Webdunia - Bharat's app for daily news and videos

Install App

ಮಂಗಳೂರು ಹಳೆ ವಿಮಾನ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಆಕ್ರಮವಾಗಿ ಪ್ರವೇಶ

Webdunia
ಮಂಗಳವಾರ, 6 ಜುಲೈ 2021 (19:21 IST)
ಮಂಗಳೂರು ಹಳೆ ವಿಮಾನ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಸೋಮವಾರ ರಾತ್ರಿ ಕಂಡು ಬಂದಿದ್ದು, ವಿಮಾನ ನಿಲ್ದಾಣದೊಳಗೆ ಅಕ್ರಮವಾಗಿ ಪ್ರವೇಶಿಸಿದ್ದಾನೆ ಎಂಬ ಆರೋಪಡಿ ಪ್ರಕರಣ ದಾಖಲು ಮಾಡಲಾಗಿದೆ ಎಂದು ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ.
ಸೋಮವಾರ ರಾತ್ರಿ ಸುಮಾರು 11 ಗಂಟೆಗೆ ಸಿಐಎಸ್‌ಎಫ್ ಸಿಬ್ಬಂದಿಯು ಗಸ್ತು ತಿರುಗುತ್ತಿದ್ದಾಗ ರನ್‌ವೇ ಕಾಮಗಾರಿ ನಡೆಯುತ್ತಿದ್ದ ಹಳೆಯ ವಿಮಾನ ನಿಲ್ದಾಣದ ಎಟಿಎಸ್ ವಿಭಾಗದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಕಂಡು ಬಂದಿದ್ದ. ಆತನನ್ನು ಹಿಡಿದು ವಿಚಾರಿಸಿದಾಗ ತನ್ನ ಹೆಸರು ರಾಕೇಶ್, ಬಧುಹಾ ಗ್ರಾಮ, ಮುರ್ಸಿದಾಬಾದ್ ಪಶ್ಚಿಮ ಬಂಗಾಳ ಎಂದು ತಿಳಿಸಿದ್ದ.
ತಾನು ಲಾರಿಯಲ್ಲಿ ಕ್ಲೀನರ್ ಆಗಿ ಕೆಲಸ ಮಾಡಿಕೊಂಡಿದ್ದು, ಲಾರಿ ಚಾಲಕ ತನಗೆ ಸಂಬಳ ನೀಡದೆ ಬಿಟ್ಟು ಹೋಗಿದ್ದು ದಾರಿ ಕಾಣದೆ ವಿಮಾನ ನಿಲ್ದಾಣ ಎಂದೂ ತಿಳಿಯದೇ ಈ ಕಡೆ ಬಂದಿರುವೆ ಎಂದಿದ್ದಾನೆ. ಆ ಬಳಿಕ ಮಂಗಳೂರು ವಿಮಾನ ನಿಲ್ದಾಣದ ಸಿಐಎಸ್‌ಎಫ್ ಯುನಿಟ್‌ನ ನಿರೀಕ್ಷಕ ಪ್ರಮೋದ್ ಕುಮಾರ್ ವಿಚಾರಣೆ ನಡೆಸಿ ನಂತರ ಬಜ್ಪೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಅದರಂತೆ ನಿಷೇಧಿತ ಪ್ರದೇಶಕ್ಕೆ ಅಕ್ರಮ ಪ್ರವೇಶ ಮಾಡಿದ ಆರೋಪದ ಮೇಲೆ ಬಜ್ಪೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments