Webdunia - Bharat's app for daily news and videos

Install App

ರಾಜ್ಯಾದ್ಯಂತ ಪೊಲೀಸ್ ಪ್ರತಿಭಟನೆ: ನೀರಸ ಪ್ರತಿಕ್ರಿಯೆ

Webdunia
ಶನಿವಾರ, 4 ಜೂನ್ 2016 (10:42 IST)
ರಾಜ್ಯಾದ್ಯಂತ ಭಾರಿ ಸುದ್ದಿ ಮಾಡಿರರುವ ಪೊಲೀಸ ಸಾಮೂಹಿಕ ಪ್ರತಿಭಟನೆಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.
 
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಪೊಲೀಸ್ ಮಹಾ ಸಂಘದ ಅಧ್ಯಕ್ಷ ಶಶಿಧರ್ ಅವರು ಇಂದು ರಾಜ್ಯಾದ್ಯಂತ ಪೊಲೀಸರು ಸಾಮೂಹಿಕವಾಗಿ ರಜೆ ಹಾಕುವ ಮೂಲಕ ಪ್ರತಿಭಟನೆಗೆ ಕರೆ ನೀಡಿದ್ದರು. ಈ ಪ್ರತಿಭಟನೆಗೆ ಸಾಕಷ್ಟು ಪರ ವಿರೋಧ ಚರ್ಚೆಯಾಗಿತ್ತು.
 
ಸಾಕಷ್ಟು ಸಂಘ ಸಂಸ್ಥೆಗಳು ಪ್ರತಿಭಟನೆಗೆ ಸಾಥ ನೀಡಿದ್ದರು ಸಹ ಇಂದು ಪೊಲೀಸರ ಪ್ರತಿಭಟನೆಗೆ ನಿರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಎಂದಿನಂತೆ ಪೊಲೀಸರು ಕರ್ತವ್ಯಕೆ ಹಾಜರಾಗಿದ್ದಾರೆ.
 
ರಾಜ್ಯದ ಇತಿಹಾಸದಲ್ಲಿ ಪ್ರಪ್ರಥಮ ಭಾರಿಗೆ ಪೊಲೀಸರು ಕೈಗೊಂಡಿದ್ದ ಪ್ರತಿಭಟನೆಯನ್ನು ರಾಜ್ಯ ಸರಕಾರ ಹತ್ತಿಕ್ಕಲು ಪ್ರಯತ್ನಿಸಿದ್ದು, ಕಳೆದ ಎರಡು ದಿನದ ಹಿಂದೆ ಪ್ರತಿಭಟನೆಗೆ ಕರೆ ನೀಡಿದ್ದ ಶಶಿಧರ್ ಅವರನ್ನು ಬಂಧಿಸಿ 14 ದಿನಗಳವರೆಗೂ ನ್ಯಾಯಾಂಗ ವಶಕ್ಕೆ ಪಡೆಯಲಾಗಿತ್ತು.
 
ನಿನ್ನೆ ಬೆಂಗಳೂರಿನಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಗೃಹ ಸಚಿವ ಜಿ.ಪರಮೇಶ್ವರ್, ಪೊಲೀಸ್ ಕ್ವಾಟರ್ಸ್‌ನಲ್ಲಿರುವ ಪೊಲೀಸ್ ಕುಟುಂಬಗಳು ಪ್ರತಿಭಟನೆಯಲ್ಲಿ ಭಾಗಿಯಾದರೆ ಅವರ ಕ್ವಾಟರ್ಸ್‌ನ್ನು ಖಾಲಿ ಮಾಡಿಸುವುದಲ್ಲದೇ ಅವರನ್ನು ಸೇವೆಯಿಂದ ವಜಾಗೊಳಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದರು.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2029 ರಲ್ಲಿ ಕೇಂದ್ರದಲ್ಲಿ ನಾವು ಬಂದಾಗ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

ಮುಂದಿನ ಸುದ್ದಿ
Show comments