ಹೊಸ ವರ್ಷಕ್ಕೆ ಫುಲ್ ಅಲರ್ಟ್ ಆದ ಪೊಲೀಸ್ ಇಲಾಖೆ

Webdunia
ಶುಕ್ರವಾರ, 23 ಡಿಸೆಂಬರ್ 2022 (20:02 IST)
ಹೊಸ ವರ್ಷಕ್ಕೆ ಕೆಲವೇ ದಿನಗಳು ಬಾಕಿ ಹಿನ್ನಲೆಯಲ್ಲಿ ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಹಿರಿಯ ಅಧಿಕಾರಿಗಳು ಸಭೆ ನಡೆಸಿದ್ರು. ನಗರ ಪೊಲೀಸ್ ಆಯುಕ್ತ ಸಿ.ಹೆಚ್.ಪ್ರತಾಪ್ ರೆಡ್ಡಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ಆಯುಕ್ತರಾದ ಸುಬ್ರಮಣೇಶ್ವರ ರಾವ್, ಸಂದೀಪ್ ಪಾಟೀಲ್, ಡಿಸಿಪಿಗಳು ಭಾಗಿಯಾಗಿದ್ರು.ಹೊಸ ವರ್ಷಕ್ಕೆ ಬೆಂಗಳೂರು ಕೇಂದ್ರ ವಿಭಾಗದ ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್ ಗಳಲ್ಲಿ ಹೆಚ್ಚಿನ ಜನಸಮೂಹ ಸೇರಲಿದ್ದು, ಕೈಗೊಳ್ಳಬೇಕಾದ ಅಗತ್ಯ ಭದ್ರತಾ ಕ್ರಮಗಳ ಬಗ್ಗೆ ಚರ್ಚಿಸಲಾಗಿದೆ.. ಬೆಂಗಳೂರು ಕೇಂದ್ರ ವಿಭಾಗವೊಂದರಲ್ಲೇ 31 ಪಬ್, 5 ಡಿಸ್ಕೋಥೆಕ್, 26 ಲೇಡಿಸ್ ಬಾರ್, 13 ಕ್ಲಬ್ ಹಾಗೂ 71 ರೆಸ್ಟೋರೆಂಟ್ ಗಳಿದ್ದು ಅವುಗಳ ಮಾಲೀಕರಿಗೆ ನಿಯಮಾವಳಿಗಳ ಬಗ್ಗೆ ಚರ್ಚೆ ಮಾಡಲಾಗಿದೆ.
ಹೊಸ ವರ್ಷಾಚರಣೆಯ ಮೇಲೆ ಉಗ್ರರ ಕಣ್ಣು ಬೀಳಬಹುದು ಎಂಬ ಗುಪ್ತಚರ ಇಲಾಖೆಯ ಮಾಹಿತಿಯನ್ವಯ ಈಗಾಗಲೇ ನಗರದ ವಿವಿಧ ಹೋಟೆಲ್, ಲಾಡ್ಜ್ ಗಳಲ್ಲಿ‌ ಬಂದು ನೆಲೆಸಿರುವವರ ಬಗ್ಗೆ ಮಾಹಿತಿ ಕಲೆಹಾಕುವಂತೆ ಎಲ್ಲಾ ವಿಭಾಗಗಳ ಪೊಲೀಸರಿಗೆ ಸೂಚನೆ ನೀಡಲಾಗಿದೆ.ಇನ್ನು ಹೊಸ ವರ್ಷಾಚರಣೆಯ ಸಂದರ್ಭದಲ್ಲಿ ಲೈಂಗಿಕ ದೌರ್ಜನ್ಯದಂತಹ ಪ್ರಕರಣಗಳು ವರದಿಯಾದ ಉದಾಹರಣೆಗಳು ಸಹ ಇರುವುದರಿಂದ ಮಹಿಳೆಯರ ಭದ್ರತೆಗೆ ಕೈಗೊಳ್ಳಬೇಕಾದ ಅಗತ್ಯ ಕ್ರಮಗಳ ಬಗ್ಗೆಯೂ ಚರ್ಚಿಸಲ್ಪಟ್ಟಿದೆ.
 
ಹರ್ಷಾಚರಣೆಯ ಸಂದರ್ಭದಲ್ಲಿ ಕಿಕ್ಕೇರಿಸಲು ಈಗಾಗಲೇ ವಿಶಾಖಪಟ್ಟಣಂ, ಓಡಿಶಾ, ಅಸ್ಸಾಂನಿಂದ ಮಾದಕ ಪದಾರ್ಥಗಳು ನಗರ ಪ್ರವೇಶಿಸುವುದನ್ನ ತಡೆಯಲು ಸ್ಥಳಿಯ, ಅನ್ಯರಾಜ್ಯ ಹಾಗೂ ವಿದೇಶಿ ಮಾದಕ ದಂಧೆಕೋರರ ಮೇಲೆ ಖಾಕಿ‌ ಹದ್ದಿನ ಕಣ್ಣಿರಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನವೆಂಬರ್‌ನಲ್ಲಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ ಎಂದಿದ್ದಕ್ಕೆ ಸಿಎಂ ಪ್ರತಿಕ್ರಿಯೆ ಹೀಗಿತ್ತು

ಈ ವಿಚಾರ ಯಾವಾ ಇಲಾಖೆಯಲ್ಲಿ ಗೊತ್ತಾದಲ್ಲಿ ಕಠಿಣ ಕ್ರಮ: ಜಿ ಪರಮೇಶ್ವರ್

ಬರೋಬ್ಬರಿ ನಾಲ್ಕು ಗಂಟೆ ತೆಂಗಿನ ಮರ ಏರಿ ಕುಳಿತ ವ್ಯಕ್ತಿ, ಕಾರಣ ಕೇಳಿದ್ರೆ ಶಾಕ್‌

ಅನಾರೋಗ್ಯ ಕಾರಣಕ್ಕೆ ತಾತ್ಕಾಲಿಕ ಬ್ರೇಕ್ ಪಡೆದ ಸಂಜಯ್ ರಾವುತ್‌ಗೆ ಮೋದಿ ವಿಶ್‌

ನವೆಂಬರ್ 1ರಂದು ಮೈಸೂರು ಝೂಗೆ ಹೋಗುವ 12ವರ್ಷದೊಳಗಿನ ಮಕ್ಕಳಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ