ಅಮಾಯಕನ ಮೇಲೆ ಪೊಲೀಸ್ ದೌರ್ಜನ್ಯ: ಆರೋಪ

Webdunia
ಸೋಮವಾರ, 6 ಆಗಸ್ಟ್ 2018 (20:02 IST)
ಕ್ಷುಲ್ಲಕ ಕಾರಣಕ್ಕೆ ತುಮಕೂರು ಜಿಲ್ಲೆ‌ ಹುಲಿಯೂರು ದುರ್ಗದ ಪೊಲೀಸರು ವ್ಯಕ್ತಿಯ ಮೇಲೆ ಅಟ್ಟಹಾಸ ಮೆರೆದಿದ್ದಾರೆ. ಅಮಾಯಕನನ್ನ ಬಂಧಿಸಿ  ಮನ ಬಂದಂತೆ ಥಳಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಹುಲಿಯೂರು ದುರ್ಗದಲ್ಲಿ ಘಟನೆ ನಡೆದಿದ್ದು, 40 ವರ್ಷದ ಪದ್ಮನಾಭ ಎನ್ನುವ ವ್ಯಕ್ತಿಯನ್ನ ವಶಕ್ಕೆ ಪಡೆದು ಮನಸೋ ಇಚ್ಚೆ ಥಳಿಸಿ  ದೌರ್ಜನ್ಯ ನಡೆಸಿದ್ದಾರೆ. ಮನೆಯ ಮುಂದೆ ಷಟಲ್ ಕಾಕ್ ಆಡುತ್ತಿದ್ದ ಪದ್ಮನಾಭನನ್ನ ಮನೆಗೆ ಹೋಗೋ ಎಂದು ಪೊಲೀಸರು ಗದರಿಸಿದ್ದಾರೆ. ಇದೇ ವೇಳೆ ಪೊಲೀಸರ ಮಾತಿಗೆ ಪ್ರತ್ಯುತ್ತರ ನೀಡಿದ್ದಕ್ಕೆ ಕೋಪಗೊಂಡ ಹುಲಿಯೂರುದುರ್ಗ ಪೊಲೀಸ್ ಠಾಣೆಯ ಎ.ಎಸ್.ಐ ನಾರಾಯಣಸ್ವಾಮಿ ಹಾಗೂ ಪೇದೆ ರಂಗಸ್ವಾಮಿ ಕಳೆದ ರಾತ್ರಿ‌ ಪದ್ಮನಾಭನ ಮನೆಗೆ ನುಗ್ಗಿ ಎಳೆದೊಯ್ದು ಮನಬಂದಂತೆ ಥಳಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಮೈ ತುಂಬಾ ರಕ್ತ ಹೆಪ್ಪು ಗಟ್ಟುವಂತೆ ಹಲ್ಲೆ ನಡೆಸಿರುವ ಪೊಲೀಸರು ರಾಕ್ಷಸತನ ತೋರಿದ್ದಾರೆ ಎಂದು ಆರೋಪಿಸಿದ್ದಾರೆ. ಇದರೊಟ್ಟಿಗೆ ಪದ್ಮನಾಭ ವಿರುದ್ದ ಕರ್ತವ್ಯ ಅಡ್ಡಿ ಪ್ರಕರಣ ದಾಖಲಿಸಿ ಕುಣಿಗಲ್ ಜೆಎಂಎಫ್ ಸಿ ಕಿರಿಯ ಶ್ರೇಣಿ ನ್ಯಾಯಲಯಕ್ಕೆ ಹಾಜರುಪಡಿಸಿದ್ದಾರೆ. ಪದ್ಮನಾಭರನ್ನ ನ್ಯಾಯಾಂಗ ಬಂಧನದಲ್ಲಿಟ್ಟು ಚಿಕಿತ್ಸೆ ನೀಡುವಂತೆ ನ್ಯಾಯಾಲಯ ಆದೇಶಿಸಿದೆ. ಪದ್ಮನಾಭ ಮೈಮೇಲೆ ತೀವ್ರ ಗಾಯಗಳಾಗುವಂತೆ ದೌರ್ಜನ್ಯ ನಡೆಸಿರುವ ಪೊಲೀಸರ ಕ್ರಮದ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಕ್ರೋಚ್‌ ಜನತಾ ಪಾರ್ಟಿಯ ಎಕ್ಸ್ ಖಾತೆಗೆ ನಿರ್ಬಂಧ ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ ಅಭಿಜಿತ್ ದೀಪ್ಕೆ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಪೆಟ್ರೋಲ್, ಡೀಸೆಲ್ ದರ ಹೆಚ್ಚಳದಿಂದ ರಾಜ್ಯ ಸರ್ಕಾರಕ್ಕೇ ಲಾಭ, ಆದ್ರೂ ಕಾಂಗ್ರೆಸ್ ಮೊಸಳೆ ಕಣ್ಣೀರು: ಆರ್ ಅಶೋಕ್

ಜಗತ್ತಿನಲ್ಲೇ ಅತಿ ಹೆಚ್ಚು ಪೆಟ್ರೋಲ್, ಡೀಸೆಲ್ ಬೆಲೆ ಹೊಂದಿರುವ ದೇಶ ಯಾವುದು ತಿಳಿದರೆ ಅಚ್ಚರಿಯಾಗುತ್ತೆ

ಮುಂದಿನ ಸುದ್ದಿ
Show comments