Webdunia - Bharat's app for daily news and videos

Install App

ಗೌರಿ ಹತ್ಯೆ ಹೇಳಿಕೆ ವಿವಾದ: ಬಿಜೆಪಿ ಶಾಸಕ ಜೀವರಾಜ್ ವಿರುದ್ಧ ದೂರು ದಾಖಲು

Webdunia
ಶುಕ್ರವಾರ, 8 ಸೆಪ್ಟಂಬರ್ 2017 (13:16 IST)
ಪತ್ರಕರ್ತ ಗೌರಿ ಲಂಕೇಶ್ ಹತ್ಯೆಗೆ ಸಂಬಂಧಿಸಿದಂತೆ ನೀಡಿದ ವಿವಾದಾತ್ಮಕ ಟೀಕೆಗಳಿಗಾಗಿ ಬಿಜೆಪಿ ಶೃಂಗೇರಿ ಶಾಸಕ ಡಿ ಎನ್ ಜೀವರಾಜ್ ವಿರುದ್ಧ ಹಲವು ಸಂಘಟನೆಗಳು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿವೆ.
ಕೊಪ್ಪ ಪಟ್ಟಣದಲ್ಲಿ ಬಿಜೆಪಿ ಯುವ ಮೋರ್ಚಾದ ಮಂಗಳೂರು ಚಲೋ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಸಕ ಜೀವರಾಜ್, ಗೌರಿ ಲಂಕೇಶ್ ತಮ್ಮ ಪತ್ರಿಕೆಯಲ್ಲಿ ಚಡ್ಡಿಗಳ ಮಾರಣಹೋಮ ಎನ್ನುವ ಶಬ್ದಗಳನ್ನು ಬಳಸದಿದ್ದಲ್ಲಿ ಜೀವಂತವಾಗಿರುತ್ತಿದ್ದರು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.  
 
ತಾಲೂಕು ರೈತ ಸಂಘದ ಅಧ್ಯಕ್ಷ ನವೀನ್ ಕರುವಾನೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿ, ಬಿಜೆಪಿ ಸರಕಾರ ಅಧಿಕಾರದಲ್ಲಿದ್ದಾಗ ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಸಟಿವರಾಗಿದ್ದ ಜೀವರಾಜ್‌ ವಿರುದ್ಧದ ಭ್ರಷ್ಟಾಚಾರಗಳನ್ನು ಗೌರಿ ಲಂಕೇಶ್ ಬಹಿರಂಗಗೊಳಿಸಿದ್ದರು. ಆದ್ದರಿಂದ ಸೇಡು ತೀರಿಸಿಕೊಳ್ಳಲು ಶಾಸಕ ಜೀವರಾಜ್, ಗೌರಿ ಲಂಕೇಶ್ ಹತ್ಯೆ ಮಾಡಿರಬಹುದು ಎನ್ನುವ ಶಂಕೆ ನನ್ನನ್ನು ಕಾಡುತ್ತಿದೆ. ಆದ್ದರಿಂದ ತನಿಖೆ ನಡೆಸುವುದು ಅಗತ್ಯವಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. 
 
ರೈತ ಸಂಘದ ಅಧ್ಯಕ್ಷ ನವೀನ್ ಕರುವಾನೆ ಸಲ್ಲಿಸಿದ ದೂರನ್ನುಗೌರಿ ಹತ್ಯೆಗೆ ಸಂಬಂಧಿಸಿದ ದೂರು ದಾಖಲಾಗಿರುವ ಬೆಂಗಳೂರಿನ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ ಎಂದು ಕೊಪ್ಪ ಪೊಲೀಸ್ ಠಾಣೆಯ ಅಧಿಕಾರಿ ಡಿ.ಎನ್.ಕುಮಾರ್ ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy stampede: ವಿರಾಟ್ ಕೊಹ್ಲಿ ಸ್ನೇಹಿತನ ಭವಿಷ್ಯ ಇಂದು ನಿರ್ಧಾರ

Funny video: ಗೆಜ್ಜೆ ಕಟ್ಟಿಸಲು ಆಟ ಆಡಿಸಿದ ವಧು, ಕೊನೆಗೆ ಆಗಿದ್ದೇನು

Karnataka Weather: ಎರಡು ದಿನಗಳಿಗೆ ಮಳೆ ಜೋರು, ಈ ಜಿಲ್ಲೆಗಳಿಗೆ ರೆಡ್ ಅಲರ್ಟ್

Indore Raja Raghuvanshi murder: ಇದೊಂದು ಕೆಲಸವಾದ ಮೆಲೆ ಫಸ್ಟ್ ನೈಟ್ ಮಾಡಿಕೊಳ್ಳೋಣ ಎಂದಿದ್ದ ಸೋನಂ

Raghuvanshi Murder Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments