Webdunia - Bharat's app for daily news and videos

Install App

ಮಂಡ್ಯ ಮಗು ಸಾವು ಪ್ರಕರಣದ ಬಳಿಕ ಎಚ್ಚೆತ್ತ ಪೊಲೀಸರು: ಡಿಜಿಪಿ ಎಂ.ಎ.ಸಲೀಂ ಅವರಿಂದ ಹೊರಬಿತ್ತು ಖಡಕ್‌ ಆದೇಶ

Sampriya
ಭಾನುವಾರ, 1 ಜೂನ್ 2025 (13:16 IST)
ಬೆಂಗಳೂರು: ಮೇ 26 ರಂದು  ಮಂಡ್ಯದ ಪೊಲೀಸರ ಎಡವಟ್ಟಿನಿಂದ ಮೂರು ವರ್ಷದ ಕಂದಮ್ಮ ನಡುರಸ್ತೆಯಲ್ಲಿ ಸಾವನ್ನಪ್ಪಿದ ಬೆನ್ನಲ್ಲೇ ಪೊಲೀಸ್‌ ಇಲಾಖೆ ಎಚ್ಚೆತ್ತುಕೊಂಡಿದೆ. ಸಾರ್ವಜನಿಕರ ವಾಹನ ತಪಾಸಣೆಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ  ಹೊಸ ನಿಯಮ ಬಿಡುಗಡೆ ಮಾಡಿದ್ದಾರೆ. 

ಮಂಡ್ಯದಲ್ಲಿ ಮಗು ಸಾವು ಹಾಗೂ ದಾವಣಗೆರೆಯಲ್ಲಿ ಪೊಲೀಸ್ ಸಿಬ್ಬಂದಿಗೆ ಕ್ಯಾಂಟರ್ ಚಾಲಕ ಡಿಕ್ಕಿ ಹೊಡೆದ ಪ್ರಕರಣವನ್ನು ಉಲ್ಲೇಖಿಸಿ ಆದೇಶ ಹೊರಡಿಸಿರುವ ಅವರು, ಸಂಚಾರ ನಿಯಮ ಉಲ್ಲಂಘನೆ ಪ್ರಕರಣ ದಾಖಲಿಸುವ ವೇಳೆ ರಸ್ತೆ ಸುರಕ್ಷತಾ ಕ್ರಮಕ್ಕೆ ಸಂಬಂಧಿಸಿದಂತೆ ಠಾಣಾ ವ್ಯಾಪ್ತಿಯ ಅಧಿಕಾರಿ ಮತ್ತು ಸಿಬ್ಬಂದಿಗೆ ಖಡಕ್ ಸೂಚನೆ ನೀಡಿದ್ದಾರೆ.

ಮದ್ದೂರು ತಾಲೂಕಿನ ಗೊರವನಹಳ್ಳಿಯ ವಾಣಿ-ಅಶೋಕ್ ದಂಪತಿಯ ಪುತ್ರಿ ಹೃತೀಕ್ಷಾ ಮೃತಪಟ್ಟ ಬಾಲಕಿ. ನಾಯಿ ಕಚ್ಚಿದ್ದರಿಂದ ಆಸ್ಪತ್ರೆಗೆ ದಂಪತಿ ಕರೆದುಕೊಂಡು ಬರುತ್ತಿದ್ದರು. ಈ ವೇಳೆ ಹಳೇ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಪೊಲೀಸರು ಹೆಲ್ಮೆಟ್ ತಪಾಸಣೆಗೆ ಬೈಕ್ ಅಡ್ಡಗಟ್ಟಿದ್ದರು. ಈ ವೇಳೆ ಬೈಕ್ ಆಯಾ ತಪ್ಪಿ ಬಿದ್ದು, ಮಗುವಿನ ತಲೆಗೆ ಬಲವಾದ ಪೆಟ್ಟು ಬಿದ್ದು ಸಾವನ್ನಪ್ಪಿತ್ತು.  

ಪೊಲೀಸರ ಎಡವಟ್ಟಿನಿಂದ ಸಾರ್ವಜನಿಕರ ಹಾಗೂ ಪೊಲೀಸರ ಜೀವಕ್ಕೆ ಕುತ್ತು ಉಂಟಾಗುತ್ತಿದೆ. ಹಾಗಾಗಿ ಅಧಿಕಾರಿ ಮತ್ತು ಸಿಬ್ಬಂದಿಗೆ ಕೆಲವು ನಿರ್ದೇಶನಗಳನ್ನು ಪಾಲಿಸುವಂತೆ ಖಡಕ್‌ ಸೂಚನೆ ನೀಡಿದ್ದಾರೆ.

ಆದೇಶದಲ್ಲೇನಿದೆ: ವಾಹನಗಳಿಗೆ ಸಂಬಂಧಪಟ್ಟ ದಾಖಲೆ ಪರೀಕ್ಷಿಸಲು ಸಕಾರಣವಿಲ್ಲದೇ ವಾಹನಗಳನ್ನು ತಡೆದು ತಪಾಸಣೆಗೊಳಪಡಿಸಬಾರದು, ಕಣ್ಣಿಗೆ ಕಾಣುವ ಸಂಚಾರ ನಿಯಮ ಉಲ್ಲಂಘನೆಗಳು ಕಂಡುಬಂದಲ್ಲಿ ಮಾತ್ರವೇ ಅಂತಹ ವಾಹನಗಳನ್ನು ನಿಲ್ಲಿಸಿ ಪ್ರಕರಣಗಳನ್ನು ದಾಖಲಿಸಬೇಕು. ಪ್ರಕರಣಗಳನ್ನು ದಾಖಲಿಸುವಾಗ ಈ ಕೆಳಕಂಡ ಅಂಶಗಳನ್ನು ಗಮನದಲ್ಲಿಟ್ಟುಕೊಳ್ಳಬೇಕು ಎಂದು ಸೂಚಿಸಿಲಾಗಿದೆ. 

ಹೆದ್ದಾರಿಗಳಲ್ಲಿ ಜಿಗ್ ಜಾಗ್ ಮಾದರಿಯಲ್ಲಿ ಬ್ಯಾರಿಕೇಡ್ ಹಾಕಿ ವಾಹನಗಳನ್ನು ತಡೆಯಬಾರದು. ರಸ್ತೆಯಲ್ಲಿ ದಿಢೀರನೇ ಅಡ್ಡಬಂದು ವಾಹನ ನಿಲ್ಲಿಸುವಂತೆ ಹೇಳಬಾರದು.

ದ್ವಿಚಕ್ರ ವಾಹನ ಹಿಂಬದಿ ಸವಾರನನ್ನು ಹಿಡಿದು ಎಳೆಯುವುದು ಹಾಗೂ ವಾಹನಗಳ ಕೀಲಿಕೈ ತೆಗೆದುಕೊಳ್ಳುವುದನ್ನು ಮಾಡಬಾರದು.

ವೇಗವಾಗಿ ಚಲಾಯಿಸಿಕೊಂಡು ಬರುವ ವಾಹನ ಸವಾರರನ್ನು ಹಿಡಿಯಲು ಅವರನ್ನು ಬೆನ್ನಟ್ಟದೇ ಆ ವಾಹನಗಳ ನೋಂದಣಿ ಸಂಖ್ಯೆಯನ್ನು ಗುರುತು ಮಾಡಿಕೊಂಡು ಜಿಲ್ಲಾ ಪೊಲೀಸ್ ಠಾಣಾ ಸರಹದ್ದುಗಳ ವಿವಿಧ ನಿಯಂತ್ರಣ ಕೋಣೆಗಳಿಗೆ ಮಾಹಿತಿ ರವಾನಿಸಿ, ಸದರಿ ವಾಹನ ಸವಾರರನ್ನು ಪತ್ತೆಹಚ್ಚಿ ಪ್ರಕರಣ ದಾಖಲಿಸಬೇಕು.

ಸಂಚಾರ ನಿಯಮ ಉಲ್ಲಂಘನೆದಾರರ ವಿರುದ್ಧ ಭೌತಿಕವಾಗಿ ಪ್ರಕರಣ ದಾಖಲಿಸುವಾಗ ಅಥವಾ ವಾಹನಗಳ ತಪಾಸಣೆ ಮಾಡುವ ಸಂದರ್ಭದಲ್ಲಿ ಪೊಲೀಸರು ತಮ್ಮ ಸುರಕ್ಷತೆಗಾಗಿ ರಿಫ್ಲೆಕ್ಟಿವ್‌ ಜಾಕೆಟ್‌ ಗಳನ್ನು ಧರಿಸಬೇಕು. ಸಂಜೆ ವೇಳೆಯಲ್ಲಿ ಕಡ್ಡಾಯವಾಗಿ ಎಲ್​​ಇಡಿ ಬಟನ್​​ಗಳನ್ನು ಉಪಯೋಗಿಸಬೇಕು ಹಾಗೂ ವಾಹನಗಳನ್ನು ತಪಾಸಣೆ ಮಾಡುವ ಸಂದರ್ಭದಲ್ಲಿ ಕಡ್ಡಾಯವಾಗಿ ಬಾಡಿವೋರ್ನ್ ಕ್ಯಾಮರಾ ಧರಿಸಬೇಕು.

ಟ್ರಾಫಿಕ್ ಮ್ಯಾನೇಜ್ ಮೆಂಟ್ ಸೆಂಟರ್ (ಟಿಎಂಸಿ) ಅಥವಾ ಇಂಟಲಿಜೆಂಟ್ ಟ್ರಾಫಿಕ್ ಮ್ಯಾನೇಜ್ ಮೆಂಟ್ ಸಿಸ್ಟಂ (ಐಟಿಎಂಎಸ್) ಹೊಂದಿರುವ ಘಟಕಗಳಲ್ಲಿ ಆದಷ್ಟು ಸಂಪರ್ಕ ರಹಿತ ಪ್ರಕರಣಗಳನ್ನು ದಾಖಲಿಸಬೇಕು.

ಅನಾಹುತಗಳನ್ನು ತಪ್ಪಿಸಲು ಎಲ್ಲಾ ಘಟಕಗಳಲ್ಲೂ ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡುವ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಕಾಲಕಾಲಕ್ಕೆ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಬೇಕು.

ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿ ಹಾಗೂ ಇತರೆ ರಸ್ತೆಗಳಲ್ಲಿ ಯಾವುದೇ ಕಾರಣಕ್ಕೂ ಅತಿ ವೇಗವಾಗಿ ಚಲಿಸುವ ವಾಹನಗಳನ್ನು ತಡೆಯುವ ಪ್ರಯತ್ನ ಮಾಡಬಾರದು ಹಾಗೂ ಇಂತಹ ವಾಹನಗಳ ವಿರುದ್ಧ ಎಫ್.ಟಿ.ವಿ.ಆರ್ ದಾಖಲಿಸಲು ತಂತ್ರಜ್ಞಾನ ಅನುಸರಿಸಬೇಕು.

ವಾಹನಗಳ ವೇಗವನ್ನು ಇಳಿಸುವ ಸಲುವಾಗಿ, ತಪಾಸಣೆಯ ಸ್ಥಳದ ಸುಮಾರು 100 ರಿಂದ 150 ಮೀಟರ್ ಮೊದಲೇ ರಿಫೆಕ್ಟಿವ್ ರಬ್ಬರ್ ಕೋನ್‌ಗಳನ್ನು ಹಾಗೂ ಸುರಕ್ಷತಾ ಸಲಕರಣಿಗಳನ್ನು ಅಳವಡಿಕೆ, ರಾತ್ರಿ ಮತ್ತು ತಡರಾತ್ರಿಯ ಸಂದರ್ಭದಲ್ಲಿ ಸಂಚಾರ ಸಿಗ್ನಲ್ ದೀಪಗಳಿರುವ ಅಥವಾ ಜಂಕ್ಷನ್ ಗಳ ಬದಿಯಲ್ಲೇ ವಾಹನಗಳನ್ನು ತಪಾಸಣೆ ಮಾಡಬೇಕು.

ಕಾನೂನು ಮತ್ತು ಸುವ್ಯವಸ್ಥೆ ಪೊಲೀಸರು ನಡೆಸುವ ನಾಕಾಬಂಧಿ ಪ್ರಕ್ರಿಯೆಗಳನ್ನು ಸಾಧ್ಯವಾದಷ್ಟು ಹೆದ್ದಾರಿಗಳಲ್ಲಿ ನಡೆಸಬಾರದು. ತಪಾಸಣೆಯ ಸಂದರ್ಭದಲ್ಲಿ ಇಂತ ಕಾನೂನು ಸುವ್ಯವಸ್ಥೆ ಪೊಲೀಸರ ನೆರವು ಪಡೆಯಬೇಕು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bakrid ಹಿನ್ನೆಲೆ: ಬೆಂಗಳೂರು ರಸ್ತೆ ಬದಿ ಕುರಿ ಬೆಲೆ ಕೇಳಿದ್ರೇ ಶಾಕ್ ಆಗ್ತೀರಿ, Video

Operation Sindoor: ವಿವಾದಾತ್ಮಕ ಪೋಸ್ಟ್ ಬೆನ್ನಲ್ಲೇ ಗುಜರಾತ್‌ ಕಾಂಗ್ರೆಸ್‌ ನಾಯಕ ರಾಜೇಶ್ ಸೋನಿ ಅರೆಸ್ಟ್‌

ತುಂಡು ಬಟ್ಟೆ ನಮ್ಮ ಸಂಸ್ಕೃತಿಯಲ್ಲ, ನಾನು ಒಪ್ಪಲ್ಲ: ಬಿಜೆಪಿ ನಾಯಕ ಕೈಲಾಶ್‌

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

ಮುಂದಿನ ಸುದ್ದಿ
Show comments