್

ಮುಂದಿನ ಸುದ್ದಿ
Show comments