Select Your Language

Notifications

webdunia
webdunia
webdunia
webdunia

ಮಾಮೂಲಿ ನೀಡದ್ದಕ್ಕೆ ದಂಪತಿಗಳ ಮೇಲೆ ಪೊಲೀಸರಿಂದ ಹಲ್ಲೆ

ಮಾಮೂಲಿ ನೀಡದ್ದಕ್ಕೆ ದಂಪತಿಗಳ ಮೇಲೆ ಪೊಲೀಸರಿಂದ ಹಲ್ಲೆ
ಬೆಂಗಳೂರು , ಶುಕ್ರವಾರ, 13 ಅಕ್ಟೋಬರ್ 2017 (13:15 IST)
ಯಲಹಂಕ ನಗರದ ಎನ್‌ಇಎಸ್ ಸರ್ಕಲ್ ಬಳಿ ಟೀ ಅಂಗಡಿಯಿಟ್ಟು ವ್ಯಾಪಾರ ಮಾಡುತ್ತಿದ್ದ ದಂಪತಿಗಳ ಮಾಮೂಲಿ ನೀಡಿಲ್ಲವೆಂಬ ಕಾರಣಕ್ಕೆ ಪೊಲೀಸರು ಹಲ್ಲೆ ಮಾಡಿದ ಘಟನೆ ವರದಿಯಾಗಿದೆ.
ಫುಟ್‌ಪಾತ್‌ನಲ್ಲಿ ಟೀ ಅಂಗಡಿ ನಡೆಸುತ್ತಿದ್ದ ದಂಪತಿಗಳಾದ ರಾಜು ಮತ್ತು ಪತ್ನಿ ಅಂಬಿಕಾ ಮೇಲೆ ರಾತ್ರಿ ಗಸ್ತಿನಲ್ಲಿದ್ದ ಪೊಲೀಸರು ಹಲ್ಲೆ ನಡೆಸಿ, ಮಾಮೂಲಿ ಹಣ ನೀಡದಿದ್ದರೆ ವ್ಯಾಪಾರಕ್ಕೆ ಅವಕಾಶ ಕೊಡುವುದಿಲ್ಲ ಎಂದು ಧಮ್ಕಿ ಹಾಕಿದ್ದಾರೆ ಎಂದು ದಂಪತಿಗಳು ತಿಳಿಸಿದ್ದಾರೆ. 
 
ಸ್ಥಳೀಯರು  ಅಮಾಯಕ ದಂಪತಿಗಳ ಮೇಲೆ ನಡೆದ ಹಲ್ಲೆಯ ಬಗ್ಗೆ ಪೊಲೀಸರನ್ನ ಪ್ರಶ್ನಿಸಿದ್ದರಿಂದ ಸ್ಥಳೀಯರ ಜೊತೆಯೂ ಪೊಲೀಸರು ಅಸಭ್ಯ ವರ್ತನೆ ತೋರಿದ್ದಾರೆ ಎನ್ನಲಾಗಿದೆ.
 
ಯಲಹಂಕ ಉಪನಗರ ಪೊಲೀಸ್ ಠಾಣೆಯ ರಾತ್ರಿ ಗಸ್ತಿನಲ್ಲಿದ್ದ ಸಿಬ್ಬಂದಿಯ ಹೇಯ ವರ್ತನೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಗೊಳ್ಳುವುದಾಗಿ ಹಿರಿಯ ಅಧಿಕಾರಿಗಳು ಭರವಸೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

24 ಗಂಟೆಯಲ್ಲಿ 3ನೇ ಬಾರಿ ಕದನ ವಿರಾಮ ಉಲ್ಲಂಘಿಸಿದ ಪಾಕ್