Select Your Language

Notifications

webdunia
webdunia
webdunia
webdunia

ನನ್ನಿಂದ ಮಗಳಿಗೂ ಕ್ಯಾನ್ಸರ್ ಎಂದು ಪೊಲೀಸ್ ಆತ್ಮಹತ್ಯೆ

ನನ್ನಿಂದ ಮಗಳಿಗೂ ಕ್ಯಾನ್ಸರ್ ಎಂದು ಪೊಲೀಸ್ ಆತ್ಮಹತ್ಯೆ
bangalore , ಶನಿವಾರ, 17 ಜೂನ್ 2023 (20:11 IST)
ಇಲ್ಲೊಬ್ಬ ಪೊಲೀಸ್​ ಸಿಬ್ಬಂದಿ, ತಮ್ಮಿಂದಲೇ ಮಗಳಿಗೆ ಕ್ಯಾನ್ಸರ್ ಬಂದಿದೆ ಎಂದು ಮನನೊಂದು ಸಾವಿಗೆ ಶರಣಾಗಿದ್ದಾರೆ. ಬೆಂಗಳೂರು ನಗರದ ಅಶೋಕನಗರ ಟ್ರಾಫಿಕ್ ಸ್ಟೇಷನ್​ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಕುಮಾರ್ ಎಂಬುವವರು ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನವರಾಗಿದ್ದು, ಕೆಲ ವರ್ಷಗಳಿಂದ ಕ್ಯಾನ್ಸರ್​ನಿಂದ ಬಳಲುತ್ತಿದ್ದರು. ಕುಮಾರ್​, ಬೆಂಗಳೂರಿನ‌ ಡೈರಿ ಸರ್ಕಲ್ ಬಳಿಯಿರುವ ಪೊಲೀಸ್ ಕ್ವಾಟ್ರಸ್​ನಲ್ಲಿ ಕುಟುಂಬದೊಂದಿಗೆ ವಾಸವಿದ್ದರು. ಕೆಲ ಸಮಯದ ಹಿಂದೆ ಕ್ಯಾನ್ಸರ್​ನ ಲಕ್ಷಣಗಳು ಅವರ ಓರ್ವ ಮಗಳಲ್ಲಿಯೂ ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಮಗಳಿಗೆ ಟ್ರೀಟ್​ಮೆಂಟ್​ ಕೊಡಿಸಿದ್ದರು. ಕುಮಾರ್ ಮಗಳು ಇತ್ತೀಚೆಗೆ ಚೇತರಿಸಿಕೊಳ್ಳುತ್ತಿದ್ದರು. ಆದರೂ, ನನ್ನಿಂದಲೇ ಮಗಳಿಗೆ ಕ್ಯಾನ್ಸರ್ ಬಂದಿದೆ ಎಂದು ಮನನೊಂದು ನಿನ್ನೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ ಸಾವಿನಲ್ಲಿಯೂ ಸಾರ್ಥಕತೆ ಮೆರೆದಿರುವ ಕುಮಾರ್ ತನ್ನ ಕಣ್ಣುಗಳನ್ನು ದಾನ ಮಾಡಿದ್ದಾರೆ. ಸದ್ಯ ಮೃತದೇಹವನ್ನು ಹುಟ್ಟುರೂ ಚನ್ನಗಿರಿಗೆ ತೆಗೆದುಕೊಂಡು ಹೋಗಲು ಸಿದ್ಧತೆ ನಡೆಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

112ಗೆ ಕರೆ ಮಾಡಬೇಕಾಗಿಲ್ಲ: ವಾಟ್ಸಾಪ್ ಮಾಡಿ