Publish Date: Sat, 12 May 2018 (06:50 IST)
Updated Date: Sat, 12 May 2018 (06:51 IST)
ಬೆಂಗಳೂರು: ಇಂದು ವಿಧಾನಸಭೆ ಚುನಾವಣೆ ನಡೆಯುತ್ತಿದ್ದು, ರಾಜ್ಯಾದ್ಯಂತ ಶಾಂತಿಯುತ ಮತದಾನಕ್ಕೆ ರಾಜ್ಯ ಪೊಲೀಸ್ ಪಡೆ ಸಕಲ ರೀತಿಯಲ್ಲಿ ಸಜ್ಜಾಗಿದೆ.
ರಾಜ್ಯಾದ್ಯಂತ 1 ಲಕ್ಷಕ್ಕೂ ಅಧಿಕ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ. ಆರ್ ಎಎಫ್ ಸಿಬ್ಬಂದಿಗಳ ಮೂಲಕ ಮತಗಟ್ಟೆಗಳಿಗೆ ಬಿಗಿ ಭದ್ರತೆ ಒದಗಿಸಲಾಗುತ್ತಿದೆ.
22 ಸಾವಿರ ಮತಗಟ್ಟೆಗಳನ್ನು ಸೂಕ್ಷ್ಮ ಮತಗಟ್ಟೆಗಳು ಎಂದು ಗುರುತಿಸಲಾಗಿದ್ದು, ಇಲ್ಲಿ ವಿಶೇಷ ಭದ್ರತೆ ಇರಲಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ರಾಜ್ಯ ಪೊಲೀಸರು ಸಕಲ ರೀತಿಯಲ್ಲಿ ಸನ್ನದ್ಧರಾಗಿದ್ದಾರೆ ಎಂದು ಡಿಜಿಪಿ ನೀಲಮಣಿ ರಾಜು ಮಾಹಿತಿ ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.