Webdunia - Bharat's app for daily news and videos

Install App

ವಯ್ಯಾಲಿಕಾವಲ್ ಮಹಾಲಕ್ಷ್ಮಿ ಮರ್ಡರ್: ಮನೆಯಲ್ಲಿ ಪೊಲೀಸರಿಗೆ ಮಹತ್ವದ ಸುಳಿವು

Krishnaveni K
ಬುಧವಾರ, 25 ಸೆಪ್ಟಂಬರ್ 2024 (09:36 IST)
ಬೆಂಗಳೂರು: ವಯ್ಯಾಲಿಕಾವಲ್ ನ ಮಹಾಲಕ್ಷ್ಮಿ ಮರ್ಡರ್ ಕೇಸ್ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಮೃತಳ ಮನೆಯಲ್ಲಿ ಮಹತ್ವದ ಸಾಕ್ಷಿಯೊಂದು ಸಿಕ್ಕಿದೆ. ಇದನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದಾರೆ.
 

ವಯ್ಯಾಲಿಕಾವಲ್ ನ ಬಾಡಿಗೆ ಮನೆಯೊಂದರಲ್ಲಿ ಮಹಾಲಕ್ಷ್ಮಿ ವಾಸವಿದ್ದಳು. ಅಲ್ಲಿಯೇ ಫ್ರಿಡ್ಜ್ ಒಳಗೆ ಪೀಸ್ ಪೀಸ್ ಆದ ಸ್ಥಿತಿಯಲ್ಲಿ ಆಕೆಯ ಮೃತದೇಹ ಪತ್ತೆಯಾಗಿತ್ತು. ಇಷ್ಟರವರೆಗೆ ಪೊಲೀಸರು ಓರ್ವನಿಂದಲೇ ಈ ಕೃತ್ಯ ನಡೆದಿದೆ ಎಂದುಕೊಂಡಿದ್ದಾರೆ. ಆದರೆ ಈಗ ಆಕೆಯ ಮನೆಯಲ್ಲಿ ಗೋಡೆ ಮತ್ತು ಫ್ರಿಡ್ಜ್ ನಲ್ಲಿ ನಾಲ್ಕೈದು ಫಿಂಗರ್ ಪ್ರಿಂಟ್ ಪತ್ತೆಯಾಗಿದೆ.

ಹೀಗಾಗಿ ಈ ಕೃತ್ಯದಲ್ಲಿ ಒಬ್ಬ ಮಾತ್ರ ಭಾಗಿಯಾಗಿರುವುದೇ ಅಥವಾ ನಾಲ್ಕೈದು ಮಂದಿಯ ಕೈವಾಡವಿದೆಯೇ ಎಂಬ ಬಗ್ಗೆ ಪೊಲೀಸರಿಗೆ ಸಂಶಯ ಮೂಡಿದೆ. ಹೀಗಾಗಿ ಈ ನಿಟ್ಟಿನಲ್ಲಿ ತನಿಖೆ ನಡೆಸಲಾಗುತ್ತಿದೆ. ಮಹಾಲಕ್ಷ್ಮಿ ಪತಿ ಕೂಡಾ ಆಕೆಗೆ ಬೇರೆ ಇಬ್ಬರ ಜೊತೆ ಸ್ನೇಹವಿದ್ದ ವಿಚಾರ ತಿಳಿಸಿದ್ದ.

ಹೀಗಾಗಿ ವಿವಾಹೇತರ ಸಂಬಂಧದಲ್ಲಿ ಅಸಮಾಧಾನವಾಗಿದ್ದೇ ಕೊಲೆಗೆ ಕಾರಣವಿರಬಹುದೇ, ಹೀಗಾಗಿ ಒಬ್ಬರಲ್ಲ ಇಬ್ಬರು ಕೊಲೆ ನಡೆಸಿರಬಹುದೇ ಎಂಬ ಸಂಶಯ ಮೂಡಿದೆ. ಉತ್ತರ ಭಾರತಕ್ಕೆ ಹೋಗಿ ತಲೆಮರೆಸಿಕೊಂಡಿರುವ ಆರೋಪಿ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದು, ಪದೇ ಪದೇ ಸ್ಥಳ ಬದಲಾಯಿಸುತ್ತಿದ್ದಾನೆ. ಇದರಿಂದ ಪೊಲೀಸರಿಗೆ ಆತನನ್ನು ಹಿಡಿಯುವುದೇ ತಲೆನೋವಾಗಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಒಂದೇ ಮಳೆಗೆ ಶುರುವಾಯ್ತು ಮಂಗಳೂರು, ಬೆಂಗಳೂರು ಪ್ರಯಾಣಿಕರಿಗೆ ಸಂಕಷ್ಟ: ಶಿರಾಡಿ ಘಾಟಿ ಏನಾಗಿದೆ

Karnataka Rains: ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಅಡಿಕೆ ಬೆಳೆಗಾರರಿಗೆ ಶುರುವಾಯ್ತು ಆತಂಕ

Karnataka Weather: ಇನ್ನು ಎರಡು ದಿನ ಮಳೆ ಜೊತೆಗೆ ರಾಜ್ಯದ ಜನರು ಈ ಎಚ್ಚರಿಕೆ ಗಮನಿಸಿ

Karnataka Weather: ಈ ವಾರ ಪೂರ್ತಿ ಹವಾಮಾನ ಹೇಗಿರಲಿದೆ ಗೊತ್ತಾ

Dehli Airport: ಭಾರೀ ಮಳೆಗೆ ಸೋರುತ್ತಿದೆ ಛಾವಣಿ, Video Viral

ಮುಂದಿನ ಸುದ್ದಿ
Show comments