Webdunia - Bharat's app for daily news and videos

Install App

ಜನಸ್ನೇಹಿಯಾಗಲಿರುವ ಪೊಲೀಸ್ ಇಲಾಖೆ..!

Webdunia
ಬುಧವಾರ, 22 ಫೆಬ್ರವರಿ 2023 (18:42 IST)
ಪೊಲೀಸ್ ಇಲಾಖೆಯಲ್ಲಿ ತಮ್ಮ ಕಟ್ಟುನಿಟ್ಟಿನ ಕ್ರಮ ವಿನೂತನ ಪ್ರಯತ್ನಗಳ ಮೂಲಕ ಸುದ್ದಿಯಲ್ಲಿರುವ ಬೆಂಗಳೂರು ಆಗ್ನೇಯ ವಿಭಾಗದ ಡಿಸಿಪಿ ಸಿ.ಕೆ.ಬಾಬಾ ಮತ್ತೊಂದು ಹೊಸ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಇನ್ಮುಂದೆ ಆಗ್ನೇಯ ವಿಭಾಗದ ಪೊಲೀಸ್ ಸಿಬ್ಬಂದಿ ತಮ್ಮ ಮೊಬೈಲ್ ಫೋನ್‌ಗೆ ಬರುವ ಕರೆಗಳನ್ನ ಸ್ವೀಕರಿಸದೇ ಇರುವಂತಿಲ್ಲ. ಜೊತೆಗೆ ತಮ್ಮ ವಾಟ್ಸ್ಯಾಪ್ ಡಿಸ್‌ಪ್ಲೇ ಪಿಕ್ಚರ್ ನಲ್ಲಿ ತಮ್ಮ ಫೋಟೊ ಹಾಕುವಂತಿಲ್ಲ. ಕರೆ ಸ್ವೀಕರಿಸದೇ ಇದ್ದಲ್ಲಿ ಸಿಬ್ಬಂದಿಗಳಿಗೆ ಸಂಕಷ್ಟ ಉಂಟಾಗಲಿದೆ. ಇನ್ನುಮುಂದೆ ಆಗ್ನೇಯ ವಿಭಾಗದ ಎಲ್ಲಾ ಪೊಲೀಸರು ಲೋಕಸ್ಪಂದನ ಎಂಬ ಕ್ಯೂಆರ್ ಕೋಡನ್ನ ತಮ್ಮ ವಾಟ್ಸ್ಯಾಪ್ ಡಿಪಿಯಲ್ಲಿ ಹಾಕಬೇಕು. ತಮ್ಮ ವಿಭಾಗದ ಪೊಲೀಸ್ ಸಿಬ್ಬಂದಿಯ ಕಾರ್ಯವೈಖರಿ ಕುರಿತು ಮಾಹಿತಿ ಪಡೆಯಲು ಸಿದ್ಧಪಡಿಸಿರುವುದೇ ಈ ಲೋಕಸ್ಪಂದನ ವ್ಯವಸ್ಥೆ. ಪೊಲೀಸರ ಕುರಿತು ಸಾರ್ವಜನಿಕರು ಏನಾದರೂ ಮೆಚ್ಚುಗೆ ವ್ಯಕ್ತಪಡಿಸುವುದಿರಲಿ, ಅಥವಾ ಆಕ್ಷೇಪ ವ್ಯಕ್ತಪಡಿಸುವುದಿರಲಿ ಲೋಕಸ್ಪಂದನ ವ್ಯವಸ್ಥೆಯ ಮೂಲಕ ಮಾಡಬಹುದು

ಪೊಲೀಸರು ಸಾರ್ವಜನಿಕರ ಫೋನ್ ಕರೆ ಸ್ವೀಕರಿಸದೇ ಇದ್ದರೆ ಸಾರ್ವಜನಿಕರು ಆ ಅಧಿಕಾರಿಯ ವಾಟ್ಸ್ಯಾಪ್ ಡಿಪಿಯಲ್ಲಿರುವ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಬೇಕು. ಬಳಿಕ ಮೆಸೆಜ್ ವ್ಯವಸ್ಥೆ ಲಭ್ಯವಾಗಲಿದೆ. ಅಲ್ಲಿ ನಿಮ್ಮ ಅಧಿಕಾರಿ ಪೋನ್ ಕರೆ ಸ್ವೀಕರಿಸುತ್ತಿಲ್ಲ ಎಂದು ಮೆಸೆಜ್ ರವಾನಿಸಿದರೆ, ನೇರವಾಗಿ ಆ ಮೆಸೆಜ್ ಡಿಸಿಪಿ ಸಿ.ಕೆ.ಬಾಬಾರ ಮೊಬೈಲ್ ಫೋನಿಗೆ ತಲುಪಲಿದೆ'
 
ಇದರಿಂದಾಗಿ ಯಾವ ಅಧಿಕಾರಿ ಸಾರ್ವಜನಿಕರಿಗೆ ಸೂಕ್ತ ಸ್ಪಂದನೆ ಮಾಡುತ್ತಿಲ್ಲ ಎಂಬುದನ್ನ ಸುಲಭವಾಗಿ ಪತ್ತೆ ಹಚ್ಚಿ ಅಂಥವರ ವಿರುದ್ಧ ಕ್ರಮ ಕೈಗೊಳ್ಳಬಹುದು. ಈ ಕ್ಯೂ ಆರ್ ಕೋಡ್ ಮೂಲಕ ಪೊಲೀಸರು ಇನ್ನಷ್ಟು ಜನಸ್ನೇಹಿಯಾಗಲು ಸಾಧ್ಯವಾಗಲಿದೆ ಎಂದಿರುವ  ಆಗ್ನೇಯ ವಿಭಾಗ ಡಿಸಿಪಿ ಸಿ.ಕೆ.ಬಾಬಾ ಇಂದಿನಿಂದಲೇ ಈ‌ನೂತನ ವ್ಯವಸ್ಥೆ ಜಾರಿಗೊಳಿಸಿದ್ದು ಈ ಹೊಸ ಯೋಜನೆ ಎಷ್ಟು ಪರಿಣಾಮಕಾರಿಯಾಗಲಿದೆ ಎಂದು ಕಾದು ನೋಡಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ: ಎಸ್‌ಐಟಿಯಿಂದ ನಿಷ್ಪಕ್ಷಪಾತ ತನಿಖೆ ಎಂದ ಸಿಎಂ ಸಿದ್ದರಾಮಯ್ಯ

ಮಗನ ಮದುವೆ ಮುರಿಯಲು ಕಾರಣ ಬಿಚ್ಚಿಟ್ಟ ಶಾಸಕ ಪ್ರಭು ಚವಾಣ್, ಇದೆಲ್ಲ ಆ ಮಾಜಿ ಸಚಿವನ ಹುನ್ನಾರ

ಎಚ್‌ಆರ್‌ ಜತೆ ಸರಸವಾಡಿ ಫಜೀತಿಗೆ ಸಿಲುಕಿದ್ದ ಯುಎಸ್‌ ಟೆಕ್‌ ಕಂಪನಿ ಸಿಇಒ ರಾಜೀನಾಮೆ, ಎಚ್‌ಆರ್‌ ಅನ್ನು ರಜೆಯಲ್ಲಿ ಕಳುಹಿಸಿದ ಕಂಪನಿ

ಕಬಿನಿ ಜಲಾಶಯ ಭರ್ತಿ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್‌ ಜೊತೆಯಾಗಿ ಬಾಗಿನ ಅರ್ಪಣೆ

ಪೆಸಿಫಿಕ್ ಸಮುದ್ರದ ಬಳಿ ಪ್ರಬಲ ಭೂಕಂಪನ: ರಷ್ಯಾದ ಪೆನಿನ್ಸುಲಾಗೆ ಸುನಾಮಿ ಎಚ್ಚರಿಕೆ

ಮುಂದಿನ ಸುದ್ದಿ
Show comments