Webdunia - Bharat's app for daily news and videos

Install App

ಪೊಲೀಸ್ ಪ್ರತಿಭಟನೆ: ಶಿಸ್ತು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಗ್ಯಾರೆಂಟಿ ಎಂದ ಸಿಎಂ

Webdunia
ಮಂಗಳವಾರ, 31 ಮೇ 2016 (19:34 IST)
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಜೂನ್ 4 ರಂದು, ರಾಜ್ಯಾದ್ಯಂತ ಪೊಲೀಸರು ಕೈಗೊಂಡಿರುವ ಸಾಮೂಹಿಕ ಪ್ರತಿಭಟನೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಗೃಹ ಕಛೇರಿಯಲ್ಲಿ ಮಹತ್ವದ ಸಭೆ ನಡೆಯಿತು.
 
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಈ ಸಭೆಯಲ್ಲಿ ಗೃಹ ಸಚಿವ ಜಿ.ಪರಮೇಶ್ವರ್ ಸೇರಿದಂತೆ ಡಿಜಿ-ಐಜಿಪಿ, ಬೆಂಗಳೂರು ನಗರ ಪೊಲೀಸ್ ಆಯುಕ್ತರು ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳು ಪಾಲ್ಗೊಂಡಿದ್ದರು.
 
ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾನ್ಯತೆಯೇ ಪಡೆಯದ ಸಂಘಟನೆ ರಾಜ್ಯದ್ಯಂತ ಪೊಲೀಸ ಪ್ರತಿಭಟನೆಗೆ ಕರೆ ನೀಡಿದೆ. ಪೊಲೀಸ್ ಇಲಾಖೆ ಶಿಸ್ತಿನ ಇಲಾಖೆ. ಸಾರ್ವಜನಿಕರ ಆಸ್ತಿ, ಮಾನ, ಪ್ರಾಣ ಕಾಪಾಡುವಂತಹ ಮಹತ್ವದ ಜವಾಬ್ದಾರಿ ಇರುವಂತಹ ಇಲಾಖೆ. ಇಂತಹ ಶಿಸ್ತಿನ ಇಲಾಖೆ ಅಶಿಸ್ತಿನಿಂದ ವರ್ತಿಸಬಾರದು ಎಂದು ಸಲಹೆ ನೀಡಿದರು.
 
ಇಲಾಖೆಯಲ್ಲಿ ಪ್ರತಿಭಟನೆಗೆ ಚಳುವಳಿಗೆ ಅವಕಾಶವಿಲ್ಲ. ಬಿಜೆಪಿ ಮುಖಂಡರು ಹಿಂದೆ ಸರಕಾರ ನಡೆಸಿದವರಾಗಿದ್ದರೂ ಪ್ರತಿಭಟನೆಗೆ ಪ್ರಚೋದನೆ ನೀಡುತ್ತಿರುವುದು ಸರಿಯಲ್ಲ. ಪ್ರಚೋದನೆ ನೀಡುವವರು ಯಾರೇ ಆಗಿರಲಿ ಅವರ ವಿರುದ್ಧ ಕಠಿಣ ಕ್ರಮ ಖಚಿತ ಎಂದು ಗುಡುಗಿದ್ದಾರೆ.
 
ಸೂಕ್ತ ಸಮಯದಲ್ಲಿ ಸೂಕ್ತ ಕ್ರಮ ಕೈಗೊಳ್ಳುವುದು ಖಚಿತ. ಸಮಸ್ಯೆಗಳಿದ್ದರೆ ಸರಕಾರದೊಂದಿಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳುವುದು ಸೂಕ್ತ. ಸರಕಾರ ಪೊಲೀಸರ ಸಮಸ್ಯೆಗಳ ಬಗ್ಗೆ ಚರ್ಚಿಸಲು ಮುಕ್ತ ಮನಸ್ಸು ಹೊಂದಿದೆ ಎಂದು ತಿಳಿಸಿದ್ದಾರೆ. 
 
ಒಂದು ವೇಳೆ, ರಾಜ್ಯ ಪೊಲೀಸರು ಸಾಮೂಹಿಕ ರಜೆ ಹಾಕುವ ಮೂಲಕ ಜೂನ್ 4 ರಂದು ಪ್ರತಿಭಟನೆ ಕೈಕೊಂಡರೆ, ಅಂತವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನಕ್ಕೆ ಡಿಕ್ಕಿ ಹೊಡೆದ ಹಕ್ಕಿ, ತಪ್ಪಿದ ಅವಘಡ‌

ಜಗನ್ನಾಥನ ದರ್ಶನಕ್ಕಾಗಿ ಡೊನಾಲ್ಡ್‌ ಟ್ರಂಪ್ ಆಹ್ವಾನವನ್ನೇ ತಿರಸ್ಕರಿಸಿದೆ: ನರೇಂದ್ರ ಮೋದಿ

ಹೀಗಾದ್ರೆ ಯುವಕರ ಕತೆ ಏನು, ಮಗನಿಗೆ ನಿಶ್ಚಿಯವಾಗಿದ್ದ ಯುವತಿಯನ್ನೇ ಕೈಹಿಡಿದ ತಂದೆ

ಕ್ರೈಸ್ತ ಧರ್ಮಕ್ಕೆ ಮತಾಂತರವಾದರೆ ಆರೋಗ್ಯದಲ್ಲಿ ಚೇತರಿಕೆ: ಮಹಿಳೆಗೆ ಒತ್ತಡ, ದೂರು

ಏರ್‌ ಇಂಡಿಯಾ ದುರಂತದ ಬಳಿಕ ವಿಮಾನದಲ್ಲಿ ಈ ಸೀಟಿಗಾಗಿ ಹೆಚ್ಚಿದ ಬೇಡಿಕೆ

ಮುಂದಿನ ಸುದ್ದಿ
Show comments