Select Your Language

Notifications

webdunia
webdunia
webdunia
webdunia

ಪೊಲೀಸ್ ಪೇದೆ ಆತ್ಮಹತ್ಯೆಗೆ ಯತ್ನ: ಕಾರಣ ಶಾಕಿಂಗ್

ಪೊಲೀಸ್ ಪೇದೆ ಆತ್ಮಹತ್ಯೆಗೆ ಯತ್ನ: ಕಾರಣ ಶಾಕಿಂಗ್
ಕೋಲಾರ , ಭಾನುವಾರ, 1 ಸೆಪ್ಟಂಬರ್ 2019 (18:39 IST)
ಡಿ ಎ ಆರ್ ಪೊಲೀಸ್ ಪೇದೆ ಆತ್ಮಹತ್ಯೆಗೆ ಯತ್ನ ನಡೆಸಿರೋ ಘಟನೆ ನಡೆದಿದೆ.

ಕೋಲಾರದಲ್ಲಿ ಘಟನೆ ನಡೆದಿದ್ದು, ದಿವಾಕರ್ (35) ಆತ್ಮಹತ್ಯೆಗೆ ಯತ್ನಿಸಿದ ಡಿಎಆರ್ ಪೇದೆಯಾಗಿದ್ದಾರೆ.

ಕೋಲಾರದ ಕೆಜಿಎಫ್ ನ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಪೇದೆ ದಿವಾಕರ್, ಹಿರಿಯ ಅಧಿಕಾರಿಗಳ ಕಿರುಕುಳದಿಂದ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ.

ಮನೆಯಲ್ಲಿಯೇ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ದಿವಾಕರ್.

ಕೆಜಿಎಫ್ ನ ಸರ್ಕಾರಿ ಆಸ್ಪತ್ರೆಗೆ ಪೇದೆ ದಿವಾಕರ್ ನನ್ನು ಚಿಕಿತ್ಸೆಗಾಗಿ ದಾಖಲಿಸಿದ್ದಾರೆ ಕುಟುಂಬಸ್ಥರು. ಕೆಜಿಎಫ್ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನಂತ್ರ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಿವಾಕರ್ ದಾಖಲಾಗಿದ್ದಾರೆ.

ಪೇದೆ ದಿವಾಕರ್ ಈ ಮೊದಲು ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿಗೆ ಗನ್ ಮ್ಯಾನ್ ಆಗಿ ಕೆಲಸ ನಿರ್ವಹಿಸಿದ್ದರು. ಗನ್ ಮ್ಯಾನ್ ಕರ್ತವ್ಯದಿಂದ ಬಿಡುಗಡೆಯಾಗಿ ಇತ್ತೀಚೆಗೆ ಡಿಎಆರ್ ಗೆ ವಾಪಸ್ಸಾಗಿದ್ದರು.
ರಾಬರ್ಟ್ ಸನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.



Share this Story:

Follow Webdunia kannada

ಮುಂದಿನ ಸುದ್ದಿ

ಗೌರಿ-ಗಣೇಶ ಹಬ್ಬದಂದು ವಿಚಾರಣೆಗೆ ಹಾಜರಾಗಲಿರುವ ಡಿಕೆಶಿ