Webdunia - Bharat's app for daily news and videos

Install App

ಯಡಿಯೂರಪ್ಪ ಪಿಎ ಸಂತೋಷ್ ಬಂಧನಕ್ಕೆ ಬಲೆ ಬೀಸಿದ ಪೊಲೀಸರು

Webdunia
ಸೋಮವಾರ, 17 ಜುಲೈ 2017 (13:04 IST)
ಬಿಜೆಪಿ ಮುಖಂಡ ಈಶ್ವರಪ್ಪ ಪಿಎ ವಿನಯ್ ಅಪಹರಣ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಬಂಧಿಸಿದಂತೆ ಯಡಿಯೂರಪ್ಪ ಪಿಎ ಸಂತೋಷ್ ಬಂಧನಕ್ಕೆ ಪೊಲೀಸರು ಮುಂದಾಗಿದ್ದಾರೆ.

ತುಮಕೂರು ಜಿಲ್ಲೆಯ ನೊಣವಿನಕೆರೆಯಲ್ಲಿರುವ ಯಡಿಯೂರಪ್ಪ ಪಿಎ ಸಂತೋಷ್ ಅವರ ಮನೆಗೂ ಭೇಟಿ ನೀಡಿರುವ ಪೊಲೀಸರು ಮನೆ ಮುಂದೆ ನೋಟಿಸ್ ಅಂಟಿಸಿ ಬಂದಿದ್ದಾರೆ. ಮಹಾಲಕ್ಷ್ಮೀ ಪುರಂ ಠಾಣೆಗೆ ವಿಚಾರಣೆಗೆ ಹಾಜರಾಗುವಂತೆ ನೊಟಿಸ್ ಅಂಟಿಸಿದ್ದಾರೆ ಎಂದು ತಿಳಿದುಬಂದಿದೆ.

ಇತ್ತ, ಬಂಧನ ಭೀತಿ ಎದುರಿಸುತ್ತಿರುವ ಬಿಎಸ್`ವೈ ಪಿಎ ಸಂತೋಷ್ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ಈ ಬಗ್ಗೆ ನವದೆಹಲಿಯಲ್ಲಿ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಯಡಿಯೂರಪ್ಪ, ರಾಜಕೀಯ ಉದ್ದೇಶದಿಂದ ನನ್ನ ಪಿಎ ಸಂತೋಷ್ ಬಂಧನಕ್ಕೆ ಷಡ್ಯಂತ್ರ ನಡೆಯುತ್ತಿದೆ. ಸರ್ಕಾರದ ವಿರುದ್ಧ ನಾನು ಟೀಕೆ ಮಾಡುತ್ತಿರುವುದರಿಂದ ನಿರಪರಾಧಿಯಾದ ಸಂತೋಷ್ ಬಂಧನಕ್ಕೆ ಮುಂದಾಗಿದ್ದಾರೆ. ಸಂತೋಷ್`ಗಾಗಿ ನನ್ನ ಮನೆಗೂ ಆಗಮಿಸಿದ್ದ ಪೊಲೀಸರು ಹುಡುಕಾಟ ನಡೆಸಿದ್ದರು ಎಂದು ಯಡಿಯೂರಪ್ಪ ತಿಳಿಸಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments