Webdunia - Bharat's app for daily news and videos

Install App

ಬಯೋಕಾನ್‌ನ ನಾಲ್ಕು ಲಾರಿ ವಶ: ಎಫ್ಐಆರ್ ದಾಖಲು

Webdunia
ಸೋಮವಾರ, 6 ಜುಲೈ 2015 (16:00 IST)
ಗ್ರಾಮಾಂತರ: ಅನಧಿಕೃತವಾಗಿ ರಾಸಾಯನಿಕವನ್ನು ತಂದು ಸುರಿಯಲಾಗುತ್ತಿದೆ ಎಂದು ಆರೋಪಿಸಿ ದೊಡ್ಡಬಳ್ಳಾಪುರ ತಾಲೂಕಿನ ಗುಂಡ್ಲಹಳ್ಳಿ ಗ್ರಾಮಸ್ಥರು, ಬಯೋಕಾನ್ ಕಂಪನಿಗೆ ಸೇರಿದ ನಾಲ್ಕು ಲಾರಿಗಳನ್ನು ಪೊಲೀಸರಿಂದ ಜಪ್ತಿ ಮಾಡಿಸಿದ್ದು, ಈ ಸಂಬಂಧ ಆರು ಮಂದಿ ವಿರುದ್ಧ ದೂರು ದಾಖಲಿಸಿದ್ದಾರೆ. 
 
ಏನಿದು ಪ್ರಕರಣ?:
ನಗರದ ಹೊಸೂರು ಗೇಟ್‌ ಬಳಿಯ ಜಿಗಣಿಯಲ್ಲಿರುವ ಬಯೋಕಾನ್ ಕಂಪನಿಯ ಅಪ್ರಯೋಜಕ ರಾಸಾಯನಿಕವನ್ನು ಟ್ಯಾಂಕರ್‌ಗಳ ಮೂಲಕ ತಂದು ಗುಂಡ್ಲಹಳ್ಳಿಯಲ್ಲಿ ಸುರಿಯಲಾಗುತ್ತಿದೆ. ಇದರಿಂದ ಗ್ರಾಮಸ್ಥರು ವಾಸ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಕುಪಿತಗೊಂಡಿದ್ದ ಗ್ರಾಮಸ್ಥರು, ನಿನ್ನೆ ರಾಸಾಯನಿಕವನ್ನು ಸುರಿಯಲು ಆಗಮಿಸಿದ್ದ 4 ಟ್ಯಾಂಕರ್‌ಗಳಿಗೆ ಮುತ್ತಿಗೆ ಹಾಕಿ ಅವುಗಳನ್ನು ಪೊಲೀಸರಿಗೊಪ್ಪಿಸಿದ್ದಾರೆ. 
 
ಇನ್ನು ಈ ಸಂಬಂಧ ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಗುತ್ತಿಗೆದಾರರು, ಲಾರಿ ಮಾಲೀಕರು ಹಾಗೂ ಬಯೋಕಾನ್ ಕಂಪನಿ ಸೇರಿದಂತೆ ಒಟ್ಟು ಆರು ಮಂದಿ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.  
 
ಈ ಹಿಂದೆ ಬೆಂಗಳೂರು ನಗರ ಉಸ್ತುವಾರಿ ಸಚಿವ ರಾಮಲಿಂಗಾ ರೆಡ್ಡಿ ಅವರು ಗ್ರಾಮಕ್ಕೆ ಭೇಟಿ ನೀಡಿದ್ದ ವೇಳೆ ಗ್ರಾಮಸ್ಥರು ಪ್ರತಿಭಟನೆ ಹಮ್ಮಿಕೊಂಡಿದ್ದರು. ಈ ವೇಳೆ ಕೇವಲ ಕಸವನ್ನು ಮಾತ್ರ ವಿಲೇವಾರಿ ಮಾಡಲಾಗುತ್ತದೆ ಎಂದು ಸಚಿವರು ತಿಳಿಸಿದ್ದರು. ಇದಕ್ಕೆ ಒಪ್ಪಿಗೆ ಸೂಚಿಸಿದ್ದ ಗ್ರಾಮಸ್ಥರು, ಅನುಮತಿ ನೀಡಿದ್ದರು. ಆದರೆ ಕಸದ ಬದಲಾಗಿ ರಾಸಾಯನಿಕ ಸುರಿಯಲಾಗುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.   

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments