Webdunia - Bharat's app for daily news and videos

Install App

ಜೈಲಿಗೆ ಹೋಗುವಾಗ ಸ್ಟೈಲ್, ದರ್ಶನ್ ಕರೆತಂದ ಪೊಲೀಸರಿಗೆ ಸಂಕಷ್ಟ

Krishnaveni K
ಗುರುವಾರ, 29 ಆಗಸ್ಟ್ 2024 (13:06 IST)
ಬಳ್ಳಾರಿ: ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಹೋಗುವಾಗ ದರ್ಶನ್ ಧರಿಸಿದ್ದ ಬಟ್ಟೆ, ಕೂಲಿಂಗ್ ಗ್ಲಾಸ್ ಸೇರಿದಂತೆ ಸ್ಟೈಲಿಶ್ ಲುಕ್ ನಿಂದ ಈಗ ಬೆಂಗಾವಲು ಪೊಲೀಸರಿಗೆ ಸಂಕಷ್ಟ ಎದುರಾಗಿದೆ.

ಇಂದು ನಸುಕಿನಲ್ಲಿ ಪರಪ್ಪನ ಅಗ್ರಹಾರದಲ್ಲಿ ದರ್ಶನ್ ಮೂರು ಪೊಲೀಸ್ ವಾಹನಗಳಲ್ಲಿ ಬಳ್ಳಾರಿಗೆ ತೆರಳಿದ್ದರು. ಪೊಲೀಸರು ಬಿಗಿ ಭದ್ರತೆಯಲ್ಲಿ ಅವರನ್ನು ಕರೆತಂದಿದ್ದಾರೆ. ಹೋಗುವ ದಾರಿಯಲ್ಲಿ ದರ್ಶನ್ ಮರೆ ಮಾಚಲು ವಾಹನಗಳಿಗೆ ಸ್ಕ್ರೀನ್ ಅಳವಡಿಸಲಾಗಿತ್ತು. ಆದರೆ ಜೈಲಿನ ದ್ವಾರಕ್ಕೆ ಹೋಗುವಾಗ ದರ್ಶನ್ ಕ್ಯಾಮರಾ ಕಣ್ಣಿಗೆ ಬಿದ್ದಿದ್ದರು.

ಈ ವೇಳೆ ದರ್ಶನ್ ಬ್ರ್ಯಾಂಡೆಡ್ ಟಿ ಶರ್ಟ್, ಕೂಲಿಂಗ್ ಗ್ಲಾಸ್ ಹಾಕಿಕೊಂಡು ಸ್ಟೈಲಿಶ್ ಆಗಿ ತೆರಳಿದ್ದರು. ಆದರೆ ಇದು ನಿಯಮಗಳಿಗೆ ವಿರುದ್ಧವಾಗಿದೆ. ಒಬ್ಬ ಖೈದಿಗೆ ಇಷ್ಟೆಲ್ಲಾ ಸವಲತ್ತು ಕೊಡಬಾರದು ಎಂಬ ನಿಯಮವಿದೆ. ಈ ವಿಚಾರ ಡಿಜಿಪಿ ಟಿ ಪಿ ಶೇಷ ಗಮನಕ್ಕೆ ಬಂದಿದ್ದು ಪೊಲೀಸರಿಗೆ ಈ ರೀತಿ ನಿಯಮ ಮೀರಿದ್ದು ಯಾಕೆ ಎಂದು ಕಾರಣ ಕೇಳಿ ನೋಟಿಸ್ ನೀಡಲು ಮುಂದಾಗಿದ್ದಾರೆ.

ಈ ಹಿಂದೆ ಸ್ಥಳ ಮಹಜರು ವೇಳೆ ಎ1 ಆರೋಪಿ ಪವಿತ್ರಾ ಗೌಡಗೆ ಮನೆಗೆ ತೆರಳಿದ್ದಾಗ ಲಿಪ್ ಸ್ಟಿಕ್ ಹಚ್ಚಿಕೊಂಡು ಬಂದಿದ್ದಕ್ಕೆ ಓರ್ವ ಮಹಿಳಾ ಸಿಬ್ಬಂದಿಗೆ ನೋಟಿಸ್ ನೀಡಲಾಗಿತ್ತು. ಇದೀಗ ಮತ್ತೆ ಬೆಂಗಾವಲು ಸಿಬ್ಬಂದಿಯಿಂದ ದರ್ಶನ್ ದಿರಿಸಿನ ವಿಚಾರವಾಗಿ ಎಡವಟ್ಟು ನಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಎರಡು ದಿನಗಳಿಗೆ ಮಳೆ ಜೋರು, ಈ ಜಿಲ್ಲೆಗಳಿಗೆ ರೆಡ್ ಅಲರ್ಟ್

Indore Raja Raghuvanshi murder: ಇದೊಂದು ಕೆಲಸವಾದ ಮೆಲೆ ಫಸ್ಟ್ ನೈಟ್ ಮಾಡಿಕೊಳ್ಳೋಣ ಎಂದಿದ್ದ ಸೋನಂ

Raghuvanshi Murder Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

Mallikarjun Kharge: 11 ವರ್ಷಗಳ ಮೋದಿಯ ತಪ್ಪುಗಳ ಲೆಕ್ಕ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

Mangaluru: ಬಾಲ್ಯದ ಕನಸ್ಸಿನಂತೆ ನೌಕಾಪಡೆ ಸೇರಿಕೊಂಡ ಮಂಗಳೂರಿನ ಯುವತಿ

ಮುಂದಿನ ಸುದ್ದಿ
Show comments