ನದಹಬ್ಬದಲ್ಲಿ ಬಿಗಿ ಪೊಲೀಸ್ ಭದ್ರತೆ

Webdunia
ಸೋಮವಾರ, 26 ಸೆಪ್ಟಂಬರ್ 2022 (14:11 IST)
ನಾಡಹಬ್ಬ ದಸರಾ ಮಹೋತ್ಸವದ ಉದ್ಘಾಟನೆಗೆ ವೇದಿಕೆ ಸಜ್ಜಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಬಿಗಿ ಭದ್ರತೆ ಕೈಗೊಂಡಿದೆ.
 
ಈ ಕುರಿತಂತೆ ನಗರ ಪೊಲೀಸ್ ಕಮೀಷ್ನರ್ ಡಾ.ಚಂದ್ರಗುಪ್ತ ಮಾಹಿತಿ ನೀಡಿದ್ದಾರೆ. ದಸರಾ ಮಹೋತ್ಸವವನ್ನು ಕಣ್ತುಂಬಿಕೊಳ್ಳಲು ದೇಶ ವಿದೇಶದ ಲಕ್ಷಾಂತರ ಪ್ರವಾಸಿಗರು ಆಗಮಿಸುವುದರಿಂದ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಭದ್ರತೆ ಕೈಗೊಳ್ಳಲಾಗಿದೆ. ಜನಸ್ನೇಹಿಯಾಗಿ ಸಾರ್ವಜನಿಕರೊಂದಿಗೆ ಬೆರೆತು ಸೇವೆ ನೀಡಲು ಪೊಲೀಸ್ ಇಲಾಖೆ ಸಜ್ಜಾಗಿದ್ದು, ಇದಕ್ಕಾಗಿ ಮೈಸೂರು ನಗರದ 1255, ಹೊರ ಜಿಲ್ಲೆಗಳ 3580, ಮತ್ತು 650ಗೃಹ ರಕ್ಷಕ ಸಿಬ್ಬಂದಿ ಸೇರಿದಂತೆ ಒಟ್ಟು 5485 ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ
 
ದಸರಾ ಭದ್ರತೆಗಾಗಿ ನಗರದಲ್ಲಿ ಈಗಾಗಲೇ ಅಳವಡಿಸಿರುವ ಕಾಯಂ ಸಿಸಿ ಕ್ಯಾಮರಾಗಳ ಜತೆಗೆ, ಹೆಚ್ಚುವರಿಯಾಗಿ ಅರಮನೆ, ಬನ್ನಿಮಂಟಪ ಮೈದಾನ, ಮೆರವಣಿಗೆ ಮಾರ್ಗ, ಇತರೇ ಪ್ರಮುಖ ಸ್ಥಳಗಳಲ್ಲಿ 110 ಸಿಸಿ ಕ್ಯಾಮರಾಗಳನ್ನು ಅಳವಡಿಸಿದ್ದು, ಇವುಗಳು ದಿನದ 24 ಗಂಟೆಯೂ ರೆಕಾರ್ಡ್ ಆಗುವಂತೆ ವ್ಯವಸ್ಥೆ ಮಾಡಲಾಗಿದೆ. ವಿವಿಧ ಕಾರ್ಯಕ್ರಮಗಳು ನಡೆಯುವ ಸ್ಥಳದಲ್ಲಿ ಮುಂಚಿತವಾಗಿಯೇ 12 ಅಗ್ನಿಶಾಮಕ ದಳ, 8 ತುರ್ತು ವಾಹನಗಳಗಳನ್ನು ನಿಯೋಜನೆ ಮಾಡಲಾಗಿದೆ. ಅಕ್ಕಪಕ್ಕದ ಜಿಲ್ಲೆ, ರಾಜ್ಯಗಳಿಂದ ಅಪರಾಧಿಗಳು ಬಂದು ಅಪರಾಧ ಕೃತ್ಯ ಎಸಗುವುದನ್ನು ತಡೆಗಟ್ಟಲು ನುರಿತ ಅಪರಾಧ ವಿಭಾಗದ ಅಧಿಕಾರಿ, ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ. ವೃತ್ತಿ ನಿರತ ಹಳೆಯ ಪಿಕ್ ಪ್ಯಾಕೆಟರ್ಸ್ ಬ್ಯಾಗ್, ಸೂಟ್‌ಕೇಸ್ ಲಿಫ್ಟರ್ ಹಾಗೂ ಇತರೆ ಕಳುವು ಪ್ರಕರಣಗಳ ಅಪರಾಧಿಗಳ ವಿರುದ್ಧ ಭದ್ರತಾ ಕಾಯಿದೆಯಡಿ ಕ್ರಮಕೈಗೊಳ್ಳಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂಸತ್ತಿನ ಮುಂಗಾರು ಅಧಿವೇಶನ: ಇಂದು ತಮ್ಮ ನಿವಾಸದಲ್ಲಿ ಕಾಂಗ್ರೆಸ್ ಸಂಸದರ ಸಭೆ ಕರೆದ ರಾಹುಲ್ ಗಾಂಧಿ

ವಿದ್ಯಾರ್ಥಿಗಳ ಪರ ನಿಲ್ಲುತ್ತೇನೆಂದು ಹೇಳುವ ಮೋದಿ, ಧರ್ಮೇಂದ್ರ ಪ್ರಧಾನ್‌ರನ್ನು ಹುದ್ದೆಯಿಂದ ತೆಗೆದುಹಾಕಬೇಕು

ಕೇಂದ್ರ ಸರ್ಕಾರ ಅಗತ್ಯ ಕ್ರಮಕೈಗೊಂಡರೂ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡೋದು ಯಾಕೆ: ವಿಜಯೇಂದ್ರ

ಯುವಜನರಿಗೆ ಪರಿಹಾರಗಿಂತ ಪ್ರತಿಭಟನೆ ನಡೆಸುವುದರಲ್ಲೇ ಹೆಚ್ಚು ಆಸಕ್ತಿ: ನಿರ್ಮಲಾ ಸೀತಾರಾಮನ್

ಕೇಂದ್ರ ಸರ್ಕಾರ ಯುವಜನರನ್ನು ಅವಮಾನಿಸುತ್ತಿದೆ: ಓವೈಸಿ ಗರಂ

ಮುಂದಿನ ಸುದ್ದಿ
Show comments