Select Your Language

Notifications

webdunia
webdunia
webdunia
webdunia

ಕಳ್ಳರ ಬದ್ಧಲು ಪೊಲೀಸರು ಲಾಕ್ ಅಪ್ ನಲ್ಲಿ ಅಂದರ್

ಕಳ್ಳರ ಬದ್ಧಲು ಪೊಲೀಸರು ಲಾಕ್ ಅಪ್ ನಲ್ಲಿ ಅಂದರ್
ಬೆಂಗಳೂರು , ಭಾನುವಾರ, 11 ಸೆಪ್ಟಂಬರ್ 2022 (16:46 IST)
ಪೊಲೀಸ್ ಠಾಣೆಯಲ್ಲಿರುವ ಅಧಿಕಾರಿಗಳು ಸರಿಯಾಗಿ ಕೆಲಸ ನಿರ್ವಹಿಸಿಲ್ಲ ಎಂದು ಎಸ್ಪಿ ಎಲ್ಲಾ ಪೊಲೀಸ್ ಸಿಬ್ಬಂದಿಗಳನ್ನು ಲಾಕಪ್ ಗೆ ಹಾಕಿದ ಘಟನೆ ಬಿಹಾರದ ನವಾಡದಲ್ಲಿ ನಡೆದಿದೆ.
 
ಸದ್ಯ ಈ ಘಟನೆಯ ವಿಡಿಯೋ ವೈರಲ್ ಆಗಿದೆ. ನವಾಡ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಗೌರವ್ ಮಂಗ್ಲಾ ವಿರುದ್ಧ ಆಕ್ರೋಶಕ್ಕೆ ಕಾರಣವಾಗಿದೆ.
 
ಕೆಲವು ಪ್ರಕರಣಗಳನ್ನು ಪರಿಶೀಲಿಸುವ ಸಲುವಾಗಿ ಸೆಪ್ಟೆಂಬರ್ 8ರಂದು ರಾತ್ರಿ 9 ಗಂಟೆ ಸುಮಾರಿಗೆ ಎಸ್​ಪಿ ಗೌರವ್ ಮಂಗ್ಲಾ ಠಾಣೆಗೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಕಿರಿಯ ಅಧಿಕಾರಿಗಳು ಕರ್ತವ್ಯ ನಿರ್ವಹಣೆಯಲ್ಲಿ ಲೋಪ ಎಸಗಿರುವುದು ಪತ್ತೆಯಾಗಿತ್ತು. ಇದರಿಂದ ಕೋಪಗೊಂಡಿದ್ದ ಗೌರವ್, ತಪ್ಪು ಮಾಡಿದವರನ್ನು ಲಾಕಪ್​ನಲ್ಲಿ ಇರಿಸುವಂತೆ ಹೇಳಿದ್ದರು.
 
ಘಟನೆ ಸಂಬಂಧ ಗೌರವ್ ಮಂಗ್ಲಾ ಅವರನ್ನು ವಿಚಾರಣೆಗೆ ಒಳಪಡಿಸಬೇಕು ಎಂದು ಬಿಹಾರ ಪೊಲೀಸ್ ಒಕ್ಕೂಟ (ಬಿಪಿಎ) ಒತ್ತಾಯಿಸಿದೆ. ಸಬ್​ ಇನ್​ಸ್ಪೆಕ್ಟರ್​ಗಳಾದ ಶತ್ರುಘ್ನ ಪಾಸ್ವಾನ್ ಮತ್ತು ರಾಮ್​ರೇಖಾ ಸಿಂಗ್, ಎಎಸ್​ಐಗಳಾದ ಸಂತೋಷ್ ಪಾಸ್ವಾನ್, ಸಂಜಯ್ ಸಿಂಗ್ ಮತ್ತು ರಾಮೇಶ್ವರ್ ಉರೌನ್ ಅವರು ಲಾಕಪ್​ನಲ್ಲಿರುವುದು ವಿಡಿಯೊದಲ್ಲಿ ಸೆರೆಯಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಾನಸಿಕ ಅಸ್ವಸ್ಥನಾದ ಯುವಕ ಗುಣಮುಖನಾಗಿ ಮರಳಿ ಕುಟುಂಬ ಸೇರಿದ