Webdunia - Bharat's app for daily news and videos

Install App

ನದಹಬ್ಬದಲ್ಲಿ ಬಿಗಿ ಪೊಲೀಸ್ ಭದ್ರತೆ

Webdunia
ಸೋಮವಾರ, 26 ಸೆಪ್ಟಂಬರ್ 2022 (14:11 IST)
ನಾಡಹಬ್ಬ ದಸರಾ ಮಹೋತ್ಸವದ ಉದ್ಘಾಟನೆಗೆ ವೇದಿಕೆ ಸಜ್ಜಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಬಿಗಿ ಭದ್ರತೆ ಕೈಗೊಂಡಿದೆ.
 
ಈ ಕುರಿತಂತೆ ನಗರ ಪೊಲೀಸ್ ಕಮೀಷ್ನರ್ ಡಾ.ಚಂದ್ರಗುಪ್ತ ಮಾಹಿತಿ ನೀಡಿದ್ದಾರೆ. ದಸರಾ ಮಹೋತ್ಸವವನ್ನು ಕಣ್ತುಂಬಿಕೊಳ್ಳಲು ದೇಶ ವಿದೇಶದ ಲಕ್ಷಾಂತರ ಪ್ರವಾಸಿಗರು ಆಗಮಿಸುವುದರಿಂದ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಭದ್ರತೆ ಕೈಗೊಳ್ಳಲಾಗಿದೆ. ಜನಸ್ನೇಹಿಯಾಗಿ ಸಾರ್ವಜನಿಕರೊಂದಿಗೆ ಬೆರೆತು ಸೇವೆ ನೀಡಲು ಪೊಲೀಸ್ ಇಲಾಖೆ ಸಜ್ಜಾಗಿದ್ದು, ಇದಕ್ಕಾಗಿ ಮೈಸೂರು ನಗರದ 1255, ಹೊರ ಜಿಲ್ಲೆಗಳ 3580, ಮತ್ತು 650ಗೃಹ ರಕ್ಷಕ ಸಿಬ್ಬಂದಿ ಸೇರಿದಂತೆ ಒಟ್ಟು 5485 ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ
 
ದಸರಾ ಭದ್ರತೆಗಾಗಿ ನಗರದಲ್ಲಿ ಈಗಾಗಲೇ ಅಳವಡಿಸಿರುವ ಕಾಯಂ ಸಿಸಿ ಕ್ಯಾಮರಾಗಳ ಜತೆಗೆ, ಹೆಚ್ಚುವರಿಯಾಗಿ ಅರಮನೆ, ಬನ್ನಿಮಂಟಪ ಮೈದಾನ, ಮೆರವಣಿಗೆ ಮಾರ್ಗ, ಇತರೇ ಪ್ರಮುಖ ಸ್ಥಳಗಳಲ್ಲಿ 110 ಸಿಸಿ ಕ್ಯಾಮರಾಗಳನ್ನು ಅಳವಡಿಸಿದ್ದು, ಇವುಗಳು ದಿನದ 24 ಗಂಟೆಯೂ ರೆಕಾರ್ಡ್ ಆಗುವಂತೆ ವ್ಯವಸ್ಥೆ ಮಾಡಲಾಗಿದೆ. ವಿವಿಧ ಕಾರ್ಯಕ್ರಮಗಳು ನಡೆಯುವ ಸ್ಥಳದಲ್ಲಿ ಮುಂಚಿತವಾಗಿಯೇ 12 ಅಗ್ನಿಶಾಮಕ ದಳ, 8 ತುರ್ತು ವಾಹನಗಳಗಳನ್ನು ನಿಯೋಜನೆ ಮಾಡಲಾಗಿದೆ. ಅಕ್ಕಪಕ್ಕದ ಜಿಲ್ಲೆ, ರಾಜ್ಯಗಳಿಂದ ಅಪರಾಧಿಗಳು ಬಂದು ಅಪರಾಧ ಕೃತ್ಯ ಎಸಗುವುದನ್ನು ತಡೆಗಟ್ಟಲು ನುರಿತ ಅಪರಾಧ ವಿಭಾಗದ ಅಧಿಕಾರಿ, ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ. ವೃತ್ತಿ ನಿರತ ಹಳೆಯ ಪಿಕ್ ಪ್ಯಾಕೆಟರ್ಸ್ ಬ್ಯಾಗ್, ಸೂಟ್‌ಕೇಸ್ ಲಿಫ್ಟರ್ ಹಾಗೂ ಇತರೆ ಕಳುವು ಪ್ರಕರಣಗಳ ಅಪರಾಧಿಗಳ ವಿರುದ್ಧ ಭದ್ರತಾ ಕಾಯಿದೆಯಡಿ ಕ್ರಮಕೈಗೊಳ್ಳಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಡಿಗೇಶಿ ಬಳಿ 19 ನವಿಲುಗಳ ಸಾವು: ಎಚ್ಚೆತ್ತ ಸರ್ಕಾರದಿಂದ ದಿಟ್ಟ ನಿರ್ಧಾರ

ಟೆಸ್ಟ್‌ನಲ್ಲಿ ತುಂಬಾ ಮಿಸ್ ಮಾಡಿಕೊಂಡಿದ್ದೇನೆ, ವಿರಾಟ್‌ ದೇಶಕ್ಕೆ ನಿಮ್ಮ ಅವಶ್ಯಕತೆಯಿದೆ: ಶಶಿ ತರೂರ್ ಪೋಸ್ಟ್‌

ನೇಹಾ ಹಿರೇಮಠ ಹತ್ಯೆ ಸಂಬಂಧ: ಆರೋಪಿಗೆ ಫಯಾಜ್ ಬಿಗ್ ಶಾಕ್

ಧರ್ಮಸ್ಥಳ ಅಸ್ಥಿ ಉತ್ಖನನ: ದೂರುದಾರ ಗುರುತಿಸಿದ 11ನೇ ಪಾಯಿಂಟ್‌ನಲ್ಲಿ ಬಿಗ್‌ಟ್ವಿಸ್ಟ್‌

ಮೈಸೂರಿನತ್ತ ಹೆಜ್ಜೆ ಹಾಕಿದ ಅಭಿಮನ್ಯ ನೇತೃತ್ವದ 9 ಗಜಪಡೆ

ಮುಂದಿನ ಸುದ್ದಿ
Show comments