Select Your Language

Notifications

webdunia
webdunia
webdunia
webdunia

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ರೈತ ಮುಖಂಡ ಬಲ್ಲೂರು ರವಿಕುಮಾರ್

Sampriya

ದಾವಣಗೆರೆ , ಸೋಮವಾರ, 16 ಜೂನ್ 2025 (18:48 IST)
Photo Credit X
ದಾವಣಗೆರೆ: ಸಿಎಂ ಸಿದ್ದರಾಮಯ್ಯ ಅವರು ದಾವಣಗೆರೆ ಜಿಲ್ಲಾ ಪ್ರವಾಸದ ವೇಳೆ ರೈತನೊಬ್ಬ ವಿಶೇಷ ರೀತಿಯಲ್ಲಿ ಪ್ರತಿಭಟನೆ ನಡೆಸಿದ ಘಟನೆ ವರದಿಯಾಗಿದೆ. 

ರೈತರ ಮನವಿಗೆ ಸ್ಪಂದಿಸದ ಪೊಲೀಸರ ವರ್ತನೆಗೆ ಆಕ್ರೋಶ ವ್ಯಕ್ತಪಡಿಸಿದ ರೈತ ಮುಖಂಡ ಬಲ್ಲೂರು ರವಿಕುಮಾರ್ ಅವರು ಸಿದ್ದರಾಮಯ್ಯ ಕಾರಿಗೆ ಅಡ್ಡ ಮಲಗಿ ಆಕ್ರೋಶ ಹೊರಹಾಕಿದ್ದಾರೆ. ಈ ವೇಳೆ ರೈತನ ಮೇಲೆ ಪೊಲೀಸರು ಕಾಲಿನಿಂದ ಒದ್ದಿದ್ದಾರೆಂಬ ಆರೋಪ ಕೇಳಿಬಂದಿದೆ. 

ಈ ಘಟನೆಯ ಭಾನುವಾರ ದಾವಣಗೆರೆ ಹೆದ್ದಾರಿ ಪಕ್ಕದಲ್ಲಿರುವ ಪ್ರವಾಸಿ ಮಂದಿರದ ಬಳಿ ನಡೆದಿದೆ. ರೈತ ಮುಖಂಡ ರವಿಕುಮಾರ್ ಅವರು ತಮ್ಮ ಪ್ರದೇಶದ ಕೆರೆ ತುಂಬಿಸುವುದು ಹಾಗೂ ಹೂಳೆತ್ತುವ ಸಮಸ್ಯೆ ಕುರಿತು ಮನವಿ ನೀಡಲು ಬಂದಿದ್ದರು. ಆದರೆ ಭದ್ರತಾ ಸಿಬ್ಬಂದಿ ಅವರನ್ನು ತಡೆದು, ಅವರ ಮೇಲೆ ಕಾಲಿನಿಂದ ಒತ್ತಿದ್ದಾರೆ ಎಂಬ ಆರೋಪ ಹೊರಸಾಗಿದೆ.

ಇದಕ್ಕೆ ಕೋಪಗೊಂಡ ರವಿಕುಮಾರ್, 'ಪೊಲೀಸರು ಮಾನವೀಯತೆ ಇಲ್ಲದೆ ವರ್ತಿಸುತ್ತಿದ್ದಾರೆ. ರೈತರ ಕಳವಳವನ್ನು ಹಗುರವಾಗಿ ತೆಗೆದುಕೊಳ್ಳಲಾಗುತ್ತಿದೆ' ಎಂದು ಜೋರಾಗಿ ಕಿಡಿಕಾರಿದರು. ತಕ್ಷಣವೇ ಸಿಎಂ ಸಿದ್ದರಾಮಯ್ಯ ಅವರು ಕಾರು ನಿಲ್ಲಿಸಿ, ರೈತ ಮುಖಂಡರನ್ನು ತಮ್ಮ ಬಳಿ ಕರೆಸಿ ಮಾತುಕತೆ ನಡೆಸಿದರು.

ಈ ವೇಳೆ ಸಿಎಂ ಅವರೇ ರೈತ ಮುಖಂಡನಿಂದ ಮನವಿಯನ್ನು ಸ್ವೀಕರಿಸಿದರು. ಅದಲ್ಲದೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. 

ಬಳಿಕ ರೈತ ಮುಖಂಡನ ನೇತೃತ್ವದಲ್ಲಿ ಹಲವು ರೈತರು ಪ್ರತಿಭಟನೆ ಮುಂದುವರೆಸಿದ್ದು, ಭದ್ರತಾ ಸಿಬ್ಬಂದಿಯ ವಿರೋಧವಾಗಿ ಘೋಷಣೆಗಳನ್ನು ಕೂಗಿದರು. 

Share this Story:

Follow Webdunia kannada

ಮುಂದಿನ ಸುದ್ದಿ

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ