Webdunia - Bharat's app for daily news and videos

Install App

ವಿಧಾನಸಭೆ ಚುನಾವಣೆ: ರೌಡಿಗಳಿಗೆ ಪೊಲೀಸ್ ಇಲಾಖೆ ವಾರ್ನಿಂಗ್

Webdunia
ಶುಕ್ರವಾರ, 23 ಮಾರ್ಚ್ 2018 (14:07 IST)
ವಿಧಾನ ಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಬೆಳ್ಳಂ ಬೆಳಿಗ್ಗೆ ಹುಬ್ಬಳ್ಳಿಯಲ್ಲಿ ಪರೇಡ್ ನಡೆಯಿತು. ಹುಬ್ಬಳ್ಳಿಯ ಸಿಎಆರ್ ಮೈದಾನದಲ್ಲಿ ರೌಡಿಗಳ ಪರೇಡ್ ಮಾಡಿಸಿದ ಹುಬ್ಬಳ್ಳಿ ಧಾರವಾಡ ಪೊಲೀಸರು ಖಡಕ್ ಎಚ್ಚರಿಕೆ ನೀಡಿದರು.‌ 
ಆದ್ರೆ ನಿಜವಾದ ನಟೋರಿಯಸ್, ರೌಡಿ ಶಿಟರ್ ಹಾಗೂ ಗುಂಡಾಗಳು ಇಂದಿನ ಪೇರೆಡ್ ನಲ್ಲಿ ಕಂಡು ಬರಲಿಲ್ಲ. ಕಾಟಾಚಾರಕ್ಕೆ ನಡೆಸಿದ ರೌಡಿ ಪೇರಡ್ ಆದಂತಾಗಿದೆ.  ಇನ್ನೂ ಕೇಲ ದಿನಗಳಲ್ಲಿ ಉಳಿದ ರೌಡಿಗಳಿಗೆ ಸಹ ಖಡಕ್ ಎಚ್ಚರಿಕೆ ನೀಡಲಾಗುವುದು ಎಂದು ಹುಬ್ಬಳ್ಳಿ ಧಾರವಾಡ ಮಹಾನಗರ ಪೊಲೀಸ್ ಆಯುಕ್ತ ಎಂ. ಎನ್. ನಾಗರಾಜ್ ಎಚ್ಚರಿಕೆ ನೀಡಿದರೂ ಸಹ ಇದೊಂದು ಅನುಮಾನಕ್ಕೆ ಎಡೆ ಮಾಡಿಕೊಟ್ಟಿತು.
 
ಡಿಸಿಪಿಗಳಾದ ರೇಣುಕಾ ಸುಕುಮಾರನ್, ಬಿ.ಎಸ್. ನ್ಯಾಮಗೌಡ ನೇತೃತ್ವದಲ್ಲಿ ಪರೇಡ್ ನಡೆಸಿ, ಕಾನೂನು ಸುವ್ಯವಸ್ಥೆ ಧಕ್ಕೆಯಾಗದಂತೆ ನಡೆದುಕೊಳ್ಳಬೇಕು ಎಂದು ಅವಳಿ ನಗರದ ರೌಡಿ ಶೀಟರ್ ಗಳಿಗೆ ಪಾಠ ಮಾಡಿ ಎಚ್ಚರಿಕೆ ನೀಡಿದರು. ಯಾವುದೇ ಅಹಿತಕರ ಘಟನೆಯಲ್ಲಿ ಭಾಗಿಯಾದರೆ ಕಾನೂನು ಪ್ರಕಾರ ಕ್ರಮ ಜರುಗಿಸಬೇಕಾಗುತ್ತದೆ ಎಂದು ಗುಡುಗಿದ ಅವರು ಸುಮಾರು 200 ಕ್ಕೂ ಅಧಿಕ ರೌಡಿಗಳ ಪರೇಡ್ ತೆಗೆದುಕೊಂಡ ಪೊಲೀಸ್ ಆಯುಕ್ತರು ರೌಡಿಗಳಿಗೆ ವಾರ್ನ್ ಮಾಡಿದರು. 
 
ಚುನಾವಣಾ ಸಂದರ್ಭದಲ್ಲಿನ ಪ್ರಕ್ರಿಯೆಯಲ್ಲಿ ಯಾವುದೇ ತೊಂದರೆ ಮಾಡದೆ ಶಾಂತಿಯುತವಾಗಿ ಚುನಾವಣೆ ಯಲ್ಲಿ ಭಾಗವಹಿಸಬೇಕೆಂದು ಸೂಚನೆ ನೀಡಿದರು. ಅಲ್ಲದೆ, ನೀವು ಮತದಾನ ಮಾಡಿ, ಇನ್ನೊಬ್ಬರಿಗೆ ತೊಂದರೆ ಕೊಡಬೇಡಿ. ಅಪರಾಧಗಳ ಆಧಾರದ ಮೇಲೆ ವೈಯಕ್ತಿಕ ಬಾಂಡ್ ನೀಡುವಂತೆ ಸೂಚನೆ ನೀಡಿದರು. ೨ ಲಕ್ಷ ದಿಂದ ೫ ಲಕ್ಷ ರೂಪಾಯಿಗಳ ವರೆಗೂ ಬಾಂಡ್‌ ನೀಡಿ ನಾವು ಯಾವುದೇ ಅಪರಾಧ ಚಟುವಟಿಕೆಯಲ್ಲಿ ಭಾಗಿ ವಹಿಸುವುದಿಲ್ಲ ಎಂದು ಮುಚ್ಚಳಿಕೆ ಬರೆದುಕೊಡಬೇಕು ಎಂದು ತಾಕೀತು ಮಾಡಿದರು. ಮಹಾನಗರ ಪೊಲೀಸ್ ಆಯುಕ್ತ ಎಂ.ಎನ್. ನಾಗರಾಜ ಅವರ ಸೂಚನೆಯಿಂದ ರೌಡಿ ಶಿಟರ್ ಗಳಿಗೆ ನಡುಕ ಉಂಟಾಗಿದ್ದು, ರಾಜಕೀಯ ವಲಯದಲ್ಲಿ ಇದು ಯಾವ ಪರಿಣಾಮ ಬೀರುತ್ತದೆ ಎಂದು ಕಾದು ನೋಡಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ದೇಶ ಬದಲಾಯಿಸಿದ್ದರೆ, ಕಾಂಗ್ರೆಸ್ ಒಡೆದು ಆಳುತ್ತಿದೆ: ಜೆಪಿ ನಡ್ಡಾ

ಛೀ ಇದೆಂಥಾ ಅನಾಚಾರ.. ಚಿಕನ್ ಬಿರಿಯಾನಿ ಬೇಯಿಸುತ್ತಿರುವ ಗಣೇಶನ ಬ್ಯಾನರ್: Video

ಕರ್ನಾಟಕ ಹವಾಮಾನ ವರದಿ: ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ, IMD ನೀಡಿದ ಹೊಸ ಸಿಹಿ ಸುದ್ದಿ

ಉಮರ್ ಖಾಲಿದ್ ದೇಶಭಕ್ತ, ಗಾಡ್ಸೆ ದೇಶದ ಮೊದಲ ಭಯೋತ್ಪಾದಕ: ಬಿಕೆ ಹರಿಪ್ರಸಾದ್

ದೇಶಕ್ಕಿಂತ, ಪಕ್ಷವೇ ಮುಖ್ಯವಾಯ್ತಾ, ಬ್ರಿಕ್ಸ್ ಔತಣಕೂಟಕ್ಕೆ ಕರೆದರೂ ಹೋಗದ ಕಾಂಗ್ರೆಸ್ ಸಿಎಂಗಳ ವಿರುದ್ಧ ಆಕ್ರೋಶ

ಮುಂದಿನ ಸುದ್ದಿ
Show comments