ಮಕ್ಕಳಿಲ್ಲವೆಂದು ಹಂಗಿಸಿದ್ದಕ್ಕೆ ನೇಣಿಗೆ ಶರಣಾದ ಪೊಲೀಸ್ ದಂಪತಿ

Webdunia
ಶನಿವಾರ, 19 ಡಿಸೆಂಬರ್ 2020 (09:43 IST)
ಬೆಂಗಳೂರು: ಮಕ್ಕಳಾಗಿಲ್ಲವೆಂದು ಪದೇ ಪದೇ ಎಲ್ಲರೂ ಪ್ರಶ್ನಿಸುತ್ತಿದ್ದರಿಂದ ಬೇಸತ್ತ ಪೊಲೀಸ್ ದಂಪತಿ ನೇಣಿಗೆ ಶರಣಾದ ಘಟನೆ ನಗರದಲ್ಲಿ ನಡೆದಿದೆ.


ಎಸಿಪಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹೆಡ್ ಕಾನ್ಸ್ ಟೇಬಲ್ ಸುರೇಶ್ ಮತ್ತು ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಸಿ.ಬಿ. ಶೀಲಾ ಮೃತ ದಂಪತಿ. ಗುರುವಾರ ರಾತ್ರಿ ಕರ್ತವ್ಯ ನಿರ್ವಹಿಸಿ ಮನೆಗೆ ತೆರಳಿದ್ದ ದಂಪತಿ ಈ ಕೃತ್ಯವೆಸಗಿದ್ದಾರೆ. ಬೆಳಿಗ್ಗೆ ಕರ್ತವ್ಯಕ್ಕೆ ಹಾಜರಾಗದ ಕಾರಣ ಮನೆಗೆ ಬಂದ ಸಹೋದ್ಯೋಗಿಗಳಿಗೆ ಇಬ್ಬರೂ ನೇಣಿಗೆ ಶರಣಾಗಿರುವುದು ಗೊತ್ತಾಗಿದೆ. 10 ವರ್ಷಗಳ ಹಿಂದೆ ಇಬ್ಬರೂ ಪ್ರೀತಿಸಿ ಮದುವೆಯಾಗಿದ್ದರು. ಇತ್ತೀಚೆಗೆ ಸಂಬಂಧಿಕರು ಮಕ್ಕಳಾಗದ ವಿಚಾರವಾಗಿ ಪ್ರಶ್ನಿಸುತ್ತಿದ್ದರಿಂದ ಬೇಸರಗೊಂಡಿದ್ದರು ಎನ್ನಲಾಗಿದೆ. ಈ ಸಂಬಂಧ ಇಬ್ಬರೂ ಗುರುವಾರ ರಾತ್ರಿ ಜಗಳವಾಡಿಕೊಂಡಿದ್ದಾರೆ. ಬಳಿಕ ಶೀಲಾ ನೇಣು ಹಾಕಿಕೊಂಡಿದ್ದು, ಇದನ್ನು ನೋಡಿ ನಿನ್ನೆ ಮುಂಜಾನೆ ಪತಿ ಸುರೇಶ್ ಕೂಡಾ ಅದೇ ಹಾದಿ ಹಿಡಿದಿದ್ದಾರೆ ಎಂದು ಪೊಲೀಸರು ಪ್ರಾಥಮಿಕ ತನಿಖೆಯನ್ನಾಧರಿಸಿ ಹೇಳಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಲಾಭ, ಇದಕ್ಕೆ ವಿರೋಧ ಸರಿಯಲ್ಲ: ಈಶ್ವರ್ ಖಂಡ್ರೆ

ನಾಲ್ಕು ವರ್ಷದ ಬಾಲಕಿ ರೇಪ್ ಆ್ಯಂಡ್ ಮರ್ಡರ್‌: ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಆಗಿದ್ದೇನು ಗೊತ್ತಾ

ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮಗೆ ಕೊನೆಯ ವಿದಾಯ, ಅಂತ್ಯಕ್ರಿಯೆ ವಿಧಿವಿಧಾನ ನಡೆಸಿದ್ದು ಯಾರು ಗೊತ್ತಾ

ಪ್ರತಿಭಟನಾಕಾರರನ್ನು ಜೆಪಿ ನಡ್ಡಾ ಭೇಟಿ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯ, ಆದರೆ ಮಾಮೂಲಿ ಆಹಾರ ಸೇವಿಸುವಂತಿಲ್ಲ

ಮುಂದಿನ ಸುದ್ದಿ
Show comments