Webdunia - Bharat's app for daily news and videos

Install App

ಮಕ್ಕಳಿಲ್ಲವೆಂದು ಹಂಗಿಸಿದ್ದಕ್ಕೆ ನೇಣಿಗೆ ಶರಣಾದ ಪೊಲೀಸ್ ದಂಪತಿ

Webdunia
ಶನಿವಾರ, 19 ಡಿಸೆಂಬರ್ 2020 (09:43 IST)
ಬೆಂಗಳೂರು: ಮಕ್ಕಳಾಗಿಲ್ಲವೆಂದು ಪದೇ ಪದೇ ಎಲ್ಲರೂ ಪ್ರಶ್ನಿಸುತ್ತಿದ್ದರಿಂದ ಬೇಸತ್ತ ಪೊಲೀಸ್ ದಂಪತಿ ನೇಣಿಗೆ ಶರಣಾದ ಘಟನೆ ನಗರದಲ್ಲಿ ನಡೆದಿದೆ.


ಎಸಿಪಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹೆಡ್ ಕಾನ್ಸ್ ಟೇಬಲ್ ಸುರೇಶ್ ಮತ್ತು ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಸಿ.ಬಿ. ಶೀಲಾ ಮೃತ ದಂಪತಿ. ಗುರುವಾರ ರಾತ್ರಿ ಕರ್ತವ್ಯ ನಿರ್ವಹಿಸಿ ಮನೆಗೆ ತೆರಳಿದ್ದ ದಂಪತಿ ಈ ಕೃತ್ಯವೆಸಗಿದ್ದಾರೆ. ಬೆಳಿಗ್ಗೆ ಕರ್ತವ್ಯಕ್ಕೆ ಹಾಜರಾಗದ ಕಾರಣ ಮನೆಗೆ ಬಂದ ಸಹೋದ್ಯೋಗಿಗಳಿಗೆ ಇಬ್ಬರೂ ನೇಣಿಗೆ ಶರಣಾಗಿರುವುದು ಗೊತ್ತಾಗಿದೆ. 10 ವರ್ಷಗಳ ಹಿಂದೆ ಇಬ್ಬರೂ ಪ್ರೀತಿಸಿ ಮದುವೆಯಾಗಿದ್ದರು. ಇತ್ತೀಚೆಗೆ ಸಂಬಂಧಿಕರು ಮಕ್ಕಳಾಗದ ವಿಚಾರವಾಗಿ ಪ್ರಶ್ನಿಸುತ್ತಿದ್ದರಿಂದ ಬೇಸರಗೊಂಡಿದ್ದರು ಎನ್ನಲಾಗಿದೆ. ಈ ಸಂಬಂಧ ಇಬ್ಬರೂ ಗುರುವಾರ ರಾತ್ರಿ ಜಗಳವಾಡಿಕೊಂಡಿದ್ದಾರೆ. ಬಳಿಕ ಶೀಲಾ ನೇಣು ಹಾಕಿಕೊಂಡಿದ್ದು, ಇದನ್ನು ನೋಡಿ ನಿನ್ನೆ ಮುಂಜಾನೆ ಪತಿ ಸುರೇಶ್ ಕೂಡಾ ಅದೇ ಹಾದಿ ಹಿಡಿದಿದ್ದಾರೆ ಎಂದು ಪೊಲೀಸರು ಪ್ರಾಥಮಿಕ ತನಿಖೆಯನ್ನಾಧರಿಸಿ ಹೇಳಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments