ಸುನೀಲ್ ಬಗ್ಗೆ ಪೊಲೀಸರು ಸೈಲೆಂಟ್​!

Webdunia
ಸೋಮವಾರ, 28 ನವೆಂಬರ್ 2022 (15:56 IST)
ಇತ್ತೀಚೆಗೆ ನಗರದ 86 ರೌಡಿಶೀಟರ್​​​ಗಳ ಮನೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದರು. ಆದ್ರೆ ಪೊಲೀಸರು ಪುಡಿ ರೌಡಿಗಳ ಮೇಲೆ ತಮ್ಮ ಪ್ರತಾಪ ತೋರಿಸಿ ಡಾನ್​ಗಳನ್ನು ಟಚ್ ಕೂಡ ಮಾಡದೆ ಸುಮ್ಮನಾಗಿದ್ದಾರೆ ಎಂಬ ಬಗ್ಗೆ ಚರ್ಚೆಯಾಗುತ್ತಿದೆ. ನವೆಂಬರ್ 23ರಂದು ನಡೆದಿದ್ದ ದಾಳಿ ವೇಳೆ ಎಸ್ಕೇಪ್ ಆದ ಎಂದು ಹೇಳಲಾಗುತ್ತಿದ್ದ ಸೈಲೆಂಟ್ ಸುನೀಲ ನಿನ್ನೆ ನಡೆದ ಕಾರ್ಯಕ್ರಮದಲ್ಲಿ ರಾಜಕೀಯ ಗಣ್ಯರೊಂದಿಗೆ ಕಾಣಿಸಿಕೊಂಡಿದ್ದಾನೆ. ಇತ್ತೀಚಿನ ದಾಳಿಯಲ್ಲಿ ಪೊಲೀಸರು ಪುಡಿ ರೌಡಿಗಳನ್ನ ಎತ್ತಾಕೊಂಡು ಬಂದು ಪ್ರತಾಪ ತೋರಿಸಿದ್ದಾರೆ. ಆದ್ರೆ ಪ್ರಮುಖ ರೌಡಿಗಳಾದ ಸೈಲೆಂಟ್ ಸುನೀಲ, ವಿಲ್ಸನ್ ಗಾರ್ಡನ್ ನಾಗ, ಸೈಕಲ್ ರವಿ, ಒಂಟೆ ರೋಹಿತ, ಕಾಡುಬೀಸನಹಳ್ಳಿ ರೋಹಿತ ಪರಾರಿಯಾಗಿದ್ದಾರೆಂದು ಸಿಸಿಬಿ ಪೊಲೀಸರು ಹೇಳಿಕೆ ಕೊಟ್ಟು ಸುಮ್ಮನಾಗಿದ್ದರು. ಇದರ ಬೆನ್ನಲ್ಲೇ ಈಗ ಅಂದು ಪರಾರಿಯಾಗಿದ್ದಾರೆಂದು ಹೇಳಿದ್ದ ಸೈಲೆಂಟ್ ಸುನೀಲ ನಿನ್ನೆ ಬಹಿರಂಗವಾಗಿ ರಾಜಕೀಯ ಕಾರ್ಯಕ್ರಮವೊಂದರಲ್ಲಿ ಕಾಣಿಸಿಕೊಂಡಿದ್ದಾನೆ. ರಾಜಕಾರಣಿಗಳ ಸಮ್ಮುಖದಲ್ಲೇ ಪ್ರತ್ಯಕ್ಷನಾಗಿದ್ದಾನೆ. ಹೀಗಾಗಿ ಪೊಲೀಸ್ ಇಲಾಖೆ ಬಗ್ಗೆ ಅನೇಕ ಅನುಮಾನಗಳು ಕಾಡುತ್ತಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ, ಪಂಜಾಬ್, ಯುಪಿಯಲ್ಲಿ ತೀವ್ರ ಹೀಟ್‌ವೇವ್ ಎಚ್ಚರಿಕೆ

ರಾಹುಲ್ ಗಾಂಧಿ ಒಬ್ಬ ಪಾಕಿಸ್ತಾನಿ ಏಜೆಂಟ್: ನಿತೇಶ್ ರಾಣೆ

ನಟ ಧರ್ಮೇಂದ್ರರಿಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಹೇಮಾ ಮಾಲಿನಿ

ಅಂಬೆನಾಲಿ ಘಾಟ್‌ನಲ್ಲಿ ಸಾವಿರ ಅಡಿ ಆಳದ ಕಣಿವೆಗೆ ಉರುಳಿದ ಕಾರು: ಎಂಟು ಯುವಕರು ದಾರುಣ ಸಾವು

ಬೆಳ್ತಂಗಡಿ ತಾಲ್ಲೂಕಿನ ಟ್ರೆಕ್ಕಿಂಗ್ ತಾಣಕ್ಕೆ ಹೋಗುವ ಪ್ಲಾನ್ ಮಾಡಿದ್ದವರಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments