Webdunia - Bharat's app for daily news and videos

Install App

ರಾಜಕಾರಣಿಗಳಿಗೆ ಫಿಟ್‌‍ನೆಸ್ ಇಲ್ಲದಿದ್ರೂ ಪರವಾಗಿಲ್ಲ, ಪೊಲೀಸ್‌ರಿಗೆ ಫಿಟ್‌‍ನೆಸ್ ಅಗತ್ಯ: ಸಿದ್ದರಾಮಯ್ಯ

Webdunia
ಗುರುವಾರ, 20 ಅಕ್ಟೋಬರ್ 2016 (11:28 IST)
ರಾಜಕಾರಣಿಗಳಿಗೆ ಫಿಟ್‌‍ನೆಸ್ ಇರದಿದ್ದರು ಪರವಾಗಿಲ್ಲ. ಆದರೆ, ಪೊಲೀಸ್‌ರಿಗೆ ಫಿಟ್‌‍ನೆಸ್ ಅಗತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ಪಟ್ಟಿದ್ದಾರೆ.
 
ಇಂದು ಬೆಂಗಳೂರಿನ ರಾಜ್ಯಭವನದಲ್ಲಿ 66 ಪೊಲೀಸರಿಗೆ ರಾಜ್ಯಪಾಲ ವಜೂಬಾಯ್ ವಾಲಾ ರಾಷ್ಟ್ರಪತಿ ಪದಕ ನೀಡಿ ಸನ್ಮಾನಿಸಿದರು. ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. 
 
ಈ ವೇಳೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಪೊಲೀಸ್ ಇಲಾಖೆ ಶಿಸ್ತಿನ ಇಲಾಖೆ. ಶಿಸ್ತಿನ ಇಲಾಖೆಯಲ್ಲಿ ಅಶಿಸ್ತಿಗೆ ಅವಕಾಶ ನೀಡಬಾರದು. ಇದರಿಂದ ಇಲಾಖೆಯ ಮೇಲಿನ ನಂಬಿಕೆ ಕಡಿಮೆಯಾಗುತ್ತಾ ಹೋಗುತ್ತದೆ ಎಂದು ಹೇಳಿದರು. 
 
ಪೊಲೀಸ್ ಇಲಾಖೆ ಹಾಗೂ ರಾಜಕಾರಣಿಗಳಿಗೆ ಖಾಸಗಿ ಜೀವನವೇ ಇಲ್ಲ. ಆದರೂ ನಾವು ಈ ವೃತ್ತಿಗೆ ಬಂದಿದ್ದೇವೆ. ಪೊಲೀಸ್ ಇಲಾಖೆಯಲ್ಲಿ ಸದಾ ಒತ್ತಡವಿರುತ್ತದೆ. ಹೀಗಾಗಿ ಪೊಲೀಸ್‌ರಿಗೆ ಫಿಟ್‌‍ನೆಸ್ ಅಗತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪೊಲೀಸರಿಗೆ ಕಿವಿಮಾತು ಹೇಳಿದರು. 


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments