ಪೊಲೀಸರಿಗೆ ಸುಳಿವು ಕೊಟ್ಟಿದ್ದಕ್ಕೆ ಬೆತ್ತಲೆಗೊಳಿಸಿ ಹಲ್ಲೆ

Krishnaveni K
ಮಂಗಳವಾರ, 17 ಸೆಪ್ಟಂಬರ್ 2024 (10:05 IST)
ಬೆಂಗಳೂರು: ತಮ್ಮ ಬಗ್ಗೆ ಪೊಲೀಸರಿಗೆ ಮಾಹಿತಿ ಕೊಟ್ಟಿದ್ದಕ್ಕೆ ಪೊಲೀಸ್ ಬಾತ್ಮೀದಾರನನ್ನು ಬೆತ್ತಲೆಗೊಳಿಸಿ ರೌಡಿ ಶೀಟರ್ ಒಬ್ಬ ಮನಸೋ ಇಚ್ಛೆ ಥಳಿಸಿದ ಘಟನೆ ನಡೆದಿದೆ.

ರೌಡಿ ಶೀಟರ್ ಪವನ್, ಆತನ ಸಹಚರರು ಈ ರೀತಿ ಪೊಲೀಸ್ ಬಾತ್ಮೀದಾರನ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಬಗ್ಗೆ ಕಾಮಾಕ್ಷಿ ಪಾಳ್ಯದಲ್ಲಿ ಠಾಣೆಯಲ್ಲಿ ಕೇಸು ದಾಖಲಾಗಿದೆ. ಹಲ್ಲೆ ನಡೆಸಿದ ವಿಡಿಯೋವನ್ನು ರೌಡಿ ಪವನ್ ಸಹಚರರೇ ವಿಡಿಯೋ ಬಹಿರಂಗ ಪಡಿಸಿದ್ದಾರೆ.

ಅರ್ಜುನ್ ಎಂಬ ಯುವಕ ಪೊಲೀಸ್ ಇನ್ ಫಾರ್ಮರ್ ಆಗಿ ಕೆಲಸ ಮಾಡುತ್ತಿದ್ದ. ಈತ ತಮ್ಮ ವಿರುದ್ಧ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ ಎಂದು ರೌಡಿಗಳು ಆತನನ್ನು ಸಾರ್ವಜನಿಕವಾಗಿ ಬೆತ್ತಲೆಗೊಳಿಸಿ ಮನಸೋ ಇಚ್ಛೆ ಥಳಿಸಿ ವಿಡಿಯೋ ಹರಿಯಬಿಟ್ಟಿದ್ದಾರೆ. ರೌಡಿ ಶೀಟರ್ ಗಳಿಂದ ರಕ್ಷಿಸಿಕೊಳ್ಳಲು ಬೆತ್ತಲಾಗಿಯೇ ಆತ ನಡು ರಸ್ತೆಯಲ್ಲಿ ಓಡಿ ಹೋಗಿದ್ದಾನೆ.

ಅರ್ಜುನ್ ಕಾಮಾಕ್ಷಿ ಪಾಳ್ಯ ಪೊಲೀಸರ ಬಾತ್ಮೀದಾರನಾಗಿದ್ದ. ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ರೌಡಿ ಪವನ್ ಮರಳಿ ಕೋರ್ಟ್ ಗೆ ಶರಣಾಗದೇ ತಲೆಮರೆಸಿಕೊಂಡಿದ್ದ. ಈತನ ಬಗ್ಗೆ ಅರ್ಜುನ್ ಪೊಲೀಸರಿಗೆ ಮಾಹಿತಿ ನೀಡಿದ್ದ. ಈತನ ಬಗ್ಗೆ ಸ್ಥಳೀಯರು ಪೊಲೀಸರಿಗೆ ದೂರು ಕೊಟ್ಟರೂ ಕ್ರಮ ಕೈಗೊಂಡಿರಲಿಲ್ಲ ಎಂದು ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ನಿಂದ ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ವಿಜಯೇಂದ್ರ

ಬೆಳ್ತಂಗಡಿ ಸುಮಂತ್ ಕೇಸ್ ಎಲ್ಲಿಯವರೆಗೆ ಬಂತು, ಆರೋಪಿಗಳು ಸಿಕ್ಕಿಬಿದ್ದರಾ

ಗೂಂಡಾಗಿರಿ ಹೊಣೆ ಹೊತ್ತು ಮುಖ್ಯಮಂತ್ರಿ ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ಗವರ್ನರ್ ವಿರುದ್ಧ ಹೋರಾಟದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸಿಎಂ ಸಿದ್ದರಾಮಯ್ಯ

ಕೇಂದ್ರ ಸರಕಾರದ ವಿರುದ್ಧ ದ್ವೇಷ ರಾಜಕಾರಣ ಮಾಡಲು ಸದನ ಬಳಕೆ: ವಿಜಯೇಂದ್ರ ಆಕ್ಷೇಪ

ಮುಂದಿನ ಸುದ್ದಿ
Show comments