Webdunia - Bharat's app for daily news and videos

Install App

ಖತರ್ನಾಕ್ ಸರಗಳ್ಳರನ್ನ ಬಂಧಿಸಿದ ಪೊಲೀಸರು

Webdunia
ಭಾನುವಾರ, 13 ನವೆಂಬರ್ 2022 (20:29 IST)
ಮೋಜು ಜೀವನ ನಡೆಸಲು ಬೆಂಗಳೂರಿನಲ್ಲಿ ಸರಗಳ್ಳತನ ಮಾಡುತ್ತಿದ್ದ ಕೊಪ್ಪಳ ಮೂಲದ ವಿದ್ಯಾರ್ಥಿ ಸೇರಿ ಇಬ್ಬರು ಸರಗಳ್ಳರನ್ನು ಗಿರಿನಗರ ಪೊಲೀಸರು ಸೆರೆಹಿಡಿದಿದ್ದಾರೆ.
ಸುರೇಶ್ ಬಂಧಿತನಾಗಿದ್ದು ಮತ್ತೋರ್ವ ಕಾನೂನುಸಂಘರ್ಷಕ್ಕೆ ಒಳಗಾದ ಬಾಲಕನಾಗಿದ್ದು ಈತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ‌. ಆರೋಪಿ ಸುರೇಶ್ ನಗರದಲ್ಲಿ ಜ್ಯೊಮೊಟೊ ಕಂಪೆನಿಯಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ. ಸಹಜವಾಗಿ ಎಲ್ಲಾ ಏರಿಯಾಗಳ ಬಗ್ಗೆ ತಿಳಿದುಕೊಂಡಿದ್ದ. ಸುಲಭವಾಗಿ ಹಣ ಸಂಪಾದನೆ ಮಾಡಲು ಸರಗಳ್ಳತನ ಮಾಡಲು ಸಂಚು ರೂಪಿಸಿದ್ದ. ತನ್ನದೇ ಊರಿನ ಪರಿಚಯಸ್ಥನಾಗಿದ್ದ 10ನೇ ತರಗತಿ ವಿದ್ಯಾರ್ಥಿಯನ್ನು ಪುಸಲಾಯಿಸಿ ನಗರಕ್ಕೆ ಕರೆತಂದಿದ್ದ. ಒಂದೇ ಬೈಕಿನಲ್ಲಿ ತೆರಳಿ ಒಂಟಿಯಾಗಿ ಓಡಾಡುವ ವೃದ್ದೆ ಹಾಗೂ ಮಹಿಳೆಯನ್ನು ಗುರಿಯಾಗಿಸಿಕೊಂಡು ಸರಗಳ್ಳತನ ಮಾಡುತ್ತಿದ್ದರು. ಕೃತ್ಯವೆಸಗಿದ ಬಳಿಕ ಊರಿಗೆ ಹೋಗಿ ತಲೆಮರೆಸಿಕೊಳ್ಳುತ್ತಿದ್ದರು. ಕೆಲ ತಿಂಗಳ ಬಳಿಕ ಮತ್ತೆ ನಗರಕ್ಕೆ ಬಂದು ಅಪರಾಧ ಕೃತ್ಯವೆಸಗುತ್ತಿದ್ದರು. ಇದೇ ರೀತಿ ವಿವೇಕ ನಗರ, ಗಿರಿನಗರ, ಸಿ.ಕೆ.ಅಚ್ಚುಕಟ್ಟು ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ‌ ಒಟ್ಟು ಐದು ಸರಗಳ್ಳತನ ಹಾಗೂ ಮನೆಗಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿರುವುದು  ತಿಳಿದುಬಂದಿರುವುದಾಗಿ ನಗರ ದಕ್ಷಿಣ ವಿಭಾಗದ ಡಿಸಿಪಿ ಕೃಷ್ಣಕಾಂತ್ ತಿಳಿಸಿದ್ದಾರೆ‌.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

AirIndia Crash: ಭಾರತದಲ್ಲಿ ಇದು ಕೊನೆಯ ರಾತ್ರಿ: ಲಂಡನ್ ಮೂಲದ ಜೇಮೀ ಮೀಕ್ ಭಾವುಕ ಪೋಸ್ಟ್‌

Air India Mishap: ಕೊನೆ ಕ್ಷಣದಲ್ಲಿ ಫೈಲಟ್ ಆ ಪದ ಬಳಸಬೇಕೆಂದರೆ ಎಂಥ ಕಠಿಣ ಪರಿಸ್ಥಿತಿ ಇತ್ತು ಗೊತ್ತಾ

ಮುಂದಿನ ಸುದ್ದಿ
Show comments