ಫೈರ್ ಮಾಡಿ ಕಳ್ಳನನ್ನು ಅರೆಸ್ಟ್ ಮಾಡಿದ ಪೊಲೀಸರು!

Webdunia
ಮಂಗಳವಾರ, 11 ಡಿಸೆಂಬರ್ 2018 (19:56 IST)
ರಾಜಧಾನಿಯಲ್ಲಿ ಮತ್ತೆ ಪೊಲೀಸರ ಗುಂಡಿನ ಸದ್ದು ಕೇಳಿಬಂದಿದೆ. ಗುಂಡು ಹೊಡೆದು ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿಸಿ ಕರೆತರುವಾಗ ತಪ್ಪಿಸಿಕೊಂಡು ಪರಾರಿಯಾಗಲು ಯತ್ನಿಸಿದ ಕುಖ್ಯಾತ ಗಂಧದ ಮರ ಕಳ್ಳ ಮುಜಾಯಿದ್ ಉಲ್ಲಾನಿಗೆ ಕಬ್ಬನ್ಪಾರ್ಕ್ ಪೊಲೀಸರು ಗುಂಡು ಹೊಡೆದು ಬಂಧಿಸಿದ್ದಾರೆ.

ನೆರೆಯ ತಮಿಳುನಾಡಿನಿಂದ ಕೂಲಿಯವರನ್ನು ಕರೆತಂದು ವ್ಯವಸ್ಥಿತವಾಗಿ ಸುಮಾರು 50 ಕ್ಕೂ ಹೆಚ್ಚು ಕಡೆಗಳಲ್ಲಿ ಗಂಧದ ಮರಗಳ ಕಳವು ಮಾಡಿಸಿದ್ದ ಸಾರಾಯಿಪಾಳ್ಯದ ಮುಜಾಯಿದ್ ಉಲ್ಲಾ (30)ಪೊಲೀಸರ ಗುಂಡೇಟು ತಗುಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಮುಜಾಯಿದ್ ಉಲ್ಲಾ ಮತ್ತವನ ಸಹೋದರ ಇಮ್ದಾದ್ನನ್ನು ಬಂಧಿಸಿ ಕಬ್ಬನ್ಪಾರ್ಕ್ ಠಾಣೆಗೆ ವಿಚಾರಣೆ ನಡೆಸಲು ಕರೆತರುತ್ತಿದ್ದಾಗ ಕಬ್ಬನ್ ಪಾರ್ಕ್ ಸಮಾನಾಂತರ ರಸ್ತೆಯಲ್ಲಿ ಹೋಗುತ್ತಿರುವಾಗ ಖಾಸಗಿ ವಾಹನದಲ್ಲಿದ್ದ ಮುಜಾಯಿದ್ ಉಲ್ಲಾ ಬೆಂಗಾವಲಿಗಿದ್ದ ಪೇದೆ ಕೃಷ್ಣಮೂರ್ತಿಯನ್ನು ಚಲಿಸುವ ವಾಹದಿಂದ ಕೆಳಗೆ ತಳ್ಳಿ ಕಬ್ಬನ್ ಪಾರ್ಕ್ ಒಳಗೆ ಓಡಿ ಹೋಗಿದ್ದಾನೆ.
ಆಗ ಪೊಲೀಸರ ಮೇಲೆಯೇ ಮುಜಾಯಿದ್ ಉಲ್ಲಾ ಹಲ್ಲೆಗೆ ಯತ್ನಿಸಿದ್ದಾನೆ. ಆಗ ಆತನ ಮೇಲೆ ಒಂದು ಸುತ್ತು ಗುಂಡು ಪೊಲೀಸರು ಹಾರಿಸಿದ್ದಾರೆ ಗುಂಡು ಆರೋಪಿಯ ಬಲಗಾಲಿಗೆ ತಗುಲಿ ಕುಸಿದುಬಿದ್ದ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸುಮಾರು ಒಂದು ಗಂಟೆಗಳ ಕಾಲ ಟ್ರಾಫಿಕ್ ಜಾಮ್ ಮಾಡಿಸಿದ ಆನೆ, ಚಾರ್ಮಾಡಿಯಲ್ಲಿ ನಿಜವಾಗ್ಲೂ ಆಗಿದ್ದೇನು

Karnataka Weather: ಮುಂದಿನ 24 ಗಂಟೆಯ ಹವಾಮಾನ ಬದಲಾವಣೆ ಕೇಳಿದ್ರೆ ಶಾಕ್

ಮನೆ ಕಟ್ಟೋಣ ಎಂದು ವಿಚ್ಛೇಧಿತ ಮಹಿಳೆಗೆ ಕೈಕೊಟ್ಟ ಎರಡನೇ ಗಂಡ, ಆಗಿದ್ದೇನು ಗೊತ್ತಾ

ಕನ್ನಡ, ಕೇರಳ ಭಾಷಾ ವಿವಾದ: ಸಿಎಂ ಪಿಣರಾಯಿ ವಿಜಯನ್ ಪ್ರತಿಕ್ರಿಯೆ

ಪ್ರೀತಿ ತಿರಸ್ಕರಿಸಿದ ಯುವತಿಗೆ ಪಾಗಲ್ ಪ್ರೇಮಿಯ ಕಾಟ, ಕೊನೆಗೂ ವಶಕ್ಕೆ

ಮುಂದಿನ ಸುದ್ದಿ
Show comments